<p><strong>ಮೈಸೂರು:</strong> ಸ್ವಚ್ಛ ಸರ್ವೇಕ್ಷಣ 2025-26ರ ಅಂಗವಾಗಿ ಮಹಾನಗರಪಾಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಪರಿಸರ ಜಾಗೃತಿ ಹಾಗೂ ನಾಗರಿಕ ಜವಾಬ್ದಾರಿ ಪ್ರಜ್ಞೆ ಉತ್ತೇಜಿಸುವ ಉದ್ದೇಶದಿಂದ ಜ.31ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ವಿನೋಬಾ ರಸ್ತೆಯ ಕಲಾಮಂದಿರದಲ್ಲಿ ‘ಸ್ವಚ್ಛ ಮೈಸೂರು ರಸಪ್ರಶ್ನೆ’ ಕಾರ್ಯಕ್ರಮ ಆಯೋಜಿಸಲಾಗಿದೆ.</p><p>7ರಿಂದ 9ನೇ ತರಗತಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. </p><p>ನಗರ ಪಾಲಿಕೆ, ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮೈಸೂರು ವಿಶ್ವವಿದ್ಯಾಲಯ ಹಾಗೂ ಎಕ್ಸೆಲ್ ಪಬ್ಲಿಕ್ ಶಾಲೆ ಸಹಯೋಗದಲ್ಲಿ ನಡೆಸಲಾಗುತ್ತಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆ/ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದಾಗದೆ.</p><p>ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ, ಬಳಕೆಯ ನೀರಿನ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಉಪಕ್ರಮಗಳು ರಸಪ್ರಶ್ನೆಯ ವಿಷಯಗಳಾಗಿವೆ. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು. ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರವನ್ನು ವಿತರಿಸಲಾಸಗುವುದು.</p><p>ಒಂದು ಶಾಲೆ/ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಅವಕಾಶ. ಜ.25ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 90367 16494/ 77609 54056 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಸ್ವಚ್ಛ ಸರ್ವೇಕ್ಷಣ 2025-26ರ ಅಂಗವಾಗಿ ಮಹಾನಗರಪಾಲಿಕೆಯಿಂದ ವಿದ್ಯಾರ್ಥಿಗಳಲ್ಲಿ ಸ್ವಚ್ಛತೆ, ಪರಿಸರ ಜಾಗೃತಿ ಹಾಗೂ ನಾಗರಿಕ ಜವಾಬ್ದಾರಿ ಪ್ರಜ್ಞೆ ಉತ್ತೇಜಿಸುವ ಉದ್ದೇಶದಿಂದ ಜ.31ರಂದು ಬೆಳಿಗ್ಗೆ 10ಕ್ಕೆ ಇಲ್ಲಿನ ವಿನೋಬಾ ರಸ್ತೆಯ ಕಲಾಮಂದಿರದಲ್ಲಿ ‘ಸ್ವಚ್ಛ ಮೈಸೂರು ರಸಪ್ರಶ್ನೆ’ ಕಾರ್ಯಕ್ರಮ ಆಯೋಜಿಸಲಾಗಿದೆ.</p><p>7ರಿಂದ 9ನೇ ತರಗತಿ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಳ್ಳಬಹುದು. </p><p>ನಗರ ಪಾಲಿಕೆ, ಶಾಲಾ ಶಿಕ್ಷಣ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಮೈಸೂರು ವಿಶ್ವವಿದ್ಯಾಲಯ ಹಾಗೂ ಎಕ್ಸೆಲ್ ಪಬ್ಲಿಕ್ ಶಾಲೆ ಸಹಯೋಗದಲ್ಲಿ ನಡೆಸಲಾಗುತ್ತಿದೆ. ರಸಪ್ರಶ್ನೆ ಸ್ಪರ್ಧೆಯಲ್ಲಿ ಶಾಲೆ/ಕಾಲೇಜಿನಿಂದ ಇಬ್ಬರು ವಿದ್ಯಾರ್ಥಿಗಳ ಒಂದು ತಂಡ ಭಾಗವಹಿಸಬಹುದಾಗದೆ.</p><p>ಸ್ವಚ್ಛ ಭಾರತ ಮಿಷನ್, ಘನತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ, ಬಳಕೆಯ ನೀರಿನ ನಿರ್ವಹಣೆ ಹಾಗೂ ವಿವಿಧ ಸ್ವಚ್ಛತಾ ಉಪಕ್ರಮಗಳು ರಸಪ್ರಶ್ನೆಯ ವಿಷಯಗಳಾಗಿವೆ. ವಿಜೇತರಿಗೆ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ನೀಡಲಾಗುವುದು. ಪಾಲ್ಗೊಂಡ ಎಲ್ಲ ವಿದ್ಯಾರ್ಥಿಗಳಿಗೂ ಪ್ರಮಾಣಪತ್ರವನ್ನು ವಿತರಿಸಲಾಸಗುವುದು.</p><p>ಒಂದು ಶಾಲೆ/ಕಾಲೇಜಿನಿಂದ ಒಂದು ತಂಡಕ್ಕೆ ಮಾತ್ರ ಅವಕಾಶ. ಜ.25ರೊಳಗೆ ಹೆಸರು ನೋಂದಾಯಿಸಬೇಕು. ಹೆಚ್ಚಿನ ಮಾಹಿತಿಗೆ ಮೊ.ಸಂ. 90367 16494/ 77609 54056 ಸಂಪರ್ಕಿಸಬಹುದು ಎಂದು ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>