ಮುಸ್ಲಿಂ ಬ್ಲಾಕ್ ನಿವಾಸಿ ನ್ಯಾಯಬೆಲೆ ಅಂಗಡಿ ಮಾಲೀಕ ಮುಷರತ್ ಪಾಷಾ ಅವರ ಮನೆಯಲ್ಲಿ ಈ ಕಳ್ಳತನವಾಗಿದ್ದು, ಮುಷರತ್ ಹಾಗೂ ಸಹೋದರ ನೂರ್ ಅಹಮದ್ ಎರಡೂ ಕುಟುಂಬದವರು ಈಚೆಗೆ ಹೈದರಾಬಾದ್ ಪ್ರವಾಸಕ್ಕೆ ಹೋಗಿದ್ದರು. ಈ ವೇಳೆಯಲ್ಲಿ ಘಟನೆ ನಡೆದಿದ್ದು, ಸಿದ್ದಪ್ಪಾಜಿ ರಸ್ತೆಯ ಅರಳಿ ಮರದ ಬಳಿ ಆಧಾರ್ ಕಾರ್ಡ್ ಹಾಗೂ ವೋಟರ್ ಐಡಿ ಇತರ ದಾಖಲಾತಿಗಳನ್ನು ಬಿಸಾಡಿ ಹೋಗಿದ್ದಾರೆ. ಶುಕ್ರವಾರ ಅವರು ಮರಳಿ ಊರಿಗೆ ಬಂದಾಗ ವಿಷಯ ಗೊತ್ತಾಗಿದೆ.