<p><strong>ಮೈಸೂರು</strong>: ‘ಸ್ವಾಮಿ ವಿವೇಕಾನಂದ ಆಧ್ಯಾತ್ಮಿಕ ಚಿಂತಕರು ಮಾತ್ರವಲ್ಲದೆ, ಯುವಜನರ ಸ್ಫೂರ್ತಿಯ ಸೆಲೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಆರ್.ತಿಮ್ಮೇಗೌಡ ಹೇಳಿದರು.</p>.<p>ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ರಾಷ್ಟ್ರೀಯ ಯುವ ದಿನದ ಅಂಗವಾಗಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ‘ಸ್ವಾಮಿ ವಿವೇಕಾನಂದರ ಚಿಂತನೆಗಳು- ಒಂದು ಅವಲೋಕನ’ ಕುರಿತು ಮಾತನಾಡಿದರು.</p>.<p>ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಗುರುತಿಸಲು ಮತ್ತು ಅವರಿಗೆ ವಿವೇಕಾನಂದರ ಉನ್ನತ ಆದರ್ಶ ತಲುಪಿಸಲು ಈ ದಿನ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ಭಾರತೀಯ ಸಂಸ್ಕೃತಿಯ ಮೌಲ್ಯವನ್ನು ಜಗತ್ತಿಗೆ ತೋರಿದ ಮಹಾನ್ ಪುಣ್ಯಪುರುಷ ವಿವೇಕಾನಂದರು. ಅವರ ಸಂದೇಶವು ಯುವಜನರಲ್ಲಿ ರಾಷ್ಟ್ರೀಯತೆ, ಶಕ್ತಿ ಮತ್ತು ಮಾನವೀಯತೆ ಜಾಗೃತಗೊಳಿಸುತ್ತದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಆರ್.ಜಯಕುಮಾರಿ ಮಾತನಾಡಿ, ‘ಸ್ವಾಮಿ ವಿವೇಕಾನಂದರು ಒಬ್ಬ ವ್ಯಕ್ತಿಯಲ್ಲ. ಒಂದು ಶಕ್ತಿ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಎನ್ಎಸ್ಎಸ್ ಘಟಕಗಳ ಕಾರ್ಯಕ್ರಮಾಧಿಕಾರಿ ದೊಡ್ಡರಸಯ್ಯ ಜಿ., ನಿರಂಜನ್ ಎಲ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸ್ವಾಮಿ ವಿವೇಕಾನಂದ ಆಧ್ಯಾತ್ಮಿಕ ಚಿಂತಕರು ಮಾತ್ರವಲ್ಲದೆ, ಯುವಜನರ ಸ್ಫೂರ್ತಿಯ ಸೆಲೆ’ ಎಂದು ಮೈಸೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಎಚ್.ಆರ್.ತಿಮ್ಮೇಗೌಡ ಹೇಳಿದರು.</p>.<p>ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕಗಳ ವತಿಯಿಂದ ರಾಷ್ಟ್ರೀಯ ಯುವ ದಿನದ ಅಂಗವಾಗಿ ನಡೆದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ‘ಸ್ವಾಮಿ ವಿವೇಕಾನಂದರ ಚಿಂತನೆಗಳು- ಒಂದು ಅವಲೋಕನ’ ಕುರಿತು ಮಾತನಾಡಿದರು.</p>.<p>ದೇಶದ ಅಭಿವೃದ್ಧಿಯಲ್ಲಿ ಯುವಶಕ್ತಿಯ ಪಾತ್ರ ಗುರುತಿಸಲು ಮತ್ತು ಅವರಿಗೆ ವಿವೇಕಾನಂದರ ಉನ್ನತ ಆದರ್ಶ ತಲುಪಿಸಲು ಈ ದಿನ ಮೀಸಲಿಡಲಾಗಿದೆ ಎಂದು ತಿಳಿಸಿದರು.</p>.<p>ಭಾರತೀಯ ಸಂಸ್ಕೃತಿಯ ಮೌಲ್ಯವನ್ನು ಜಗತ್ತಿಗೆ ತೋರಿದ ಮಹಾನ್ ಪುಣ್ಯಪುರುಷ ವಿವೇಕಾನಂದರು. ಅವರ ಸಂದೇಶವು ಯುವಜನರಲ್ಲಿ ರಾಷ್ಟ್ರೀಯತೆ, ಶಕ್ತಿ ಮತ್ತು ಮಾನವೀಯತೆ ಜಾಗೃತಗೊಳಿಸುತ್ತದೆ ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಬಿ.ಆರ್.ಜಯಕುಮಾರಿ ಮಾತನಾಡಿ, ‘ಸ್ವಾಮಿ ವಿವೇಕಾನಂದರು ಒಬ್ಬ ವ್ಯಕ್ತಿಯಲ್ಲ. ಒಂದು ಶಕ್ತಿ. ಅವರ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಜಯಂತಿ ಆಚರಣೆ ಸಾರ್ಥಕವಾಗುತ್ತದೆ’ ಎಂದು ಹೇಳಿದರು.</p>.<p>ಎನ್ಎಸ್ಎಸ್ ಘಟಕಗಳ ಕಾರ್ಯಕ್ರಮಾಧಿಕಾರಿ ದೊಡ್ಡರಸಯ್ಯ ಜಿ., ನಿರಂಜನ್ ಎಲ್. ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>