ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಾಗದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ

ಅಪಘಾತದಲ್ಲಿ ಮೃತಪಟ್ಟ ಬಳಿಕ ಅಂಗಾಂಗ ದಾನ
Published 14 ಸೆಪ್ಟೆಂಬರ್ 2023, 5:31 IST
Last Updated 14 ಸೆಪ್ಟೆಂಬರ್ 2023, 5:31 IST
ಅಕ್ಷರ ಗಾತ್ರ

ಮೈಸೂರು: ನಗರದಲ್ಲಿ ಎರಡು ಬೈಕ್‌ಗಳು ಡಿಕ್ಕಿಯಾಗಿ ಮೃತಪಟ್ಟ ಸೈಯದ್‌ ಪರ್ವೀಜ್‌ (52) ಅವರ ಅಂಗಾಗಗಳನ್ನು ದಾನ ಮಾಡುವ ಮೂಲಕ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಮೇಟಗಳ್ಳಿ ಕೈಗಾರಿಕಾ ಪ್ರದೇಶದ ಕೆಆರ್‌ಎಸ್‌ ರಸ್ತೆಯಲ್ಲಿ ಎರಡು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಮಂಡಿ ಮೊಹಲ್ಲಾ ನಿವಾಸಿ ಸೈಯದ್‌ ಪರ್ವೀಜ್‌ ಗಂಭೀರ ಗಾಯಗೊಂಡಿದ್ದರು. ಹೀಗಾಗಿ ಅವರನ್ನು ಸೆ.8ರಂದು ಅಪೋಲೊ ಬಿಜಿಎಸ್‌ ಆಸ್ಪತ್ರೆಗೆ ಕರೆತರಲಾಯಿತು. 4 ದಿನಗಳ ಕಾಲ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಅವರಿಗೆ ಮಿದುಳು ನಿಷ್ಕ್ರಿಯವಾಗಿರುವುದನ್ನು ಮಂಗಳವಾರ ಘೋಷಿಸಲಾಯಿತು. ಪರೀಕ್ಷೆ ನಡೆಸಿದಾಗ ಅವರು ಅಂಗಾಂಗ ದಾನಕ್ಕೆ ಅರ್ಹರಾಗಿರುವುದೂ ಕಂಡುಬಂತು. ಹೀಗಾಗಿ ಕುಟುಂಬದವರ ಒಪ್ಪಿಗೆ ಪಡೆದು ಸಂಸ್ಥೆಯ ಆಸ್ಪತ್ರೆಯ ಅಧಿಕಾರಿಗಳು ಅಂಗ ದಾನ ಪ್ರಕ್ರಿಯೆ ನಡೆಸಿದರು. ಲಿವರ್‌ ಹಾಗೂ ಒಂದು ಕಿಡ್ನಿಯನ್ನು ಅಪೋಲೊ ಬಿಜಿಎಸ್‌ ಆಸ್ಪತ್ರೆಗೆ, ಒಂದು ಕಿಡ್ನಿಯನ್ನು ಕ್ಲಿಯರ್‌ ಮೆಡಿ ರೇಡಿಯಂಟ್‌ ಆಸ್ಪತ್ರೆಗೆ ಹಾಗೂ ಹೃದಯದ ಕವಾಟಗಳನ್ನು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ದಾನ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT