<p>ಎಚ್.ಡಿ.ಕೋಟೆ: ತಾಲ್ಲೂಕಿನ ಭೀಮನಹಳ್ಳಿ ಗ್ರಾಮದ ಸಮೀಪದ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ತಹಶೀಲ್ದಾರ್ ಆರ್.ಮಂಜುನಾಥ್ ಶನಿವಾರ ಭೇಟಿ ನೀಡಿ ಆದಿವಾಸಿಗಳ ಸಮಸ್ಯೆ ಆಲಿಸಿದರು.</p>.<p>‘ಕಳೆದ ಎರಡು ದಿನಗಳ ಹಿಂದೆ ವಾಸವಿದ್ದ 3 ಮನೆಗಳಲ್ಲೇ ಒಂದೆರಡು ದಿನಗಳ ಮಟ್ಟಿಗೆ ಇರಿ. ಆದರೆ, ಇದು ತಾತ್ಕಾಲಿಕ ಮಾತ್ರ. ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿದ ನಂತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್, ‘ಇವರನ್ನು ಪುನರ್ವಸತಿ ಮಾಡಬೇಕಾದರೆ ಗ್ರಾಮಸಭೆಯ ಒಪ್ಪಿಗೆ ಬೇಕು. ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಮಟ್ಟದ ಸಮಿತಿಯಲ್ಲಿ ತೀರ್ಮಾನವಾಗಬೇಕು. ಅಲ್ಲಿಯವರೆಗೂ ಇವರು ಕಳೆದ 8 ವರ್ಷಗಳಿಂದ ಎಲ್ಲಿ ವಾಸವಿದ್ದರೋ ಅಲ್ಲಿಯೇ ಇರಬೇಕು. ಅನಧಿಕೃತವಾಗಿ ಮನೆಗಳಲ್ಲಿ ಉಳಿದುಕೊಂಡರೆ ಅದು ಕಾನೂನಿನ ಉಲ್ಲಂಘನೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತದೆ’ ಎಂದರು.</p>.<p>‘3 ಮನೆಗಳಲ್ಲಿ 12 ಕುಟುಂಬಗಳು ಉಳಿದುಕೊಳ್ಳಲು ಸಾಧ್ಯವೇ? ತಹಶೀಲ್ದಾರ್ ಅವರು ಇದೆಂತಹ ನ್ಯಾಯ ಕೊಟ್ಟಿದ್ದಾರೆ?’ ಎಂದು ಗಿರಿಜನ ಮುಖಂಡ ಸಿದ್ದರಾಜು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಚ್.ಡಿ.ಕೋಟೆ: ತಾಲ್ಲೂಕಿನ ಭೀಮನಹಳ್ಳಿ ಗ್ರಾಮದ ಸಮೀಪದ ಮಾಸ್ತಿಗುಡಿ ಪುನರ್ವಸತಿ ಕೇಂದ್ರಕ್ಕೆ ತಹಶೀಲ್ದಾರ್ ಆರ್.ಮಂಜುನಾಥ್ ಶನಿವಾರ ಭೇಟಿ ನೀಡಿ ಆದಿವಾಸಿಗಳ ಸಮಸ್ಯೆ ಆಲಿಸಿದರು.</p>.<p>‘ಕಳೆದ ಎರಡು ದಿನಗಳ ಹಿಂದೆ ವಾಸವಿದ್ದ 3 ಮನೆಗಳಲ್ಲೇ ಒಂದೆರಡು ದಿನಗಳ ಮಟ್ಟಿಗೆ ಇರಿ. ಆದರೆ, ಇದು ತಾತ್ಕಾಲಿಕ ಮಾತ್ರ. ಜಿಲ್ಲಾಧಿಕಾರಿ ಅವರೊಂದಿಗೆ ಚರ್ಚಿಸಿದ ನಂತರ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲಾಗುವುದು’ ಎಂದು ಭರವಸೆ ನೀಡಿದರು.</p>.<p>ಈ ಕುರಿತು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ನಾಗರಹೊಳೆ ಹುಲಿ ರಕ್ಷಿತಾರಣ್ಯದ ಹುಲಿ ಯೋಜನೆ ನಿರ್ದೇಶಕ ಮಹೇಶ್ಕುಮಾರ್, ‘ಇವರನ್ನು ಪುನರ್ವಸತಿ ಮಾಡಬೇಕಾದರೆ ಗ್ರಾಮಸಭೆಯ ಒಪ್ಪಿಗೆ ಬೇಕು. ಜಿಲ್ಲಾಧಿಕಾರಿ ನೇತೃತ್ವದ ಜಿಲ್ಲಾಮಟ್ಟದ ಸಮಿತಿಯಲ್ಲಿ ತೀರ್ಮಾನವಾಗಬೇಕು. ಅಲ್ಲಿಯವರೆಗೂ ಇವರು ಕಳೆದ 8 ವರ್ಷಗಳಿಂದ ಎಲ್ಲಿ ವಾಸವಿದ್ದರೋ ಅಲ್ಲಿಯೇ ಇರಬೇಕು. ಅನಧಿಕೃತವಾಗಿ ಮನೆಗಳಲ್ಲಿ ಉಳಿದುಕೊಂಡರೆ ಅದು ಕಾನೂನಿನ ಉಲ್ಲಂಘನೆ. ಇದರಿಂದ ನಿಜವಾದ ಫಲಾನುಭವಿಗಳಿಗೆ ಅನ್ಯಾಯವಾಗುತ್ತದೆ’ ಎಂದರು.</p>.<p>‘3 ಮನೆಗಳಲ್ಲಿ 12 ಕುಟುಂಬಗಳು ಉಳಿದುಕೊಳ್ಳಲು ಸಾಧ್ಯವೇ? ತಹಶೀಲ್ದಾರ್ ಅವರು ಇದೆಂತಹ ನ್ಯಾಯ ಕೊಟ್ಟಿದ್ದಾರೆ?’ ಎಂದು ಗಿರಿಜನ ಮುಖಂಡ ಸಿದ್ದರಾಜು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>