<p><strong>ಮೈಸೂರು:</strong> ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿರುವ ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗಾಗಿ 2023ರಿಂದ ಈವರೆಗೆ ಒಟ್ಟು ₹ 50.99 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಿದೆ.</p>.<p>ಮುಜರಾಯಿ ಇಲಾಖೆಯ ‘ಸಾಮಾನ್ಯ ಯೋಜನೆ’ಯಡಿ ದೇವಸ್ಥಾನಗಳಿಗೆ ಆರ್ಥಿಕ ನೆರವನ್ನು ಕೊಡಲಾಗಿದೆ. ಇದರೊಂದಿಗೆ ಆ ಧಾರ್ಮಿಕ ಕೇಂದ್ರಗಳಿಗೆ ಬರುವ ‘ಭಕ್ತರಿಗೆ’ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಕ್ರಮ ವಹಿಸಲಾಗಿದೆ. ಒಟ್ಟು 865 ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಲಾಗಿದೆ.</p>.<p>ವಿಧಾನಪರಿಷತ್ ಸದಸ್ಯ ಜೆಡಿಎಸ್ನ ಕೆ.ವಿವೇಕಾನಂದ ಅವರು ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಕೇಳಿದ್ದ ಪ್ರಶ್ನೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಪಡೆದ ಜಿಲ್ಲಾವಾರು ಮಾಹಿತಿಯನ್ನು ಒದಗಿಸಿದ್ದಾರೆ.</p>.<p><strong>ಪ್ರಸ್ತಾವದಂತೆ ಕ್ರಮ:</strong></p>.<p>ಶಿಥಿಲಾವಸ್ಥೆಯಲ್ಲಿರುವ ದೇವಾಲಯಗಳು, ಮಠಗಳು, ಸಂಸ್ಥೆಗಳ ಜೀರ್ಣೋದ್ಧಾರಕ್ಕಾಗಿ ಶಾಸಕರು, ಸಚಿವರು ಮತ್ತು ಆಯಾ ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾಗುತ್ತಿರುವ ಪ್ರಸ್ತಾವಗಳ ಅನ್ವಯ ಪರಿಶೀಲಿಸಿ ಬಜೆಟ್ನಲ್ಲಿ ಅನುದಾನ ಲಭ್ಯತೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ವಿವರ ನೀಡಿದ್ದಾರೆ.</p>.<p>ಈ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಗೆ ಅತಿ ಹೆಚ್ಚು ಅಂದರೆ ₹ 27.91 ಕೋಟಿ ಅನುದಾನ ದೊರೆತಿದೆ. ಇದರಲ್ಲಿ 2024–25ನೇ ಸಾಲೊಂದರಲ್ಲೇ ₹ 19.67 ಕೋಟಿ ನೀಡಲಾಗಿದೆ.</p>.<p>ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ‘ಶಕ್ತಿ’ ಯೋಜನೆಯ ಅನುಷ್ಠಾನದ ಕಾರಣದಿಂದಾಗಿ ದೇವಾಲಯಗಳಿಗೆ ಮಹಿಳೆಯರ ಭೇಟಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕಂತೆ, ಸೌಕರ್ಯಗಳ ವೃದ್ಧಿಗೆ ಮುಜರಾಯಿ ಇಲಾಖೆಯಿಂದ ಆದ್ಯತೆ ನೀಡಲಾಗಿದೆ ಎನ್ನುತ್ತದೆ ಇಲಾಖೆಯ ಮೂಲಗಳು. </p>.<p> <strong>ನಂಜನಗೂಡು ತಾಲ್ಲೂಕಿಗೆ ಹೆಚ್ಚು...</strong> </p><p>ಈ ಮೂರು ಸಾಲುಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ನ ದರ್ಶನ್ ಧ್ರುವನಾರಾಯಣ ಪ್ರತಿನಿಧಿಸುವ ನಂಜನಗೂಡು ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ (ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರವೂ ಈ ತಾಲ್ಲೂಕು ವ್ಯಾಪ್ತಿ ಒಳಗೊಂಡಿದೆ) ಒಟ್ಟು 158 ಸಂಸ್ಥೆಗಳಿಗೆ (ದೇವಾಲಯಗಳಿಗೆ) ಒಟ್ಟು ₹ 8.87 ಕೋಟಿ ಒದಗಿಸಲಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಪ್ರತಿನಿಧಿಸುವ ತಿ.ನರಸೀಪುರ ತಾಲ್ಲೂಕಿನ 52 ಸಂಸ್ಥೆಗಳಿಗೆ ಅನುದಾನ ಮಂಜೂರಾಗಿದ್ದು ₹ 8.48 ಕೋಟಿ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದ ವ್ಯಾಪ್ತಿಯನ್ನೂ ಒಳಗೊಂಡಿರುವ ಮೈಸೂರು ತಾಲ್ಲೂಕಿನ 104 ಸಂಸ್ಥೆಗಳಿಗೆ ಒಟ್ಟು ₹ 5.05 ಕೋಟಿ ಅನುದಾನ ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿರುವ ದೇವಸ್ಥಾನಗಳ ಅಭಿವೃದ್ಧಿ ಮತ್ತು ದುರಸ್ತಿಗಾಗಿ 2023ರಿಂದ ಈವರೆಗೆ ಒಟ್ಟು ₹ 50.99 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಒದಗಿಸಿದೆ.