<p><strong>ಹುಣಸೂರು (ಮೈಸೂರು ಜಿಲ್ಲೆ):</strong> ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಈಡಾಗಿ ತೀವ್ರವಾಗಿ ಗಾಯಗೊಂಡಿದ್ದ, ‘ಭವಿಷ್ಯದ ಅಂಬಾರಿ ಆನೆ’ ಎಂದೇ ಬಿಂಬಿತವಾಗಿದ್ದ ‘ಗೋಪಾಲಸ್ವಾಮಿ’ (39) ಬುಧವಾರ ಮೃತಪಟ್ಟಿತು. ‘ಮತ್ತಿಗೋಡು ಆನೆ ಶಿಬಿರ’ದಲ್ಲಿದ್ದ ಆನೆಯು 2012ರಿಂದ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುತ್ತಿತ್ತು.</p>.<p>‘ಮೇಯುವ ಸಲುವಾಗಿ ನೇರಳಕುಪ್ಪೆ ‘ಬಿ’ ಹಾಡಿಯ ಕ್ಯಾಂಪಿನಿಂದ ಬಿಟ್ಟಿದ್ದ ವೇಳೆಯಲ್ಲಿ, ಮಸ್ತಿಯಲ್ಲಿದ್ದ ಕಾಡಾನೆಯು ಗೋಪಾಲಸ್ವಾಮಿ ಮೇಲೆ ದಾಳಿ ಮಾಡಿ ಮುಂಗಾಲಿನ ಮೂಳೆ ಮುರಿದಿತ್ತು. ಹಿಂಭಾಗಕ್ಕೂ ತೀವ್ರವಾಗಿ ಗಾಯಗೊಳಿಸಿತ್ತು’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಾದಾಟದಲ್ಲಿ ಇದ್ದಾಗಲೇ ಗೋಪಾಲಸ್ವಾಮಿ ಮಾವುತ ಮತ್ತು ಅರಣ್ಯ ಸಿಬ್ಬಂದಿ ಕಾಡಾನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ’ ಎಂದರು.</p>.<p>‘ಮೈಸೂರು ಮೃಗಾಲಯದ ವೈದ್ಯ ಡಾ.ಮದನ್, ಇಲಾಖೆಯ ಪಶುವೈದ್ಯರಾದ ಡಾ.ರಮೇಶ್ ಮತ್ತು ಡಾ.ಚಿಟ್ಟಿಯಪ್ಪ ಮಂಗಳವಾರ ಮಧ್ಯಾಹ್ನದಿಂದಲೂ ಚಿಕಿತ್ಸೆ ನೀಡಿದ್ದರು. ಸ್ಪಂದಿಸದೇ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಮೃತಪಟ್ಟಿತು’ ಎಂದು ಮಾಹಿತಿ ನೀಡಿದರು.</p>.<p class="Subhead"><strong>ತುಂಬಲಾರದ ನಷ್ಟ</strong>: ‘ಮೂರು ವರ್ಷದ ನಂತರ ‘ಅಭಿಮನ್ಯು’ (67) ಆನೆಗೆ ಅಂಬಾರಿ ಹೊರಿಸುವಂತಿಲ್ಲ. ಗೋಪಾಲಸ್ವಾಮಿ ಅಭಿಮನ್ಯುವಿನ ಸ್ಥಾನ ತುಂಬಲಿದ್ದ. ಸೌಮ್ಯ ಸ್ವಭಾವದ ಬಲಾಢ್ಯ ಆನೆಯನ್ನು ಕಳೆದುಕೊಂಡಂತಾಗಿದೆ’ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ವಿಷಾದಿಸಿದರು.</p>.<p>ಸಕಲ ಗೌರವದೊಂದಿಗೆ ಧಾರ್ಮಿಕ ವಿಧಿವಿಧಾನದಂತೆ ಅಂತ್ಯ ಸಂಸ್ಕಾರವನ್ನು ನಡೆಸಲಾಯಿತು. ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು (ಮೈಸೂರು ಜಿಲ್ಲೆ):</strong> ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ಮಂಗಳವಾರ ಕಾಡಾನೆ ದಾಳಿಗೆ ಈಡಾಗಿ ತೀವ್ರವಾಗಿ ಗಾಯಗೊಂಡಿದ್ದ, ‘ಭವಿಷ್ಯದ ಅಂಬಾರಿ ಆನೆ’ ಎಂದೇ ಬಿಂಬಿತವಾಗಿದ್ದ ‘ಗೋಪಾಲಸ್ವಾಮಿ’ (39) ಬುಧವಾರ ಮೃತಪಟ್ಟಿತು. ‘ಮತ್ತಿಗೋಡು ಆನೆ ಶಿಬಿರ’ದಲ್ಲಿದ್ದ ಆನೆಯು 2012ರಿಂದ ದಸರಾ ಜಂಬೂಸವಾರಿಯಲ್ಲಿ ಭಾಗವಹಿಸುತ್ತಿತ್ತು.</p>.<p>‘ಮೇಯುವ ಸಲುವಾಗಿ ನೇರಳಕುಪ್ಪೆ ‘ಬಿ’ ಹಾಡಿಯ ಕ್ಯಾಂಪಿನಿಂದ ಬಿಟ್ಟಿದ್ದ ವೇಳೆಯಲ್ಲಿ, ಮಸ್ತಿಯಲ್ಲಿದ್ದ ಕಾಡಾನೆಯು ಗೋಪಾಲಸ್ವಾಮಿ ಮೇಲೆ ದಾಳಿ ಮಾಡಿ ಮುಂಗಾಲಿನ ಮೂಳೆ ಮುರಿದಿತ್ತು. ಹಿಂಭಾಗಕ್ಕೂ ತೀವ್ರವಾಗಿ ಗಾಯಗೊಳಿಸಿತ್ತು’ ಎಂದು ನಾಗರಹೊಳೆ ಹುಲಿ ಯೋಜನಾ ನಿರ್ದೇಶಕ ಹರ್ಷಕುಮಾರ್ ಚಿಕ್ಕನರಗುಂದ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>‘ಕಾದಾಟದಲ್ಲಿ ಇದ್ದಾಗಲೇ ಗೋಪಾಲಸ್ವಾಮಿ ಮಾವುತ ಮತ್ತು ಅರಣ್ಯ ಸಿಬ್ಬಂದಿ ಕಾಡಾನೆಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದರೂ ಫಲಕಾರಿಯಾಗಲಿಲ್ಲ’ ಎಂದರು.</p>.<p>‘ಮೈಸೂರು ಮೃಗಾಲಯದ ವೈದ್ಯ ಡಾ.ಮದನ್, ಇಲಾಖೆಯ ಪಶುವೈದ್ಯರಾದ ಡಾ.ರಮೇಶ್ ಮತ್ತು ಡಾ.ಚಿಟ್ಟಿಯಪ್ಪ ಮಂಗಳವಾರ ಮಧ್ಯಾಹ್ನದಿಂದಲೂ ಚಿಕಿತ್ಸೆ ನೀಡಿದ್ದರು. ಸ್ಪಂದಿಸದೇ ಬುಧವಾರ ಮಧ್ಯಾಹ್ನ 2 ಗಂಟೆ ವೇಳೆಗೆ ಮೃತಪಟ್ಟಿತು’ ಎಂದು ಮಾಹಿತಿ ನೀಡಿದರು.</p>.<p class="Subhead"><strong>ತುಂಬಲಾರದ ನಷ್ಟ</strong>: ‘ಮೂರು ವರ್ಷದ ನಂತರ ‘ಅಭಿಮನ್ಯು’ (67) ಆನೆಗೆ ಅಂಬಾರಿ ಹೊರಿಸುವಂತಿಲ್ಲ. ಗೋಪಾಲಸ್ವಾಮಿ ಅಭಿಮನ್ಯುವಿನ ಸ್ಥಾನ ತುಂಬಲಿದ್ದ. ಸೌಮ್ಯ ಸ್ವಭಾವದ ಬಲಾಢ್ಯ ಆನೆಯನ್ನು ಕಳೆದುಕೊಂಡಂತಾಗಿದೆ’ ಎಂದು ಡಿಸಿಎಫ್ ಡಾ.ವಿ.ಕರಿಕಾಳನ್ ವಿಷಾದಿಸಿದರು.</p>.<p>ಸಕಲ ಗೌರವದೊಂದಿಗೆ ಧಾರ್ಮಿಕ ವಿಧಿವಿಧಾನದಂತೆ ಅಂತ್ಯ ಸಂಸ್ಕಾರವನ್ನು ನಡೆಸಲಾಯಿತು. ಡಿಸಿಎಫ್ ಹರ್ಷಕುಮಾರ್ ಚಿಕ್ಕನರಗುಂದ, ಎಸಿಎಫ್ ದಯಾನಂದ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>