<p><strong>ಮೈಸೂರು:</strong> ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ನಗರದಲ್ಲಿ ಗುರುವಾರ ಹಲವೆಡೆ ಆಚರಿಸಲಾಯಿತು.</p>.<p>ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಗಳಿಗೆ ನಾಂದಿ ಹಾಡಿದರು. ಬಳಿಕ ಮಾತನಾಡಿದ ಅವರು, ‘ನಾಲ್ವಡಿ ಅವರ ಹೆಸರಿನಲ್ಲಿ ಜಿಲ್ಲಾಡಳಿತದಿಂದ ನಾಡಿನ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು’ ಎಂದು ಪ್ರಕಟಿಸಿದರು.</p>.<p>‘ಕೆಆರ್ಎಸ್ ಅಣೆಕಟ್ಟೆ ಕಟ್ಟುವುದು ಸಣ್ಣ ಕೆಲಸವಲ್ಲ. ಅದರಲ್ಲೂ ಒಡವೆಗಳನ್ನು ಮಾರಿ ಜನರಿಗೆ ಉಪಕಾರ ಮಾಡುವ ದೊಡ್ಡ ಕೆಲಸ ನಾಲ್ವಡಿ ಅವರಿಂದ ಆಗಿದೆ. ಇಂಥವರ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದರೆ ನನ್ನಂತಹ ರಾಜಕಾರಣಿ ಇದ್ದರೂ ದಂಡ’ ಎಂದು ಅವರು ಹೇಳಿದರು.</p>.<p>‘ಒಡೆಯರ್ ಅವರು ಜಾರಿಗೆ ತಂದ ಸಹಕಾರ ಕ್ಷೇತ್ರ ಈಗಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದೆಷ್ಟೋ ಮಂದಿಗೆ ಬೆಳಕಾಗಿದೆ. ಒಡೆಯರ್ ಅವರು ಕೊಡುಗೆ ನೀಡದ ಕ್ಷೇತ್ರಗಳಿಲ್ಲ. ಶಿಕ್ಷಣ, ನೀರಾವರಿ, ಸಹಕಾರ ಹೀಗೆ ಎಲ್ಲ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ’ ಎಂದು ಬಣ್ಣಿಸಿದರು.</p>.<p>‘ಅರಸು ಸಮುದಾಯದ ಅಭಿವೃದ್ಧಿಗೋಸ್ಕರ ನನಗೆ ಕೊಟ್ಟಿರುವ ಮನವಿ ಪತ್ರವನ್ನು ನಾನು ನಾಳೆಯೇ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಶಾಸಕರಾದ ರಾಮದಾಸ್ ಹಾಗೂ ನಾಗೇಂದ್ರ ಅವರ ಜೊತೆ ಸೇರಿ ಸಮುದಾಯಕ್ಕೆ ಬೇಕಾದ ಕೆಲಸವನ್ನು ಮಾಡಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಸಚಿವರು ತಿಳಿಸಿದರು.</p>.<p>ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ ಇತರರು ಇದ್ದರು.</p>.<p>ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಬಸವಣ್ಣನವರ ಜನ್ಮದಿನಾಚರಣೆ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಕೆ.ಉಮಾಶಂಕರ್, ಉಪಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಹಾಗೂ ನಿರ್ದೇಶಕರು ಇದ್ದರು.</p>.<p><strong>ಉಚಿತ ಮಾಸ್ಕ್ ವಿತರಣೆ</strong></p>.<p>ಚಿಕ್ಕಗಡಿಯಾರ ಬಳಿ ಮಾಸ್ಕ್ ಧರಿಸದೇ ಇದ್ದ ವ್ಯಾಪಾರಸ್ಥರಿಗೆ ನೇಸರ ಸೇವಾ ಸಂಸ್ಥೆ ವತಿಯಿಂದ ಉಚಿತವಾಗಿ ಮಾಸ್ಕ್ ವಿತರಿಸುವ ಮೂಲಕ ನಾಲ್ವಡಿ ಅವರ ಜನ್ಮದಿನವನ್ನು ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜಯಂತಿಯನ್ನು ನಗರದಲ್ಲಿ ಗುರುವಾರ ಹಲವೆಡೆ ಆಚರಿಸಲಾಯಿತು.