<p><strong>ಮೈಸೂರು: </strong>ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಸಪ್ತ ದೇವಾಲಯಗಳ ಟ್ರಸ್ಟ್ ಹಾಗೂ ದೇವಾಲಯದ ಪೂಜಾರಿಗಳ ನಡುವಿನ ದೇವಸ್ಥಾನದ ಹುಂಡಿ ವಿಚಾರದ ಸಂಘರ್ಷ ದಿನದಿಂದ ದಿನಕ್ಕೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ.</p>.<p>ಎರಡೂ ಬಣದ ನಡುವಿನ ಕಿತ್ತಾಟದಿಂದ ಶಿವರಾತ್ರಿಯಂದು ದೇಗುಲಗಳಲ್ಲಿ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವೇ ಸಿಕ್ಕಿರಲಿಲ್ಲ. ತಹಶೀಲ್ದಾರ್ ದೇಗುಲಕ್ಕೆ ತೆರಳಿ ಬೀಗ ತೆರೆಸಿ, ಸಮಸ್ಯೆ ಪರಿಹಾರಕ್ಕೆ ಯತ್ನಿಸಿದರೂ ವಿವಾದ ಜಟಿಲಗೊಂಡಿದೆ.</p>.<p>ಟ್ರಸ್ಟ್ ಸದಸ್ಯರು–ಪೂಜಾರಿಗಳ ನಡುವಿನ ಕಿತ್ತಾಟ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ಸಹ ದಾಖಲಾಗಿದೆ. ಈಗಾಗಲೇ ಹುಂಡಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶವನ್ನು ನೀಡಿದೆ ಎಂಬುದು ತಿಳಿದು ಬಂದಿದೆ.</p>.<p><strong>ಹಲ್ಲೆ; ದೂರು:</strong>‘ದೇವಸ್ಥಾನದಲ್ಲಿ ಹುಂಡಿ ಪ್ರತಿಷ್ಠಾಪಿಸಲು ಮುಂದಾದ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಅಧ್ಯಕ್ಷೆಯಾದ ನನ್ನ ಮೇಲೆ ಹಲ್ಲೆ ನಡೆಸಿದ ಪೂಜಾರಿಗಳ ಸಮೂಹ, ಅವಾಚ್ಯವಾಗಿ ನಿಂದಿಸಿದೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ತಗಡೂರು ಗ್ರಾಮದ ಸಪ್ತ ದೇಗುಲಗಳ ಟ್ರಸ್ಟ್ ಅಧ್ಯಕ್ಷೆ ಶಾಂತಲಾ ಒತ್ತಾಯಿಸಿದರು.</p>.<p>‘ಟ್ರಸ್ಟ್ ನೋಂದಣಿಯಾದ ನಂತರ ಪೂಜಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂದರ್ಭ ದೇವಸ್ಥಾನದ ಹುಂಡಿಯನ್ನು ಯಾರೂ ಮುಟ್ಟಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ಪೂಜಾರಿಗಳು ಹುಂಡಿಯನ್ನು ದೇವಸ್ಥಾನದಲ್ಲಿ ಇಡಲು ಬಿಡುತ್ತಿಲ್ಲ’ ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ತಹಶೀಲ್ದಾರ್ ಸಮ್ಮುಖವೇ ಪೂಜಾರಿ ಹಾಗೂ ಮಹಿಳೆಯರ ನಡುವೆ ವಾಗ್ವಾದ ನಡೆದಿದೆ. ಈ ನಡುವೆ ಕೆಲ ಮಹಿಳೆಯರ ಮೇಲೆ ಪೂಜಾರಿಗಳು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹಲ್ಲೆ ಮಾಡಿದ ಪೂಜಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು. ಇದರ ಜತೆಯಲ್ಲೇ ದೇವಸ್ಥಾನದ ಹುಂಡಿಯನ್ನು ದೇವಸ್ಥಾನದೊಳಗೆ ಇರಿಸಬೇಕು’ ಎಂದು ಶಾಂತಲಾ ಒತ್ತಾಯಿಸಿದರು.</p>.