<p><strong>ಮೈಸೂರು</strong>: ಸಾಹಿತಿ ಎಸ್.ಎಲ್.ಭೈರಪ್ಪ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಲೇಖಕ ಎಸ್.ಉಮೇಶ್ ಅವರ ಲಾಲ್ಬಹದ್ದೂರ್ಶಾಸ್ತ್ರಿ ಬದುಕಿನ ಕುರಿತಾದ ‘ತಾಷ್ಕಂಟ್ ಡೈರಿ’ ಪುಸ್ತಕವನ್ನು ಶುಕ್ರವಾರ ಬಿಡುಗಡೆ ಮಾಡಿದರು.</p>.<p>ನಂತರ ಮಾತನಾಡಿದ ಅವರು, ‘ಲಾಲ್ಬಹದ್ದೂರ್ಶಾಸ್ತ್ರಿ ಬದುಕಿದ್ದರೆ ಭಾರತದ ಇತಿಹಾಸದ ಸ್ವರೂಪವೇ ಬದಲಾಗುತ್ತಿತ್ತು’ ಎಂದು ಹೇಳಿದರು.</p>.<p>ಭಾರತಕ್ಕೆ ಕ್ಷೀರಕ್ರಾಂತಿ ಅಗತ್ಯ ಎಂದು ಅರಿತು, ಅವರು ಅದರ ಜವಾಬ್ದಾರಿಯನ್ನು ಕುರಿಯನ್ ಅವರಿಗೆ ವಹಿಸಿದರು. ಅವರ ಸರಳತೆ ಮೆಚ್ಚುವಂತದ್ದಾಗಿತ್ತು ಎಂದು ತಿಳಿಸಿದರು.</p>.<p>ಬನಾರಸ್ನಲ್ಲಿ ವಾಸವಿದ್ದಾಗ ತಾವು ಶಾಸ್ತ್ರಿ ಅವರ ಮನೆಗೆ ಭೇಟಿ ಕೊಟ್ಟ ಪ್ರಸಂಗಗಳನ್ನು ನೆನಪು ಮಾಡಿಕೊಂಡರು.</p>.<p>ಧಾತ್ರಿ ಪ್ರಕಾಶನದ ಮುಖ್ಯಸ್ಥರಾದ ಬೃಂದಾ ಉಮೇಶ್ ಮಾತನಾಡಿ, ‘ಮೊದಲ ಮುದ್ರಣದ ಬಹುತೇಕ ಎಲ್ಲ ಪ್ರತಿಗಳನ್ನು ಓದುಗರು ಕಾಯ್ದಿರಿಸಿದ್ದಾರೆ. ಈಗ ಅದನ್ನು ಅವರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.</p>.<p>ಸಾಹಿತಿ ಪ್ರಧಾನ ಗುರುದತ್ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಸಾಹಿತಿ ಎಸ್.ಎಲ್.ಭೈರಪ್ಪ ಅವರು ಇಲ್ಲಿನ ತಮ್ಮ ನಿವಾಸದಲ್ಲಿ ಲೇಖಕ ಎಸ್.ಉಮೇಶ್ ಅವರ ಲಾಲ್ಬಹದ್ದೂರ್ಶಾಸ್ತ್ರಿ ಬದುಕಿನ ಕುರಿತಾದ ‘ತಾಷ್ಕಂಟ್ ಡೈರಿ’ ಪುಸ್ತಕವನ್ನು ಶುಕ್ರವಾರ ಬಿಡುಗಡೆ ಮಾಡಿದರು.</p>.<p>ನಂತರ ಮಾತನಾಡಿದ ಅವರು, ‘ಲಾಲ್ಬಹದ್ದೂರ್ಶಾಸ್ತ್ರಿ ಬದುಕಿದ್ದರೆ ಭಾರತದ ಇತಿಹಾಸದ ಸ್ವರೂಪವೇ ಬದಲಾಗುತ್ತಿತ್ತು’ ಎಂದು ಹೇಳಿದರು.</p>.<p>ಭಾರತಕ್ಕೆ ಕ್ಷೀರಕ್ರಾಂತಿ ಅಗತ್ಯ ಎಂದು ಅರಿತು, ಅವರು ಅದರ ಜವಾಬ್ದಾರಿಯನ್ನು ಕುರಿಯನ್ ಅವರಿಗೆ ವಹಿಸಿದರು. ಅವರ ಸರಳತೆ ಮೆಚ್ಚುವಂತದ್ದಾಗಿತ್ತು ಎಂದು ತಿಳಿಸಿದರು.</p>.<p>ಬನಾರಸ್ನಲ್ಲಿ ವಾಸವಿದ್ದಾಗ ತಾವು ಶಾಸ್ತ್ರಿ ಅವರ ಮನೆಗೆ ಭೇಟಿ ಕೊಟ್ಟ ಪ್ರಸಂಗಗಳನ್ನು ನೆನಪು ಮಾಡಿಕೊಂಡರು.</p>.<p>ಧಾತ್ರಿ ಪ್ರಕಾಶನದ ಮುಖ್ಯಸ್ಥರಾದ ಬೃಂದಾ ಉಮೇಶ್ ಮಾತನಾಡಿ, ‘ಮೊದಲ ಮುದ್ರಣದ ಬಹುತೇಕ ಎಲ್ಲ ಪ್ರತಿಗಳನ್ನು ಓದುಗರು ಕಾಯ್ದಿರಿಸಿದ್ದಾರೆ. ಈಗ ಅದನ್ನು ಅವರಿಗೆ ತಲುಪಿಸುವ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ’ ಎಂದು ತಿಳಿಸಿದರು.</p>.<p>ಸಾಹಿತಿ ಪ್ರಧಾನ ಗುರುದತ್ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>