ಮೈಸೂರು: ಉತ್ತರ ಭಾರತದಲ್ಲಿ ಉಂಟಾಗಿರುವ ಅತಿವೃಷ್ಟಿ ಯಿಂದಾಗಿ ಕುಲುಮನಾಲಿ ಹಾಗೂ ಅಮರನಾಥ ಪ್ರವಾಸಕ್ಕೆ ತೆರಳಿದವರು ಸಿಲುಕಿಕೊಂಡಿದ್ದು ಅಲ್ಲಿನ ರಾಜ್ಯ ಸರ್ಕಾರವು ರಕ್ಷಣಾ ಕಾರ್ಯ ನಡೆಸುತ್ತಿದ್ದು, ಮೈಸೂರಿನಿಂದ ತೆರಳಿದ್ದ 4 ಜನ ಸುರಕ್ಷಿತವಾಗಿದ್ದಾರೆ.
ರಾಜ್ಯದ ವಿವಿಧ ಭಾಗಗ ಳಿಂದ ತೆರಳಿರುವವರನ್ನು ರಕ್ಷಣೆ ಮಾಡಲಾಗುತ್ತಿದೆ. ಶ್ರೀನಿಧಿ, ನವ್ಯ, ವೀರ್ ಹಾಗೂ ಅವರ ಪತ್ನಿ ಪ್ಯಾಕೇಜ್ ಟೂರ್ನಲ್ಲಿ ಮೈಸೂರಿನಿಂದ ಹೋಗಿದ್ದರು. ಭಾನುವಾರ ರಾತ್ರಿಯಿಂದ ಸಂಪರ್ಕಕ್ಕೆ ಲಭ್ಯವಾಗಿರಲಿಲ್ಲ. ಈ ಬಗ್ಗೆ ಅವರ ಕುಟುಂಬ ಆತಂಕಕ್ಕೆ ಒಳಗಾಗಿತ್ತು.
‘ಕುಲು ಮನಾಲಿಗೆ ಜಿಲ್ಲೆಯಿಂದ ತೆರಳಿದ್ದ ನಾಲ್ವರೂ ಸುರಕ್ಷಿತವಾಗಿದ್ದಾರೆ. ಅಮರನಾಥ ಪ್ರವಾಸಕ್ಕೆ ತೆರಳಿದವರ ಮಾಹಿತಿ ಇಲ್ಲ’ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದರು.