<p><strong>ಮೈಸೂರು: </strong>ನಗರದ ದಿ ಸಿಟಿ ಕೋ–ಆಪರೇಟಿವ್ ಬ್ಯಾಂಕ್ನ 13 ನಿರ್ದೇಶಕ ಸ್ಥಾನಗಳಿಗೆ ನ.15ರ ಭಾನುವಾರ ಚುನಾವಣೆ ನಡೆಯಲಿದೆ.</p>.<p>ಜಿದ್ದಾಜಿದ್ದಿನ ಸ್ಪರ್ಧೆ ನಡೆದಿದ್ದು, 13 ನಿರ್ದೇಶಕ ಸ್ಥಾನಗಳಿಗೆ 36 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.</p>.<p>13 ನಿರ್ದೇಶಕ ಸ್ಥಾನಗಳ ಪೈಕಿ 7 ಸಾಮಾನ್ಯ ವರ್ಗ, ತಲಾ ಎರಡು ಸ್ಥಾನ ಹಿಂದುಳಿದ ವರ್ಗ (ಎ) ಹಾಗೂ ಮಹಿಳೆ, ತಲಾ ಒಂದು ಸ್ಥಾನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.</p>.<p>ಮಾರ್ಚ್ನಲ್ಲೇ ಚುನಾವಣೆ ನಡೆಯಬೇಕಿತ್ತು. ಕೋವಿಡ್, ಲಾಕ್ಡೌನ್ನಿಂದ ಮುಂದೂಡಲ್ಪಟ್ಟಿತ್ತು. ಇದೀಗ ನಡೆದಿದೆ. ಮತದಾನ ಸಮೀಪಿಸಿದಂತೆ, ಅಂತಿಮ ಅಖಾಡದಲ್ಲಿರುವ ಅಭ್ಯರ್ಥಿಗಳು ಪ್ರಚಾರ ಬಿರುಸುಗೊಳಿಸಿದ್ದಾರೆ.</p>.<p>ಬ್ಯಾಂಕ್ನ ಅಧಿಕಾರದ ಚುಕ್ಕಾಣಿ ಹಿಡಿಯಲಿಕ್ಕಾಗಿ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬ್ಯಾಂಕ್ನ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ಮಾಜಿ ಉಪಾಧ್ಯಕ್ಷ ಎಂ.ಡಿ.ನಾಗರಾಜ್ ಅವರದ್ದು ಒಂದು ತಂಡವಾದರೆ, ಮಾಜಿ ಅಧ್ಯಕ್ಷ ಎನ್.ಪ್ರಕಾಶ್, ಎನ್.ಧ್ರುವರಾಜ್ ತಂಡವೂ ಗೆಲುವಿಗಾಗಿ ತೀವ್ರ ಹಣಾಹಣಿ ನಡೆಸಿದೆ.</p>.<p>ಬ್ಯಾಂಕ್ನಲ್ಲಿ ಒಟ್ಟು 22 ಸಾವಿರ ಸದಸ್ಯರಿದ್ದಾರೆ. ಇವರಲ್ಲಿ 21 ಸಾವಿರ ಜನರಿಗೆ ಮತದಾನದ ಹಕ್ಕಿದೆ. ಸರ್ಕಾರದ ಈಚಿನ ನಿಯಮಾವಳಿ ಪ್ರಕಾರ ಈ ಮುಂಚೆ 4,500 ಸದಸ್ಯರಿಗೆ ಮಾತ್ರ ಮತದಾನದ ಹಕ್ಕು ದೊರೆತಿತ್ತು.</p>.<p>ನಿಯಮಾವಳಿ ಕುರಿತು ಬಹುತೇಕ ಸದಸ್ಯರಿಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಮತದಾನದ ಹಕ್ಕು ಕೊಡಬೇಕು ಎಂದು ಹಲವರು ನ್ಯಾಯಾಲಯದ ಮೊರೆ ಹೊಕ್ಕಿದ್ದರು. ಇದರ ಫಲವಾಗಿ 21 ಸಾವಿರ ಸದಸ್ಯರಿಗೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ದೊರೆತಿದೆ ಎಂಬುದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ನಗರದ ದಿ ಸಿಟಿ ಕೋ–ಆಪರೇಟಿವ್ ಬ್ಯಾಂಕ್ನ 13 ನಿರ್ದೇಶಕ ಸ್ಥಾನಗಳಿಗೆ ನ.15ರ ಭಾನುವಾರ ಚುನಾವಣೆ ನಡೆಯಲಿದೆ.