</p>.<p>ಮುಜರಾಯಿ ಇಲಾಖೆಯ ‘ಸಾಮಾನ್ಯ ಯೋಜನೆ’ಯಡಿ ದೇವಸ್ಥಾನಗಳಿಗೆ ಆರ್ಥಿಕ ನೆರವನ್ನು ಕೊಡಲಾಗಿದೆ. ಇದರೊಂದಿಗೆ ಆ ಧಾರ್ಮಿಕ ಕೇಂದ್ರಗಳಿಗೆ ಬರುವ ‘ಭಕ್ತರಿಗೆ’ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಕ್ರಮ ವಹಿಸಲಾಗಿದೆ. ಒಟ್ಟು 865 ಸಂಸ್ಥೆಗಳಿಗೆ ಅನುದಾನ ಮಂಜೂರು ಮಾಡಲಾಗಿದೆ.</p>.<p>ವಿಧಾನಪರಿಷತ್ ಸದಸ್ಯ ಜೆಡಿಎಸ್ನ ಕೆ.ವಿವೇಕಾನಂದ ಅವರು ವಿಧಾನಮಂಡಲ ಚಳಿಗಾಲದ ಅಧಿವೇಶನದಲ್ಲಿ ಕೇಳಿದ್ದ ಪ್ರಶ್ನೆಗೆ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರಿಸಿದ್ದು, ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಂದ ಪಡೆದ ಜಿಲ್ಲಾವಾರು ಮಾಹಿತಿಯನ್ನು ಒದಗಿಸಿದ್ದಾರೆ.</p>.<p><strong>ಪ್ರಸ್ತಾವದಂತೆ ಕ್ರಮ:</strong></p>.<p>ಶಿಥಿಲಾವಸ್ಥೆಯಲ್ಲಿರುವ ದೇವಾಲಯಗಳು, ಮಠಗಳು, ಸಂಸ್ಥೆಗಳ ಜೀರ್ಣೋದ್ಧಾರಕ್ಕಾಗಿ ಶಾಸಕರು, ಸಚಿವರು ಮತ್ತು ಆಯಾ ಜಿಲ್ಲಾಧಿಕಾರಿಗಳಿಂದ ಸ್ವೀಕೃತವಾಗುತ್ತಿರುವ ಪ್ರಸ್ತಾವಗಳ ಅನ್ವಯ ಪರಿಶೀಲಿಸಿ ಬಜೆಟ್ನಲ್ಲಿ ಅನುದಾನ ಲಭ್ಯತೆಗೆ ಅನುಗುಣವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ವಿವಿಧ ಕಾಮಗಾರಿಗಳಿಗೆ ಅನುದಾನವನ್ನು ಬಿಡುಗಡೆ ಮಾಡಲಾಗುತ್ತಿದೆ ಎಂದು ವಿವರ ನೀಡಿದ್ದಾರೆ.</p>.<p>ಈ ಪೈಕಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರಾದ ಮೈಸೂರು ಜಿಲ್ಲೆಗೆ ಅತಿ ಹೆಚ್ಚು ಅಂದರೆ ₹ 27.91 ಕೋಟಿ ಅನುದಾನ ದೊರೆತಿದೆ. ಇದರಲ್ಲಿ 2024–25ನೇ ಸಾಲೊಂದರಲ್ಲೇ ₹ 19.67 ಕೋಟಿ ನೀಡಲಾಗಿದೆ.</p>.<p>ಕೆಎಸ್ಆರ್ಟಿಸಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ‘ಶಕ್ತಿ’ ಯೋಜನೆಯ ಅನುಷ್ಠಾನದ ಕಾರಣದಿಂದಾಗಿ ದೇವಾಲಯಗಳಿಗೆ ಮಹಿಳೆಯರ ಭೇಟಿ ಪ್ರಮಾಣ ಹೆಚ್ಚಾಗುತ್ತಿದೆ. ಇದಕ್ಕೆ ತಕ್ಕಂತೆ, ಸೌಕರ್ಯಗಳ ವೃದ್ಧಿಗೆ ಮುಜರಾಯಿ ಇಲಾಖೆಯಿಂದ ಆದ್ಯತೆ ನೀಡಲಾಗಿದೆ ಎನ್ನುತ್ತದೆ ಇಲಾಖೆಯ ಮೂಲಗಳು. </p>.<p> <strong>ನಂಜನಗೂಡು ತಾಲ್ಲೂಕಿಗೆ ಹೆಚ್ಚು...</strong> </p><p>ಈ ಮೂರು ಸಾಲುಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಕಾಂಗ್ರೆಸ್ನ ದರ್ಶನ್ ಧ್ರುವನಾರಾಯಣ ಪ್ರತಿನಿಧಿಸುವ ನಂಜನಗೂಡು ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ (ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರವೂ ಈ ತಾಲ್ಲೂಕು ವ್ಯಾಪ್ತಿ ಒಳಗೊಂಡಿದೆ) ಒಟ್ಟು 158 ಸಂಸ್ಥೆಗಳಿಗೆ (ದೇವಾಲಯಗಳಿಗೆ) ಒಟ್ಟು ₹ 8.87 ಕೋಟಿ ಒದಗಿಸಲಾಗಿದೆ. ಸಮಾಜ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ. ಮಹದೇವಪ್ಪ ಅವರು ಪ್ರತಿನಿಧಿಸುವ ತಿ.ನರಸೀಪುರ ತಾಲ್ಲೂಕಿನ 52 ಸಂಸ್ಥೆಗಳಿಗೆ ಅನುದಾನ ಮಂಜೂರಾಗಿದ್ದು ₹ 8.48 ಕೋಟಿ ದೊರೆತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿನಿಧಿಸುವ ವರುಣ ಕ್ಷೇತ್ರದ ವ್ಯಾಪ್ತಿಯನ್ನೂ ಒಳಗೊಂಡಿರುವ ಮೈಸೂರು ತಾಲ್ಲೂಕಿನ 104 ಸಂಸ್ಥೆಗಳಿಗೆ ಒಟ್ಟು ₹ 5.05 ಕೋಟಿ ಅನುದಾನ ಮಂಜೂರಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>