<p><strong>ಮೈಸೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುತ್ತಿರುವ ಹಾಗೂ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಟೀಕಿಸಿದರು.</p><p>ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಮಾನ- ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ವರದಿ ಟೀಕಿಸಬೇಕು ಎಂದರು.</p><p>ನಾವು ಯಾವ ತಪ್ಪನ್ನೂ ಮಾಡಿಲ್ಲ. ಚಾಮುಂಡೇಶ್ವರಿ ಬಳಿ ಪ್ರಮಾಣ ಮಾಡೋಣ ಬನ್ನಿ ಎಂದು ಆಹ್ವಾನಿಸಿದ್ದೆ. ಆದರೆ, ಯಾರೂ ಆಣೆ-ಪ್ರಮಾಣಕ್ಕೆ ಬರಲಿಲ್ಲ. ಈಗ ಲೋಕಾಯುಕ್ತ ವರದಿ ಬಂದಿದೆ. ರಾಜ್ಯದ ಜನರಿಗೆ ಈಗ ಸತ್ಯ ಗೊತ್ತಾಗಿದೆ. ಸಿದ್ದರಾಮಯ್ಯ ಯಾವತ್ತೂ ಅಕ್ರಮ ಅಥವಾ ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಮೈಸೂರು ಚಲೋ ಪಾದಯಾತ್ರೆ ಮಾಡಿದರು ಎಂದರು.</p><p><strong>ಮುಡಾದಲ್ಲಿ ಅಕ್ರಮ ಮಾಡಿದ ಒಬ್ಬರನ್ನೂ ಬಿಡುವ ಪ್ರಶ್ನೆಯೇ ಇಲ್ಲ,,,</strong></p><p>50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಬಗ್ಗೆ ಪಿ.ಎನ್. ದೇಸಾಯಿ ಆಯೋಗ ತನಿಖೆ ನಡೆಸುತ್ತಿದೆ. ತನಿಖೆ ಮುಗಿದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p><p>50: 50 ಅನುಪಾತದಲ್ಲಿ ಪರಿಹಾರ ನೀಡುವ ಕಾನೂನು ಮುಡಾದಲ್ಲಿದೆ. ಅದರ ಅನ್ವಯ ಪರಿಹಾರ ನೀಡಲಾಗಿದೆ. ಆ ಕಾನೂನು ಇಲ್ಲದೇ ಪರಿಹಾರವನ್ನು ಹೇಗೆ ಕೊಡುವುದು? ಬಿಜೆಪಿಯವರ ಕಾಲದಲ್ಲೇ ಪರಿಹಾರವನ್ನು ಹೆಚ್ಚು ನೀಡಲಾಗಿದೆ.ಪಾರ್ವತಮ್ಮ ಅವರಿಗೂ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರೇ ಪರಿಹಾರ ನೀಡಿದ್ದರು ಎಂದರು.</p><p>ಮುಖ್ಯಮಂತ್ರಿ, ಮಂತ್ರಿಗಳು ತಪ್ಪು ಮಾಡಿದಾಗ ಲೋಕಾಯುಕ್ತದವರು ಜೈಲಿಗೆ ಕಳುಹಿಸಿದ ಉದಾಹರಣೆ ಇದೆ. ಈಗ ಪೂರ್ವಾಗ್ರಹಪೀಡಿತರಾಗಿ ತನಿಖೆ ನಡೆಸಿಲ್ಲ. ವಾಸ್ತವ ಸ್ಥಿತಿಯನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ ಎಂದರು.</p><p>ಮುಡಾ ದಾಖಲೆಗಳನ್ನು ತೆಗೆದುಕೊಂಡು ಹೋಗಲು ಅದೇನು ಕಡ್ಲೆಪುರಿಯಲ್ಲ. ದಾಖಲೆಗಳು ಕಾಣೆಯಾಗಿವೆ ಎಂದು ಯಾವ ವರದಿಯಲ್ಲಿ ಹೇಳಲಾಗಿದೆ? ದಾಖಲೆಗಳನ್ನು ಎತ್ತಿಕೊಂಡು ಹೋಗುವುದು ಅಷ್ಟೊಂದು ಸುಲಭವೇ? ಕ್ಯಾಮೆರಾ ಸೇರಿ ಎಲ್ಲರ ಮುಂದೆ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ ? ಅದರಲ್ಲೂ 141 ದಾಖಲೆ ಒಯ್ದಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಅವರಿಗೆ ಆ ನಂಬರ್ ನೀಡಿದವರು ಯಾರು? ಬಹುಶಃ ಈ ಆರೋಪ ಮಾಡಿದವರೇ ತೆಗೆದುಕೊಂಡು ಹೋಗಿರಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಕ್ಲೀನ್ಚಿಟ್ ನೀಡಿ ಸಲ್ಲಿಸಿರುವ ವರದಿಯನ್ನು ಟೀಕಿಸುತ್ತಿರುವ ಹಾಗೂ ಆಕ್ಷೇಪ ವ್ಯಕ್ತಪಡಿಸುತ್ತಿರುವ ಬಿಜೆಪಿಯವರಿಗೆ ಮಾನ-ಮರ್ಯಾದೆ ಇಲ್ಲ ಎಂದು ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್ ಟೀಕಿಸಿದರು.