<p><strong>ಮೈಸೂರು: </strong>ಕೋವಿಡ್-19 ಹೆಚ್ಚುತ್ತಿರುವ ಸಂದರ್ಭದಲ್ಲಿ ತುರ್ತು ಆರೋಗ್ಯ ಸಮಸ್ಯೆಗಳಿಗೆ, ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಇ-ಸಂಜೀವಿನಿ-ಟೆಲಿ ಮೆಡಿಸಿನ್ಸ್ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಲ್ಲಿ ಪ್ರಾರಂಭಿಸಲಾಗಿದ್ದು, ಈಗ ಮೈಸೂರಿನಲ್ಲೂ ಜಾರಿಗೆ ತರಲಾಗಿದೆ.</p>.<p>ಇ-ಸಂಜೀವಿನಿ-ರಾಷ್ಟ್ರೀಯ ಟೆಲಿ ಸಮಾಲೋಚನಾ ಸೇವೆ (ನ್ಯಾಷನಲ್ ಟೆಲಿ ಕನ್ಸಲ್ಟೇಷನ್ ಸರ್ವಿಸ್) ಎಂಬ ಹೆಸರಿನಲ್ಲಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದ್ದು, ಇದರ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯದ ಸಮಸ್ಯೆಗಳಿಗೆ ಮನೆಯಿಂದಲೇ ವೈದ್ಯರನ್ನು ಮೊಬೈಲ್ ಮೂಲಕವೇ ಸಂಪರ್ಕಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.</p>.<p>ಟೆಲಿ ಸಮಾಲೋಚನಾ ಆರೋಗ್ಯ ಸೇವೆ ಪಡೆಯಲು ಮೊಬೈಲ್ ಅಥವಾ ಕಂಪ್ಯೂಟರ್ನಲ್ಲಿ, ಗೂಗಲ್ನಲ್ಲಿ ಇ-ಸಂಜೀವಿನಿ ಓಪಿಡಿ ಎಂದು ನಮೂದಿಸಬೇಕು. ಪರದೆಯ ಮೇಲೆ ಬರುವ ಕೇಂದ್ರ ಆರೋಗ್ಯ ಸಚಿವಾಲಯದ ಮುಖಪುಟದಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ನಂಬರ್ ಮತ್ತು ವಿಳಾಸವನ್ನು ನಮೂದಿಸಿ ಲಾಗಿನ್ ಆಗಬೇಕು. ಬಳಿಕ ಟೋಕನ್ ನಂಬರ್ ಲಭ್ಯವಾಗುವುದು. ಈ ನಂಬರ್ ನೀಡಿ ತಜ್ಞ ವೈದ್ಯರನ್ನು ವಿಡಿಯೊ ಕಾಲ್ ಮೂಲಕ ಸಂಪರ್ಕಿಸಬಹುದಾಗಿದೆ.</p>.<p>ಈ ಸೇವೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಲಭ್ಯವಿರುತ್ತದೆ. ಒಂದು ಬಾರಿ ರಿಜಿಸ್ಟರ್ ಆದರೆ ಮತ್ತೆ ರಿಜಿಸ್ಟರ್ ಆಗುವ ಅಗತ್ಯವಿಲ್ಲ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕೋವಿಡ್-19 ಹೆಚ್ಚುತ್ತಿರುವ ಸಂದರ್ಭದಲ್ಲಿ ತುರ್ತು ಆರೋಗ್ಯ ಸಮಸ್ಯೆಗಳಿಗೆ, ಆರೋಗ್ಯ ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯಿಂದ ಇ-ಸಂಜೀವಿನಿ-ಟೆಲಿ ಮೆಡಿಸಿನ್ಸ್ ಕಾರ್ಯಕ್ರಮವನ್ನು ರಾಷ್ಟ್ರಮಟ್ಟದಲ್ಲಿ ಪ್ರಾರಂಭಿಸಲಾಗಿದ್ದು, ಈಗ ಮೈಸೂರಿನಲ್ಲೂ ಜಾರಿಗೆ ತರಲಾಗಿದೆ.</p>.<p>ಇ-ಸಂಜೀವಿನಿ-ರಾಷ್ಟ್ರೀಯ ಟೆಲಿ ಸಮಾಲೋಚನಾ ಸೇವೆ (ನ್ಯಾಷನಲ್ ಟೆಲಿ ಕನ್ಸಲ್ಟೇಷನ್ ಸರ್ವಿಸ್) ಎಂಬ ಹೆಸರಿನಲ್ಲಿ ಮೊಬೈಲ್ ಆ್ಯಪ್ ಸಿದ್ಧಪಡಿಸಲಾಗಿದ್ದು, ಇದರ ಮೂಲಕ ಸಾರ್ವಜನಿಕರು ತಮ್ಮ ಆರೋಗ್ಯದ ಸಮಸ್ಯೆಗಳಿಗೆ ಮನೆಯಿಂದಲೇ ವೈದ್ಯರನ್ನು ಮೊಬೈಲ್ ಮೂಲಕವೇ ಸಂಪರ್ಕಿಸಿ ಉಚಿತ ಚಿಕಿತ್ಸೆ ಪಡೆಯಬಹುದಾಗಿದೆ.</p>.<p>ಟೆಲಿ ಸಮಾಲೋಚನಾ ಆರೋಗ್ಯ ಸೇವೆ ಪಡೆಯಲು ಮೊಬೈಲ್ ಅಥವಾ ಕಂಪ್ಯೂಟರ್ನಲ್ಲಿ, ಗೂಗಲ್ನಲ್ಲಿ ಇ-ಸಂಜೀವಿನಿ ಓಪಿಡಿ ಎಂದು ನಮೂದಿಸಬೇಕು. ಪರದೆಯ ಮೇಲೆ ಬರುವ ಕೇಂದ್ರ ಆರೋಗ್ಯ ಸಚಿವಾಲಯದ ಮುಖಪುಟದಲ್ಲಿ ರೋಗಿಯ ಹೆಸರು, ಲಿಂಗ, ವಯಸ್ಸು, ಮೊಬೈಲ್ ನಂಬರ್ ಮತ್ತು ವಿಳಾಸವನ್ನು ನಮೂದಿಸಿ ಲಾಗಿನ್ ಆಗಬೇಕು. ಬಳಿಕ ಟೋಕನ್ ನಂಬರ್ ಲಭ್ಯವಾಗುವುದು. ಈ ನಂಬರ್ ನೀಡಿ ತಜ್ಞ ವೈದ್ಯರನ್ನು ವಿಡಿಯೊ ಕಾಲ್ ಮೂಲಕ ಸಂಪರ್ಕಿಸಬಹುದಾಗಿದೆ.</p>.<p>ಈ ಸೇವೆ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆವರೆಗೆ ಲಭ್ಯವಿರುತ್ತದೆ. ಒಂದು ಬಾರಿ ರಿಜಿಸ್ಟರ್ ಆದರೆ ಮತ್ತೆ ರಿಜಿಸ್ಟರ್ ಆಗುವ ಅಗತ್ಯವಿಲ್ಲ ಎಂದು ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>