<p><strong>ಮೈಸೂರು:</strong> ಭೂ ಕಬಳಿಕೆ, ಒತ್ತುವರಿ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ಶುಕ್ರವಾರ ನಡೆದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ನಗರದ ಹಲವೆಡೆ ಮುಡಾ ಆಸ್ತಿಯ ಒತ್ತುವರಿ ಅಲ್ಲದೆ, ಅಕ್ರಮ ನಿರ್ಮಾಣ ಕಂಡು ಬರುತ್ತಿದೆ. ಇದಲ್ಲದೆ ಕೆಲ ಭೂ ವಂಚನೆ ಪ್ರಕರಣಗಳೂ ನಡೆಯುತ್ತಿರುತ್ತವೆ. ಈ ರೀತಿಯ ಅಕ್ರಮಗಳನ್ನು ತಡೆಗಟ್ಟಲು ಬಿಡಿಎ ಮಾದರಿಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂಬ ವಿಚಾರ ಸಭೆಯಲ್ಲಿ ಚರ್ಚೆಗೆ ಬಂತು. ಸದಸ್ಯರು ಇದಕ್ಕೆ ಸಹಮತ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಮುಡಾಗೆ ಭೂಮಿ ನೀಡಿದ ರೈತರಿಗೆ ಬಾಕಿ ನೀಡುವ ಸಂಬಂಧವೂ ಚರ್ಚೆ ನಡೆಯಿತು. ರೈತರಿಂದ ಭೂಮಿ ಪಡೆದು 50:50 ರ ಅನುಪಾತದಡಿ ಬಡಾವಣೆ ನಿರ್ಮಿಸುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಈ ಬಗ್ಗೆ ಸದಸ್ಯರು ಸಲಹೆಗಳನ್ನು ನೀಡಿದರು. ರೈತರಿಗೆ ಅನುಕೂಲವಾಗುವ ಈ ಯೋಜನೆಯ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಮುಡಾಗೆ ಸಂಬಂಧಿಸಿದ 401 ಪ್ರಕರಣಗಳ ಬಗ್ಗೆ ಚರ್ಚೆ ನಡೆದು 104 ನಾನಾ ಯೋಜನೆಗಳಿಗೆ ಅನುಮೋದನೆ ಲಭಿಸಿದೆ.</p>.<p>ಬೆಳಿಗ್ಗೆ 11 ಕ್ಕೆ ಆರಂಭವಾದ ಸಭೆ ಸಂಜೆಯವರೆಗೆ ಮುಂದುವರಿಯಿತು. ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್ , ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ವಿಧಾನಪರಿಷತ್ ಸದಸ್ಯರಾದ ಆರ್.ಧರ್ಮಸೇನ, ಮರಿತಿಬ್ಬೇಗೌಡ, ಮುಡಾ ಆಯುಕ್ತ ನಟೇಶ್, ಅಧಿಕಾರಿಗಳು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಭೂ ಕಬಳಿಕೆ, ಒತ್ತುವರಿ ಸೇರಿದಂತೆ ವಿವಿಧ ಅಕ್ರಮಗಳನ್ನು ತಡೆಗಟ್ಟಲು ಟಾಸ್ಕ್ ಫೋರ್ಸ್ ರಚಿಸಲು ಶುಕ್ರವಾರ ನಡೆದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಯಿತು.</p>.<p>ನಗರದ ಹಲವೆಡೆ ಮುಡಾ ಆಸ್ತಿಯ ಒತ್ತುವರಿ ಅಲ್ಲದೆ, ಅಕ್ರಮ ನಿರ್ಮಾಣ ಕಂಡು ಬರುತ್ತಿದೆ. ಇದಲ್ಲದೆ ಕೆಲ ಭೂ ವಂಚನೆ ಪ್ರಕರಣಗಳೂ ನಡೆಯುತ್ತಿರುತ್ತವೆ. ಈ ರೀತಿಯ ಅಕ್ರಮಗಳನ್ನು ತಡೆಗಟ್ಟಲು ಬಿಡಿಎ ಮಾದರಿಯಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು ಎಂಬ ವಿಚಾರ ಸಭೆಯಲ್ಲಿ ಚರ್ಚೆಗೆ ಬಂತು. ಸದಸ್ಯರು ಇದಕ್ಕೆ ಸಹಮತ ವ್ಯಕ್ತಪಡಿಸಿದರು ಎಂದು ಮೂಲಗಳು ತಿಳಿಸಿವೆ.</p>.<p>ಮುಡಾಗೆ ಭೂಮಿ ನೀಡಿದ ರೈತರಿಗೆ ಬಾಕಿ ನೀಡುವ ಸಂಬಂಧವೂ ಚರ್ಚೆ ನಡೆಯಿತು. ರೈತರಿಂದ ಭೂಮಿ ಪಡೆದು 50:50 ರ ಅನುಪಾತದಡಿ ಬಡಾವಣೆ ನಿರ್ಮಿಸುವ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಿತು. ಈ ಬಗ್ಗೆ ಸದಸ್ಯರು ಸಲಹೆಗಳನ್ನು ನೀಡಿದರು. ರೈತರಿಗೆ ಅನುಕೂಲವಾಗುವ ಈ ಯೋಜನೆಯ ಅನುಷ್ಠಾನಕ್ಕೆ ಒಪ್ಪಿಗೆ ಸೂಚಿಸಲಾಯಿತು ಎಂದು ಮೂಲಗಳು ಹೇಳಿವೆ.</p>.<p>ಮುಡಾಗೆ ಸಂಬಂಧಿಸಿದ 401 ಪ್ರಕರಣಗಳ ಬಗ್ಗೆ ಚರ್ಚೆ ನಡೆದು 104 ನಾನಾ ಯೋಜನೆಗಳಿಗೆ ಅನುಮೋದನೆ ಲಭಿಸಿದೆ.</p>.<p>ಬೆಳಿಗ್ಗೆ 11 ಕ್ಕೆ ಆರಂಭವಾದ ಸಭೆ ಸಂಜೆಯವರೆಗೆ ಮುಂದುವರಿಯಿತು. ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಶಾಸಕರಾದ ಜಿ.ಟಿ.ದೇವೇಗೌಡ, ತನ್ವೀರ್ ಸೇಠ್, ಎಲ್.ನಾಗೇಂದ್ರ, ಎಸ್.ಎ.ರಾಮದಾಸ್ , ಯತೀಂದ್ರ ಸಿದ್ದರಾಮಯ್ಯ, ಹರ್ಷವರ್ಧನ್, ವಿಧಾನಪರಿಷತ್ ಸದಸ್ಯರಾದ ಆರ್.ಧರ್ಮಸೇನ, ಮರಿತಿಬ್ಬೇಗೌಡ, ಮುಡಾ ಆಯುಕ್ತ ನಟೇಶ್, ಅಧಿಕಾರಿಗಳು ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>