</p><p>ಇಲ್ಲಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು. ಮಾನ- ಮರ್ಯಾದೆ ಇಲ್ಲದವರು ಮಾತ್ರ ಲೋಕಾಯುಕ್ತ ವರದಿ ಟೀಕಿಸಬೇಕು ಎಂದರು.</p><p>ನಾವು ಯಾವ ತಪ್ಪನ್ನೂ ಮಾಡಿಲ್ಲ. ಚಾಮುಂಡೇಶ್ವರಿ ಬಳಿ ಪ್ರಮಾಣ ಮಾಡೋಣ ಬನ್ನಿ ಎಂದು ಆಹ್ವಾನಿಸಿದ್ದೆ. ಆದರೆ, ಯಾರೂ ಆಣೆ-ಪ್ರಮಾಣಕ್ಕೆ ಬರಲಿಲ್ಲ. ಈಗ ಲೋಕಾಯುಕ್ತ ವರದಿ ಬಂದಿದೆ. ರಾಜ್ಯದ ಜನರಿಗೆ ಈಗ ಸತ್ಯ ಗೊತ್ತಾಗಿದೆ. ಸಿದ್ದರಾಮಯ್ಯ ಯಾವತ್ತೂ ಅಕ್ರಮ ಅಥವಾ ತಪ್ಪು ಮಾಡಿಲ್ಲ. ಬಿಜೆಪಿಯವರು ಸುಳ್ಳು ಹೇಳಿಕೊಂಡು ಮೈಸೂರು ಚಲೋ ಪಾದಯಾತ್ರೆ ಮಾಡಿದರು ಎಂದರು.</p><p><strong>ಮುಡಾದಲ್ಲಿ ಅಕ್ರಮ ಮಾಡಿದ ಒಬ್ಬರನ್ನೂ ಬಿಡುವ ಪ್ರಶ್ನೆಯೇ ಇಲ್ಲ,,,</strong></p><p>50:50 ಅನುಪಾತದಲ್ಲಿ ನಿವೇಶನ ಹಂಚಿಕೆಯಲ್ಲಿ ಆಗಿರುವ ಅಕ್ರಮದ ಬಗ್ಗೆ ಪಿ.ಎನ್. ದೇಸಾಯಿ ಆಯೋಗ ತನಿಖೆ ನಡೆಸುತ್ತಿದೆ. ತನಿಖೆ ಮುಗಿದ ಮೇಲೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.</p><p>50: 50 ಅನುಪಾತದಲ್ಲಿ ಪರಿಹಾರ ನೀಡುವ ಕಾನೂನು ಮುಡಾದಲ್ಲಿದೆ. ಅದರ ಅನ್ವಯ ಪರಿಹಾರ ನೀಡಲಾಗಿದೆ. ಆ ಕಾನೂನು ಇಲ್ಲದೇ ಪರಿಹಾರವನ್ನು ಹೇಗೆ ಕೊಡುವುದು? ಬಿಜೆಪಿಯವರ ಕಾಲದಲ್ಲೇ ಪರಿಹಾರವನ್ನು ಹೆಚ್ಚು ನೀಡಲಾಗಿದೆ.ಪಾರ್ವತಮ್ಮ ಅವರಿಗೂ ಬಿಜೆಪಿಯ ಬಸವರಾಜ ಬೊಮ್ಮಾಯಿ ಅವರೇ ಪರಿಹಾರ ನೀಡಿದ್ದರು ಎಂದರು.</p><p>ಮುಖ್ಯಮಂತ್ರಿ, ಮಂತ್ರಿಗಳು ತಪ್ಪು ಮಾಡಿದಾಗ ಲೋಕಾಯುಕ್ತದವರು ಜೈಲಿಗೆ ಕಳುಹಿಸಿದ ಉದಾಹರಣೆ ಇದೆ. ಈಗ ಪೂರ್ವಾಗ್ರಹಪೀಡಿತರಾಗಿ ತನಿಖೆ ನಡೆಸಿಲ್ಲ. ವಾಸ್ತವ ಸ್ಥಿತಿಯನ್ನು ತನಿಖೆ ಮಾಡಿ ವರದಿ ನೀಡಿದ್ದಾರೆ ಎಂದರು.</p><p>ಮುಡಾ ದಾಖಲೆಗಳನ್ನು ತೆಗೆದುಕೊಂಡು ಹೋಗಲು ಅದೇನು ಕಡ್ಲೆಪುರಿಯಲ್ಲ. ದಾಖಲೆಗಳು ಕಾಣೆಯಾಗಿವೆ ಎಂದು ಯಾವ ವರದಿಯಲ್ಲಿ ಹೇಳಲಾಗಿದೆ? ದಾಖಲೆಗಳನ್ನು ಎತ್ತಿಕೊಂಡು ಹೋಗುವುದು ಅಷ್ಟೊಂದು ಸುಲಭವೇ? ಕ್ಯಾಮೆರಾ ಸೇರಿ ಎಲ್ಲರ ಮುಂದೆ ಹೇಗೆ ತೆಗೆದುಕೊಂಡು ಹೋಗಲು ಸಾಧ್ಯ ? ಅದರಲ್ಲೂ 141 ದಾಖಲೆ ಒಯ್ದಿದ್ದಾರೆ ಎಂದು ಕೆಲವರು ಹೇಳಿದ್ದಾರೆ. ಅವರಿಗೆ ಆ ನಂಬರ್ ನೀಡಿದವರು ಯಾರು? ಬಹುಶಃ ಈ ಆರೋಪ ಮಾಡಿದವರೇ ತೆಗೆದುಕೊಂಡು ಹೋಗಿರಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>