<p>ಟ್ರಸ್ಟ್ನ ಉಪಾಧ್ಯಕ್ಷ ಜಯಶಂಕರ್, ದೊಡ್ಡಬಸವೇಗೌಡ, ಅನ್ನಪೂರ್ಣಮ್ಮ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಂಜನಗೂಡು ತಾಲ್ಲೂಕಿನ ತಗಡೂರು ಗ್ರಾಮದ ಸಪ್ತ ದೇವಾಲಯಗಳ ಟ್ರಸ್ಟ್ ಹಾಗೂ ದೇವಾಲಯದ ಪೂಜಾರಿಗಳ ನಡುವಿನ ದೇವಸ್ಥಾನದ ಹುಂಡಿ ವಿಚಾರದ ಸಂಘರ್ಷ ದಿನದಿಂದ ದಿನಕ್ಕೆ ಬೇರೆ ಬೇರೆ ಸ್ವರೂಪ ಪಡೆಯುತ್ತಿದೆ.</p>.<p>ಎರಡೂ ಬಣದ ನಡುವಿನ ಕಿತ್ತಾಟದಿಂದ ಶಿವರಾತ್ರಿಯಂದು ದೇಗುಲಗಳಲ್ಲಿ ಪೂಜೆ ಸಲ್ಲಿಸಲು ಭಕ್ತರಿಗೆ ಅವಕಾಶವೇ ಸಿಕ್ಕಿರಲಿಲ್ಲ. ತಹಶೀಲ್ದಾರ್ ದೇಗುಲಕ್ಕೆ ತೆರಳಿ ಬೀಗ ತೆರೆಸಿ, ಸಮಸ್ಯೆ ಪರಿಹಾರಕ್ಕೆ ಯತ್ನಿಸಿದರೂ ವಿವಾದ ಜಟಿಲಗೊಂಡಿದೆ.</p>.<p>ಟ್ರಸ್ಟ್ ಸದಸ್ಯರು–ಪೂಜಾರಿಗಳ ನಡುವಿನ ಕಿತ್ತಾಟ ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ದೂರು ಸಹ ದಾಖಲಾಗಿದೆ. ಈಗಾಗಲೇ ಹುಂಡಿ ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಕೋರ್ಟ್ ಆದೇಶವನ್ನು ನೀಡಿದೆ ಎಂಬುದು ತಿಳಿದು ಬಂದಿದೆ.</p>.<p><strong>ಹಲ್ಲೆ; ದೂರು:</strong>‘ದೇವಸ್ಥಾನದಲ್ಲಿ ಹುಂಡಿ ಪ್ರತಿಷ್ಠಾಪಿಸಲು ಮುಂದಾದ ಟ್ರಸ್ಟ್ನ ಪದಾಧಿಕಾರಿಗಳು ಹಾಗೂ ಅಧ್ಯಕ್ಷೆಯಾದ ನನ್ನ ಮೇಲೆ ಹಲ್ಲೆ ನಡೆಸಿದ ಪೂಜಾರಿಗಳ ಸಮೂಹ, ಅವಾಚ್ಯವಾಗಿ ನಿಂದಿಸಿದೆ. ಇವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು’ ಎಂದು ತಗಡೂರು ಗ್ರಾಮದ ಸಪ್ತ ದೇಗುಲಗಳ ಟ್ರಸ್ಟ್ ಅಧ್ಯಕ್ಷೆ ಶಾಂತಲಾ ಒತ್ತಾಯಿಸಿದರು.</p>.<p>‘ಟ್ರಸ್ಟ್ ನೋಂದಣಿಯಾದ ನಂತರ ಪೂಜಾರಿಗಳು ನ್ಯಾಯಾಲಯದ ಮೊರೆ ಹೋಗಿದ್ದರು. ಈ ಸಂದರ್ಭ ದೇವಸ್ಥಾನದ ಹುಂಡಿಯನ್ನು ಯಾರೂ ಮುಟ್ಟಬಾರದು ಎಂದು ನ್ಯಾಯಾಲಯ ಆದೇಶಿಸಿದೆ. ಆದರೆ ಪೂಜಾರಿಗಳು ಹುಂಡಿಯನ್ನು ದೇವಸ್ಥಾನದಲ್ಲಿ ಇಡಲು ಬಿಡುತ್ತಿಲ್ಲ’ ಎಂದು ಮಂಗಳವಾರ ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.</p>.<p>‘ತಹಶೀಲ್ದಾರ್ ಸಮ್ಮುಖವೇ ಪೂಜಾರಿ ಹಾಗೂ ಮಹಿಳೆಯರ ನಡುವೆ ವಾಗ್ವಾದ ನಡೆದಿದೆ. ಈ ನಡುವೆ ಕೆಲ ಮಹಿಳೆಯರ ಮೇಲೆ ಪೂಜಾರಿಗಳು ಹಲ್ಲೆ ಮಾಡಿದ್ದಾರೆ. ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ. ಹಲ್ಲೆ ಮಾಡಿದ ಪೂಜಾರಿಗಳ ಮೇಲೆ ಕಾನೂನು ಕ್ರಮ ಕೈಗೊಂಡು ನ್ಯಾಯ ಒದಗಿಸಿ ಕೊಡಬೇಕು. ಇದರ ಜತೆಯಲ್ಲೇ ದೇವಸ್ಥಾನದ ಹುಂಡಿಯನ್ನು ದೇವಸ್ಥಾನದೊಳಗೆ ಇರಿಸಬೇಕು’ ಎಂದು ಶಾಂತಲಾ ಒತ್ತಾಯಿಸಿದರು.</p>.<p>ಟ್ರಸ್ಟ್ನ ಉಪಾಧ್ಯಕ್ಷ ಜಯಶಂಕರ್, ದೊಡ್ಡಬಸವೇಗೌಡ, ಅನ್ನಪೂರ್ಣಮ್ಮ ಪತ್ರಿಕಾಗೋಷ್ಠಿಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>