<p><strong>ತಿ.ನರಸೀಪುರ:</strong> ರಸ್ತೆ ದಾಟುತ್ತಿದ್ದ ರೈತನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಮಾಡ್ರಳ್ಳಿ ಗೇಟ್ ಬಳಿ ನಡೆದಿದೆ.</p>.<p>ಗ್ರಾಮದ ಲೇಟ್ ಮಹದೇವಯ್ಯ ಎಂಬುವರ ಪುತ್ರ ಕುಮಾರ್ (37) ಮೃತಪಟ್ಟ ವ್ಯಕ್ತಿ. ಜಮೀನಿನಲ್ಲಿ ಜಾನುವಾರು ಮೇಯಿಸಿಕೊಂಡು ಮನೆಗೆ ಹಿಂದಿರುಗುವ ವೇಳೆ ಕೊಳ್ಳೇಗಾಲ ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.</p>.<p>ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬಸ್ನ ಅತೀ ವೇಗ ಸಂಚಾರದಿಂದ ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಸ್ಥಳಕ್ಕೆ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಕಲಾಶ್ರೀ ಮೋಹನ್, ಎಎಸ್ಪಿ ಮಲ್ಲಿಕಾ, ಡಿವೈಎಸ್ಪಿ ಜಿ.ಎಸ್.ರಘು, ಸರ್ಕಲ್ ಇನ್ ಸ್ಪೆಕ್ಟರ್ ಧನಂಜಯ, ಸಬ್ ಇನ್ ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ರಸ್ತೆ ದಾಟುತ್ತಿದ್ದ ರೈತನಿಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾಷ್ಟ್ರೀಯ ಹೆದ್ದಾರಿಯ ತಾಲೂಕಿನ ಮಾಡ್ರಳ್ಳಿ ಗೇಟ್ ಬಳಿ ನಡೆದಿದೆ.</p>.<p>ಗ್ರಾಮದ ಲೇಟ್ ಮಹದೇವಯ್ಯ ಎಂಬುವರ ಪುತ್ರ ಕುಮಾರ್ (37) ಮೃತಪಟ್ಟ ವ್ಯಕ್ತಿ. ಜಮೀನಿನಲ್ಲಿ ಜಾನುವಾರು ಮೇಯಿಸಿಕೊಂಡು ಮನೆಗೆ ಹಿಂದಿರುಗುವ ವೇಳೆ ಕೊಳ್ಳೇಗಾಲ ಕಡೆಯಿಂದ ಬರುತ್ತಿದ್ದ ಸಾರಿಗೆ ಬಸ್ ಡಿಕ್ಕಿ ಹೊಡೆದಿದೆ.</p>.<p>ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿ ಬಸ್ನ ಅತೀ ವೇಗ ಸಂಚಾರದಿಂದ ಘಟನೆ ಸಂಭವಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದಾಗಿ ಕೆಲ ಕಾಲ ಸಂಚಾರಕ್ಕೆ ಅಡ್ಡಿಯಾಯಿತು.</p>.<p>ಸ್ಥಳಕ್ಕೆ ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಕಲಾಶ್ರೀ ಮೋಹನ್, ಎಎಸ್ಪಿ ಮಲ್ಲಿಕಾ, ಡಿವೈಎಸ್ಪಿ ಜಿ.ಎಸ್.ರಘು, ಸರ್ಕಲ್ ಇನ್ ಸ್ಪೆಕ್ಟರ್ ಧನಂಜಯ, ಸಬ್ ಇನ್ ಸ್ಪೆಕ್ಟರ್ ಜಗದೀಶ್ ಧೂಳ್ ಶೆಟ್ಟಿ ಭೇಟಿ ನೀಡಿ ಪರಿಶೀಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>