</p>.<p>ಕೆ.ಆರ್.ವೃತ್ತದಲ್ಲಿರುವ ನಾಲ್ವಡಿ ಅವರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಚಿವ ಎಸ್.ಟಿ.ಸೋಮಶೇಖರ್ ಕಾರ್ಯಕ್ರಮಗಳಿಗೆ ನಾಂದಿ ಹಾಡಿದರು. ಬಳಿಕ ಮಾತನಾಡಿದ ಅವರು, ‘ನಾಲ್ವಡಿ ಅವರ ಹೆಸರಿನಲ್ಲಿ ಜಿಲ್ಲಾಡಳಿತದಿಂದ ನಾಡಿನ 10 ಮಂದಿ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಗುವುದು’ ಎಂದು ಪ್ರಕಟಿಸಿದರು.</p>.<p>‘ಕೆಆರ್ಎಸ್ ಅಣೆಕಟ್ಟೆ ಕಟ್ಟುವುದು ಸಣ್ಣ ಕೆಲಸವಲ್ಲ. ಅದರಲ್ಲೂ ಒಡವೆಗಳನ್ನು ಮಾರಿ ಜನರಿಗೆ ಉಪಕಾರ ಮಾಡುವ ದೊಡ್ಡ ಕೆಲಸ ನಾಲ್ವಡಿ ಅವರಿಂದ ಆಗಿದೆ. ಇಂಥವರ ವರ್ಧಂತ್ಯುತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸದಿದ್ದರೆ ನನ್ನಂತಹ ರಾಜಕಾರಣಿ ಇದ್ದರೂ ದಂಡ’ ಎಂದು ಅವರು ಹೇಳಿದರು.</p>.<p>‘ಒಡೆಯರ್ ಅವರು ಜಾರಿಗೆ ತಂದ ಸಹಕಾರ ಕ್ಷೇತ್ರ ಈಗಲೂ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದೆ. ಅದೆಷ್ಟೋ ಮಂದಿಗೆ ಬೆಳಕಾಗಿದೆ. ಒಡೆಯರ್ ಅವರು ಕೊಡುಗೆ ನೀಡದ ಕ್ಷೇತ್ರಗಳಿಲ್ಲ. ಶಿಕ್ಷಣ, ನೀರಾವರಿ, ಸಹಕಾರ ಹೀಗೆ ಎಲ್ಲ ಕ್ಷೇತ್ರಗಳಿಗೆ ಅವರು ನೀಡಿದ ಕೊಡುಗೆ ಅಪಾರ’ ಎಂದು ಬಣ್ಣಿಸಿದರು.</p>.<p>‘ಅರಸು ಸಮುದಾಯದ ಅಭಿವೃದ್ಧಿಗೋಸ್ಕರ ನನಗೆ ಕೊಟ್ಟಿರುವ ಮನವಿ ಪತ್ರವನ್ನು ನಾನು ನಾಳೆಯೇ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ. ಶಾಸಕರಾದ ರಾಮದಾಸ್ ಹಾಗೂ ನಾಗೇಂದ್ರ ಅವರ ಜೊತೆ ಸೇರಿ ಸಮುದಾಯಕ್ಕೆ ಬೇಕಾದ ಕೆಲಸವನ್ನು ಮಾಡಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸುತ್ತೇನೆ’ ಎಂದು ಸಚಿವರು ತಿಳಿಸಿದರು.</p>.<p>ಶಾಸಕರಾದ ಎಸ್.ಎ.ರಾಮದಾಸ್, ನಾಗೇಂದ್ರ ಇತರರು ಇದ್ದರು.</p>.<p>ದಿ ಮೈಸೂರು ಕೋ ಆಪರೇಟಿವ್ ಬ್ಯಾಂಕಿನಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಬಸವಣ್ಣನವರ ಜನ್ಮದಿನಾಚರಣೆ ನಡೆಯಿತು. ಬ್ಯಾಂಕಿನ ಅಧ್ಯಕ್ಷ ಕೆ.ಉಮಾಶಂಕರ್, ಉಪಾಧ್ಯಕ್ಷ ಪಡುವಾರಹಳ್ಳಿ ರಾಮಕೃಷ್ಣ ಹಾಗೂ ನಿರ್ದೇಶಕರು ಇದ್ದರು.</p>.<p><strong>ಉಚಿತ ಮಾಸ್ಕ್ ವಿತರಣೆ</strong></p>.<p>ಚಿಕ್ಕಗಡಿಯಾರ ಬಳಿ ಮಾಸ್ಕ್ ಧರಿಸದೇ ಇದ್ದ ವ್ಯಾಪಾರಸ್ಥರಿಗೆ ನೇಸರ ಸೇವಾ ಸಂಸ್ಥೆ ವತಿಯಿಂದ ಉಚಿತವಾಗಿ ಮಾಸ್ಕ್ ವಿತರಿಸುವ ಮೂಲಕ ನಾಲ್ವಡಿ ಅವರ ಜನ್ಮದಿನವನ್ನು ಆಚರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>