<p><strong>ಮೈಸೂರು</strong>: ‘ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಾತಿ–ವರ್ಗ–ವರ್ಣ ತಾರತಮ್ಯವಿಲ್ಲದೆ ಎಲ್ಲರಿಗೂ ಅನ್ನ, ವಸತಿ ಹಾಗೂ ಆಶ್ರಯ ನೀಡಿ ಸಹಸ್ರಾರು ಜನರ ಬಾಳಿಗೆ ಬೆಳಕಾದರು’ ಎಂದು ಸಾಹಿತಿ ಎಂ.ಎ. ನೀಲಾಂಬಿಕೆ ಸ್ಮರಿಸಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದಿಂದ ಬುಧವಾರ ಆಯೋಜಿಸಿದ್ದ ಸಂಸ್ಥಾಪಕ ದಿನಾಚರಣೆ ಹಾಗೂ ರಾಜೇಂದ್ರ ಶ್ರೀಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶ್ರೀಗಳು ಎಲ್ಲರನ್ನೂ ಸಮಾನವಾಗಿ ಕಂಡರು. ಅವರಿಂದಾಗಿ ಬಹಳಷ್ಟು ಮಂದಿ ಉತ್ತಮ ಜೀವನ ಕಂಡುಕೊಂಡಿದ್ದಾರೆ’ ಎಂದರು.</p>.<p>ಸ್ವಾಮೀಜಿ ಕುರಿತು ಮಾತನಾಡಿದ ಪೂಜಾ, ಜಯಲಕ್ಷ್ಮಿ, ಹರ್ಷಿತಾ, ಪ್ರಿಯಾ ಹಾಗೂ ರೇವತಿ ಅವರಿಗೆ ಪ್ರಮಾಣಪತ್ರ ಮತ್ತು ಪುಸ್ತಕ ಬಹುಮಾನ ನೀಡಲಾಯಿತು.</p>.<p>ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಸುರೇಶ್, ಸ್ವಾಮಿ, ದತ್ತಿದಾನಿಗಳಾದ ಪಿ.ಬಿ. ತ್ರಿಶೂಲ್, ಪಿ.ಮಲ್ಲಿಕಾರ್ಜುನ್ ಹಾಗೂ ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಸುತ್ತೂರು ಮಠದ ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಜಾತಿ–ವರ್ಗ–ವರ್ಣ ತಾರತಮ್ಯವಿಲ್ಲದೆ ಎಲ್ಲರಿಗೂ ಅನ್ನ, ವಸತಿ ಹಾಗೂ ಆಶ್ರಯ ನೀಡಿ ಸಹಸ್ರಾರು ಜನರ ಬಾಳಿಗೆ ಬೆಳಕಾದರು’ ಎಂದು ಸಾಹಿತಿ ಎಂ.ಎ. ನೀಲಾಂಬಿಕೆ ಸ್ಮರಿಸಿದರು.</p>.<p>ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ನಗರ ಘಟಕದಿಂದ ಬುಧವಾರ ಆಯೋಜಿಸಿದ್ದ ಸಂಸ್ಥಾಪಕ ದಿನಾಚರಣೆ ಹಾಗೂ ರಾಜೇಂದ್ರ ಶ್ರೀಗಳ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಶ್ರೀಗಳು ಎಲ್ಲರನ್ನೂ ಸಮಾನವಾಗಿ ಕಂಡರು. ಅವರಿಂದಾಗಿ ಬಹಳಷ್ಟು ಮಂದಿ ಉತ್ತಮ ಜೀವನ ಕಂಡುಕೊಂಡಿದ್ದಾರೆ’ ಎಂದರು.</p>.<p>ಸ್ವಾಮೀಜಿ ಕುರಿತು ಮಾತನಾಡಿದ ಪೂಜಾ, ಜಯಲಕ್ಷ್ಮಿ, ಹರ್ಷಿತಾ, ಪ್ರಿಯಾ ಹಾಗೂ ರೇವತಿ ಅವರಿಗೆ ಪ್ರಮಾಣಪತ್ರ ಮತ್ತು ಪುಸ್ತಕ ಬಹುಮಾನ ನೀಡಲಾಯಿತು.</p>.<p>ಪರಿಷತ್ತಿನ ನಗರ ಘಟಕದ ಅಧ್ಯಕ್ಷ ಮ.ಗು. ಸದಾನಂದಯ್ಯ ಅಧ್ಯಕ್ಷತೆ ವಹಿಸಿದ್ದರು. ಮುಖ್ಯಶಿಕ್ಷಕ ಸುರೇಶ್, ಸ್ವಾಮಿ, ದತ್ತಿದಾನಿಗಳಾದ ಪಿ.ಬಿ. ತ್ರಿಶೂಲ್, ಪಿ.ಮಲ್ಲಿಕಾರ್ಜುನ್ ಹಾಗೂ ಶಶಿಕಲಾ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>