<p><strong>ಮೈಸೂರು</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧರಿತ ಶಿಕ್ಷಣದ ಅಗತ್ಯ ಇದ್ದು, ಶಿಕ್ಷಕರು ಆ ದಿಸೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೌರವ ಸಲಹೆಗಾರ ಸುದರ್ಶನ್ ರಾಮರಾಜು ಅಭಿಪ್ರಾಯಪಟ್ಟರು.</p>.<p>ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ‘ಸಮಾಜಕ್ಕೆ ಜ್ಞಾನದ ಬೆಳಕು ನೀಡುವ ಶಿಕ್ಷಕರಿಗೆ ಎಷ್ಟು ಗೌರವ ಸಲ್ಲಿಸಿದರೂ ಸಾಲದು. ಸೈನಿಕರು, ಕೃಷಿಕರು ಮತ್ತು ಶಿಕ್ಷಕರು – ಈ ಮೂರು ವರ್ಗದವರ ಸೇವೆಯಿಂದಾಗಿ ದೇಶ ಅಭಿವೃದ್ಧಿ ಸಾಧ್ಯವಾಗಿದ್ದು, ಶಿಕ್ಷಕರು ಸಮಾಜದ ಸತ್ಪ್ರಜೆಗಳನ್ನು ತಯಾರು ಮಾಡುವ ಶಿಲ್ಪಿಗಳಿದ್ದಂತೆ’ ಎಂದು ತಿಳಿಸಿದರು.</p>.<p>‘ಶಾಲೆಯಲ್ಲಿ ಶಿಕ್ಷಕ, ಶಿಕ್ಷಕಿಯರು ಕಲಿಸುವ ಪಾಠ, ನೀಡುವ ಮಾರ್ಗದರ್ಶನ ಸುಂದರ ಬದುಕಿಗೆ ಬುನಾದಿ. ಹೀಗಾಗಿ ನಮ್ಮ ಭವಿಷ್ಯದ ಜೀವನಕ್ಕೊಂದು ಸುಂದರ ಅಡಿಪಾಯ ಹಾಕಿಕೊಡುವ ಶಿಕ್ಷಕರಿಗೆ ಸದಾ ಋಣಿಯಾಗಿರುವುದು ಕೂಡಾ ನಮ್ಮ ಕರ್ತವ್ಯ’ ಎಂದರು.</p>.<p>ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿದರು. ಕುಲಸಚಿವೆ ವಿ.ಆರ್.ಶೈಲಜಾ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧರಿತ ಶಿಕ್ಷಣದ ಅಗತ್ಯ ಇದ್ದು, ಶಿಕ್ಷಕರು ಆ ದಿಸೆಯಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಬೇಕಿದೆ ಎಂದು ದೆಹಲಿ ಲೆಫ್ಟಿನೆಂಟ್ ಗವರ್ನರ್ ಗೌರವ ಸಲಹೆಗಾರ ಸುದರ್ಶನ್ ರಾಮರಾಜು ಅಭಿಪ್ರಾಯಪಟ್ಟರು.</p>.<p>ಮಾನಸಗಂಗೋತ್ರಿಯ ವಿಜ್ಞಾನ ಭವನದಲ್ಲಿ ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ‘ಸಮಾಜಕ್ಕೆ ಜ್ಞಾನದ ಬೆಳಕು ನೀಡುವ ಶಿಕ್ಷಕರಿಗೆ ಎಷ್ಟು ಗೌರವ ಸಲ್ಲಿಸಿದರೂ ಸಾಲದು. ಸೈನಿಕರು, ಕೃಷಿಕರು ಮತ್ತು ಶಿಕ್ಷಕರು – ಈ ಮೂರು ವರ್ಗದವರ ಸೇವೆಯಿಂದಾಗಿ ದೇಶ ಅಭಿವೃದ್ಧಿ ಸಾಧ್ಯವಾಗಿದ್ದು, ಶಿಕ್ಷಕರು ಸಮಾಜದ ಸತ್ಪ್ರಜೆಗಳನ್ನು ತಯಾರು ಮಾಡುವ ಶಿಲ್ಪಿಗಳಿದ್ದಂತೆ’ ಎಂದು ತಿಳಿಸಿದರು.</p>.<p>‘ಶಾಲೆಯಲ್ಲಿ ಶಿಕ್ಷಕ, ಶಿಕ್ಷಕಿಯರು ಕಲಿಸುವ ಪಾಠ, ನೀಡುವ ಮಾರ್ಗದರ್ಶನ ಸುಂದರ ಬದುಕಿಗೆ ಬುನಾದಿ. ಹೀಗಾಗಿ ನಮ್ಮ ಭವಿಷ್ಯದ ಜೀವನಕ್ಕೊಂದು ಸುಂದರ ಅಡಿಪಾಯ ಹಾಕಿಕೊಡುವ ಶಿಕ್ಷಕರಿಗೆ ಸದಾ ಋಣಿಯಾಗಿರುವುದು ಕೂಡಾ ನಮ್ಮ ಕರ್ತವ್ಯ’ ಎಂದರು.</p>.<p>ಕುಲಪತಿ ಪ್ರೊ.ಎನ್.ಕೆ.ಲೋಕನಾಥ್ ಮಾತನಾಡಿದರು. ಕುಲಸಚಿವೆ ವಿ.ಆರ್.ಶೈಲಜಾ ಜೊತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>