ಮೈಸೂರು: ಇಲ್ಲಿನ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್ನಲ್ಲಿ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.
ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.
ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್ನಲ್ಲಿ ಭಾನುವಾರ ಬೆಳಿಗ್ಗೆ ಶವ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದರು.
ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.