ಪಥ ಸಂಚಲನ ವೇಳೆಯಲ್ಲಿ ಧ್ವಜವಂದನೆ ಸ್ವೀಕರಿಸುವ ಸ್ಥಳಕ್ಕೆ ಸಾರ್ವಜನಿಕರು ಜಮಾಯಿಸಿ ಶಾಲಾ ಮಕ್ಕಳಿಗೆ ಕಿರಿಕಿರಿ ಆಗಿತ್ತು. ನಾಗರಿಕರನ್ನು ಹಿಂದಕ್ಕೆ ಕಳುಹಿಸುವಲ್ಲಿ ಪೊಲೀಸರೂ ಕೈ ಚೆಲ್ಲಿದರು. ಕಾರ್ಯಕ್ರಮ ನಿರೂಪಣೆ ಬಗ್ಗೆ ಸಾರ್ವಜನಿಕರಿಂದ ಅಪಸ್ವರ ಬಂದಿತು. ಈ ಎಲ್ಲಾ ಗೊಂದಲಗಳ ನಡುವೆ ಧ್ವನಿವರ್ಧಕವೂ ಕೆಲ ಕಾಲ ಕೈಕೊಟ್ಟಿತ್ತು.