<p><strong>ತಿ.ನರಸೀಪುರ</strong>: ‘ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡರೆ ವೈಚಾರಿಕತೆ ಹಾಗೂ ಜ್ಞಾನ ಹೆಚ್ಚುತ್ತದೆ. ಇದು ಸಾಧನೆಗೆ ಹಾದಿ ತೋರುತ್ತದೆ’ ಎಂದು ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರ ತಾಯೂರು ಪ್ರಕಾಶ್ ಹೇಳಿದರು.</p>.<p>ಪಟ್ಟಣ ಸಮೀಪದ ತಾಯೂರಿನಲ್ಲಿನ ಟಿ.ಎಸ್. ಸುಬ್ಬಣ್ಣ ಪ್ರೌಢಶಾಲೆಯಲ್ಲಿ ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆದ ಮೂರು ದಿನಗಳ ವಿಜ್ಞಾನ ಬೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ಶಿಕ್ಷಣ ಎಲ್ಲರಿಗೂ ಅಗತ್ಯ, ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ. ವಿದ್ಯೆಯ ಜೊತೆಗೆ ವಿವೇಕ ಕಲಿತು ಶಿಕ್ಷಕರ ಶ್ರಮಕ್ಕೆ ನಿಮ್ಮ ಸಾಧನೆಯು ಕೃತಜ್ಞತೆಯಾಗಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಸಹಾಯಕ ಪ್ರಾಧ್ಯಾಪಕಿ ಡಾ.ಪ್ರೀತಿ ಎನ್ ತಲ್ಲೂರು ಮಾತನಾಡಿ, ‘ಶಾಲೆಯ ಮಕ್ಕಳಲ್ಲಿ ಶಿಸ್ತು, ವಿನಯ ಕಾಣುತ್ತಿದೆ’ ಎಂದರು.</p>.<p>ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಡಿ.ಕೆ. ರವಿಶಂಕರ್, ಹನುಮಂತಪ್ಪ ಮಕರಿ, ಮಾನಸ ಹಾಗೂ ಮಮತಾ ಕಲಿಕಾ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.</p>.<p>ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಹೇಶ್ ಮಾತನಾಡಿದರು. ಟಿ.ಎಸ್.ಎಸ್.ಎಸ್ ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಲೋಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು</p>.<p>ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ನಾಗಸುಂದರ್, ನಾಗೇಂದ್ರ ಪ್ರಸಾದ್ ಖಜಾಂಚಿ, ಶಾಲೆಯ ಶಿಕ್ಷಕರಾದ ಬಿ. ನಾಗರಾಜು, ಎಸ್. ಜಯಶಂಕರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ</strong>: ‘ವಿದ್ಯಾರ್ಥಿಗಳು ಪ್ರಶ್ನಿಸುವ ಮನೋಭಾವ ಬೆಳೆಸಿಕೊಂಡರೆ ವೈಚಾರಿಕತೆ ಹಾಗೂ ಜ್ಞಾನ ಹೆಚ್ಚುತ್ತದೆ. ಇದು ಸಾಧನೆಗೆ ಹಾದಿ ತೋರುತ್ತದೆ’ ಎಂದು ಜೆಡಿಎಸ್ ರಾಜ್ಯ ಮಾಧ್ಯಮ ವಕ್ತಾರ ತಾಯೂರು ಪ್ರಕಾಶ್ ಹೇಳಿದರು.</p>.<p>ಪಟ್ಟಣ ಸಮೀಪದ ತಾಯೂರಿನಲ್ಲಿನ ಟಿ.ಎಸ್. ಸುಬ್ಬಣ್ಣ ಪ್ರೌಢಶಾಲೆಯಲ್ಲಿ ಮೈಸೂರು ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು ಹಾಗೂ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ನಡೆದ ಮೂರು ದಿನಗಳ ವಿಜ್ಞಾನ ಬೋಧನಾ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಶುಕ್ರವಾರ ಮಾತನಾಡಿದರು.</p>.<p>‘ಶಿಕ್ಷಣ ಎಲ್ಲರಿಗೂ ಅಗತ್ಯ, ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳಿ. ವಿದ್ಯೆಯ ಜೊತೆಗೆ ವಿವೇಕ ಕಲಿತು ಶಿಕ್ಷಕರ ಶ್ರಮಕ್ಕೆ ನಿಮ್ಮ ಸಾಧನೆಯು ಕೃತಜ್ಞತೆಯಾಗಬೇಕು’ ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.</p>.<p>ಸಹಾಯಕ ಪ್ರಾಧ್ಯಾಪಕಿ ಡಾ.ಪ್ರೀತಿ ಎನ್ ತಲ್ಲೂರು ಮಾತನಾಡಿ, ‘ಶಾಲೆಯ ಮಕ್ಕಳಲ್ಲಿ ಶಿಸ್ತು, ವಿನಯ ಕಾಣುತ್ತಿದೆ’ ಎಂದರು.</p>.<p>ಸಹಾಯಕ ಪ್ರಾಧ್ಯಾಪಕರಾದ ಪ್ರೊ. ಡಿ.ಕೆ. ರವಿಶಂಕರ್, ಹನುಮಂತಪ್ಪ ಮಕರಿ, ಮಾನಸ ಹಾಗೂ ಮಮತಾ ಕಲಿಕಾ ಮಹತ್ವದ ಬಗ್ಗೆ ತಿಳಿಸಿಕೊಟ್ಟರು.</p>.<p>ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಹೇಶ್ ಮಾತನಾಡಿದರು. ಟಿ.ಎಸ್.ಎಸ್.ಎಸ್ ವಿದ್ಯಾಸಂಸ್ಥೆ ಆಡಳಿತ ಅಧಿಕಾರಿ ಲೋಲ್ ಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು</p>.<p>ಕಾರ್ಯಕ್ರಮದಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ನಾಗಸುಂದರ್, ನಾಗೇಂದ್ರ ಪ್ರಸಾದ್ ಖಜಾಂಚಿ, ಶಾಲೆಯ ಶಿಕ್ಷಕರಾದ ಬಿ. ನಾಗರಾಜು, ಎಸ್. ಜಯಶಂಕರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>