</p>.<p>ಜಿದ್ದಾಜಿದ್ದಿನ ಸ್ಪರ್ಧೆ ನಡೆದಿದ್ದು, 13 ನಿರ್ದೇಶಕ ಸ್ಥಾನಗಳಿಗೆ 36 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.</p>.<p>13 ನಿರ್ದೇಶಕ ಸ್ಥಾನಗಳ ಪೈಕಿ 7 ಸಾಮಾನ್ಯ ವರ್ಗ, ತಲಾ ಎರಡು ಸ್ಥಾನ ಹಿಂದುಳಿದ ವರ್ಗ (ಎ) ಹಾಗೂ ಮಹಿಳೆ, ತಲಾ ಒಂದು ಸ್ಥಾನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿದೆ.</p>.<p>ಮಾರ್ಚ್ನಲ್ಲೇ ಚುನಾವಣೆ ನಡೆಯಬೇಕಿತ್ತು. ಕೋವಿಡ್, ಲಾಕ್ಡೌನ್ನಿಂದ ಮುಂದೂಡಲ್ಪಟ್ಟಿತ್ತು. ಇದೀಗ ನಡೆದಿದೆ. ಮತದಾನ ಸಮೀಪಿಸಿದಂತೆ, ಅಂತಿಮ ಅಖಾಡದಲ್ಲಿರುವ ಅಭ್ಯರ್ಥಿಗಳು ಪ್ರಚಾರ ಬಿರುಸುಗೊಳಿಸಿದ್ದಾರೆ.</p>.<p>ಬ್ಯಾಂಕ್ನ ಅಧಿಕಾರದ ಚುಕ್ಕಾಣಿ ಹಿಡಿಯಲಿಕ್ಕಾಗಿ ಎರಡು ಬಣಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಬ್ಯಾಂಕ್ನ ಮಾಜಿ ಅಧ್ಯಕ್ಷ ಪುಟ್ಟಸ್ವಾಮಿ, ಮಾಜಿ ಉಪಾಧ್ಯಕ್ಷ ಎಂ.ಡಿ.ನಾಗರಾಜ್ ಅವರದ್ದು ಒಂದು ತಂಡವಾದರೆ, ಮಾಜಿ ಅಧ್ಯಕ್ಷ ಎನ್.ಪ್ರಕಾಶ್, ಎನ್.ಧ್ರುವರಾಜ್ ತಂಡವೂ ಗೆಲುವಿಗಾಗಿ ತೀವ್ರ ಹಣಾಹಣಿ ನಡೆಸಿದೆ.</p>.<p>ಬ್ಯಾಂಕ್ನಲ್ಲಿ ಒಟ್ಟು 22 ಸಾವಿರ ಸದಸ್ಯರಿದ್ದಾರೆ. ಇವರಲ್ಲಿ 21 ಸಾವಿರ ಜನರಿಗೆ ಮತದಾನದ ಹಕ್ಕಿದೆ. ಸರ್ಕಾರದ ಈಚಿನ ನಿಯಮಾವಳಿ ಪ್ರಕಾರ ಈ ಮುಂಚೆ 4,500 ಸದಸ್ಯರಿಗೆ ಮಾತ್ರ ಮತದಾನದ ಹಕ್ಕು ದೊರೆತಿತ್ತು.</p>.<p>ನಿಯಮಾವಳಿ ಕುರಿತು ಬಹುತೇಕ ಸದಸ್ಯರಿಗೆ ಮಾಹಿತಿಯೇ ಇಲ್ಲ. ಆದ್ದರಿಂದ ಈ ಬಾರಿಯ ಚುನಾವಣೆಯಲ್ಲಿ ಮತದಾನದ ಹಕ್ಕು ಕೊಡಬೇಕು ಎಂದು ಹಲವರು ನ್ಯಾಯಾಲಯದ ಮೊರೆ ಹೊಕ್ಕಿದ್ದರು. ಇದರ ಫಲವಾಗಿ 21 ಸಾವಿರ ಸದಸ್ಯರಿಗೆ ಚುನಾವಣೆಯಲ್ಲಿ ಮತದಾನ ಮಾಡುವ ಅವಕಾಶ ದೊರೆತಿದೆ ಎಂಬುದು ತಿಳಿದು ಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>