ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು | ಉದ್ಯಮಿ ಪುತ್ರನ ಶವ ಸಂಪ್‌ನಲ್ಲಿ ಪತ್ತೆ

Published 28 ಮೇ 2023, 20:49 IST
Last Updated 28 ಮೇ 2023, 20:49 IST
ಅಕ್ಷರ ಗಾತ್ರ

ಮೈಸೂರು: ಇಲ್ಲಿನ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್‌ನಲ್ಲಿ ವ್ಯಕ್ತಿಯ ಶವ ಭಾನುವಾರ ಪತ್ತೆಯಾಗಿದೆ.

ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ.

ವಿಜಯನಗರ ಮೊದಲನೇ ಹಂತದ ನಿವಾಸಿ ಕ್ರಿಸ್ಟೋ ಶನಿವಾರ ರಾತ್ರಿ ಮನೆಯಿಂದ ತೆರಳಿದ್ದರು. ತಡರಾತ್ರಿಯಾದರೂ ಬಂದಿರಲಿಲ್ಲ. ಕುಟುಂಬದವರು ಹುಡುಕುವ ಪ್ರಯತ್ನ ಮಾಡಿದ್ದರು. ನಿರ್ಮಾಣ ಹಂತದ ಕಟ್ಟಡದಲ್ಲಿನ ನೀರಿನ ಸಂಪ್‌ನಲ್ಲಿ ಭಾನುವಾರ ಬೆಳಿಗ್ಗೆ ಶವ ಸಿಕ್ಕಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು (ಯುಡಿಆರ್) ಪ್ರಕರಣ ದಾಖಲಾಗಿದೆ.

undefined undefined

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT