<p><strong>ತಿ.ನರಸೀಪುರ:</strong> ಕಾರ್ಮಿಕರ ಬದುಕಿಗೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆ ಖಂಡಿಸಿ ಬುಧವಾರ ಕಾರ್ಮಿಕ ಮುಖಂಡರು ಕೇಂದ್ರ ಗೆಜೆಟ್ ಪತ್ರಗಳನ್ನು ಸುಡುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆ ಎದುರು ಕೇಂದ್ರ ಗೆಜೆಟ್ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಡಿವೈಎಫ್ಐ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ, ‘ಕೇಂದ್ರದ ಬಿಜೆಪಿ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ರೂಪಿಸಿ ಮೇ 8ರಂದು ಗೆಜೆಟ್ ಪ್ರಕಟಣೆ ಹೊರಡಿಸಿದೆ. ಸಿಐಟಿಯು ಹಾಗೂ ಇತರೆ ಕಾರ್ಮಿಕ ಸಂಘಟನೆಗಳು ಸೂಚಿಸಿದ ಯಾವುದೇ ತಿದ್ದುಪಡಿಗಳನ್ನು ಅಂಗೀಕರಿಸದೇ ಹಾಗೂ ಈ ಬಗ್ಗೆ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸದೇ ಎಲ್ಲಾ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ, ನಿಯಮಗಳನ್ನು ರೂಪಿಸಿದೆ’ ಎಂದು ದೂರಿದರು.</p>.<p>ಕಾರ್ಮಿಕ ಕಾನೂನುಗಳು ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ, ರಾಜ್ಯಗಳೂ ಕೂಡಲೇ ನಿಯಮಗಳನ್ನು ರೂಪಿಸುವಂತೆ ಅವುಗಳ ಮೇಲೆ ಒತ್ತಡ ಹೇರಲಾಗಿದೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಗೆದ್ದ ನಂತರ ಈ ಕಪಟ ಮತ್ತು ವಂಚನೆಯ ಕ್ರಮ ಕಾರ್ಮಿಕ ವರ್ಗದ ಮೇಲೆ ಹರಿಬಿಟ್ಟಿದೆ ಎಂದು ಆರೋಪಿಸಿದರು.</p>.<p>ಈಗ ಅಂಗೀಕರಿಸಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳು ಹಾಗೂ ಸವಲತ್ತುಗಳನ್ನು ನಾಶಮಾಡುವ ಕ್ರಮವಾಗಿದೆ. ಬಂಡವಾಳಗಾರರು ಮಾಡುತ್ತಿದ್ದ ಎಲ್ಲಾ ಕಾನೂನು ಉಲ್ಲಂಘನೆಗಳನ್ನು ಕಾನೂನುಬದ್ಧಗೊಳಿಸಲಾಗಿದೆ. ದೇಶದ ಯುವ ಜನತೆಗೆ ಕಾಯಂ ಉದ್ಯೋಗದ ಅವಕಾಶ ಇಲ್ಲದಂತೆ ಮಾಡಿ, ಅವರ ಬದುಕನ್ನು ಅತಂತ್ರಗೊಳಿಸಲಾಗಿದೆ ಎಂದು ಹೇಳಿದರು.</p>.<p>ಕಾರ್ಮಿಕ ಮುಖಂಡರಾದ ಎಸ್. ಶಾಂತಮೂರ್ತಿ, ಕೆಂಪಯ್ಯನಹುಂಡಿ ಪುಟ್ಟಸ್ವಾಮಿ, ಮಹದೇವಮ್ಮ ನಿಲಸೋಗೆ ಸಿದ್ದರಾಜು, ಗೌರಮ್ಮ, ನಾಗಮ್ಮ, ಸುಮ, ನಾಗರತ್ನಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-613242530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ:</strong> ಕಾರ್ಮಿಕರ ಬದುಕಿಗೆ ಮಾರಕವಾಗಿರುವ ನಾಲ್ಕು ಕಾರ್ಮಿಕ ಸಂಹಿತೆ ಜಾರಿಗೆ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆ ಖಂಡಿಸಿ ಬುಧವಾರ ಕಾರ್ಮಿಕ ಮುಖಂಡರು ಕೇಂದ್ರ ಗೆಜೆಟ್ ಪತ್ರಗಳನ್ನು ಸುಡುವ ಮೂಲಕ ಸಾಂಕೇತಿಕ ಪ್ರತಿಭಟನೆ ನಡೆಸಿದರು.</p>.<p>ಪಟ್ಟಣದ ತಾಲ್ಲೂಕು ಆಡಳಿತ ಸೌಧದ ಎದುರಿನ ಅಂಬೇಡ್ಕರ್ ಪ್ರತಿಮೆ ಎದುರು ಕೇಂದ್ರ ಗೆಜೆಟ್ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು.</p>.<p>ಈ ವೇಳೆ ಮಾತನಾಡಿದ ಡಿವೈಎಫ್ಐ ಅಧ್ಯಕ್ಷ ಸಿ.ಪುಟ್ಟಮಲ್ಲಯ್ಯ, ‘ಕೇಂದ್ರದ ಬಿಜೆಪಿ ಸರ್ಕಾರ ನಾಲ್ಕು ಕಾರ್ಮಿಕ ಸಂಹಿತೆಗಳಿಗೆ ನಿಯಮಾವಳಿ ರೂಪಿಸಿ ಮೇ 8ರಂದು ಗೆಜೆಟ್ ಪ್ರಕಟಣೆ ಹೊರಡಿಸಿದೆ. ಸಿಐಟಿಯು ಹಾಗೂ ಇತರೆ ಕಾರ್ಮಿಕ ಸಂಘಟನೆಗಳು ಸೂಚಿಸಿದ ಯಾವುದೇ ತಿದ್ದುಪಡಿಗಳನ್ನು ಅಂಗೀಕರಿಸದೇ ಹಾಗೂ ಈ ಬಗ್ಗೆ ಕಾರ್ಮಿಕ ಸಂಘಟನೆಗಳೊಂದಿಗೆ ಮಾತುಕತೆ ನಡೆಸದೇ ಎಲ್ಲಾ ಪ್ರಜಾಪ್ರಭುತ್ವ ಮೌಲ್ಯಗಳನ್ನು ಗಾಳಿಗೆ ತೂರಿ, ನಿಯಮಗಳನ್ನು ರೂಪಿಸಿದೆ’ ಎಂದು ದೂರಿದರು.</p>.<p>ಕಾರ್ಮಿಕ ಕಾನೂನುಗಳು ಸಮವರ್ತಿ ಪಟ್ಟಿಯಲ್ಲಿ ಬರುವುದರಿಂದ, ರಾಜ್ಯಗಳೂ ಕೂಡಲೇ ನಿಯಮಗಳನ್ನು ರೂಪಿಸುವಂತೆ ಅವುಗಳ ಮೇಲೆ ಒತ್ತಡ ಹೇರಲಾಗಿದೆ. ಅಸ್ಸಾಂ ಮತ್ತು ಪಶ್ಚಿಮ ಬಂಗಾಳದ ಬಿಜೆಪಿ ಗೆದ್ದ ನಂತರ ಈ ಕಪಟ ಮತ್ತು ವಂಚನೆಯ ಕ್ರಮ ಕಾರ್ಮಿಕ ವರ್ಗದ ಮೇಲೆ ಹರಿಬಿಟ್ಟಿದೆ ಎಂದು ಆರೋಪಿಸಿದರು.</p>.<p>ಈಗ ಅಂಗೀಕರಿಸಿರುವ 4 ಕಾರ್ಮಿಕ ಸಂಹಿತೆಗಳು ಕಾರ್ಮಿಕರ ಮೂಲಭೂತ ಹಕ್ಕುಗಳು ಹಾಗೂ ಸವಲತ್ತುಗಳನ್ನು ನಾಶಮಾಡುವ ಕ್ರಮವಾಗಿದೆ. ಬಂಡವಾಳಗಾರರು ಮಾಡುತ್ತಿದ್ದ ಎಲ್ಲಾ ಕಾನೂನು ಉಲ್ಲಂಘನೆಗಳನ್ನು ಕಾನೂನುಬದ್ಧಗೊಳಿಸಲಾಗಿದೆ. ದೇಶದ ಯುವ ಜನತೆಗೆ ಕಾಯಂ ಉದ್ಯೋಗದ ಅವಕಾಶ ಇಲ್ಲದಂತೆ ಮಾಡಿ, ಅವರ ಬದುಕನ್ನು ಅತಂತ್ರಗೊಳಿಸಲಾಗಿದೆ ಎಂದು ಹೇಳಿದರು.</p>.<p>ಕಾರ್ಮಿಕ ಮುಖಂಡರಾದ ಎಸ್. ಶಾಂತಮೂರ್ತಿ, ಕೆಂಪಯ್ಯನಹುಂಡಿ ಪುಟ್ಟಸ್ವಾಮಿ, ಮಹದೇವಮ್ಮ ನಿಲಸೋಗೆ ಸಿದ್ದರಾಜು, ಗೌರಮ್ಮ, ನಾಗಮ್ಮ, ಸುಮ, ನಾಗರತ್ನಮ್ಮ ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-37-613242530</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>