ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾನು ಮಾಡಿಸಿದ್ದ ಸಮೀಕ್ಷೆ ಸಿದ್ದರಾಮಯ್ಯ ಪರವಾಗಿತ್ತು: ಯತೀಂದ್ರ

Last Updated 19 ಮಾರ್ಚ್ 2023, 19:09 IST
ಅಕ್ಷರ ಗಾತ್ರ

ತಿ.ನರಸೀಪುರ (ಮೈಸೂರು ಜಿಲ್ಲೆ): ‘ಕೋಲಾರದಲ್ಲಿ ನಾನೇ ಚುನಾವಣಾ ಸಮೀಕ್ಷೆ ಮಾಡಿಸಿದ್ದೆ. ತಂದೆ ಪರವಾಗಿಯೇ ವರದಿ ಬಂದಿತ್ತು. ಆದರೂ ಅಲ್ಲಿ ಸ್ಪರ್ಧೆ ಬೇಡ ಎಂದು ಹೈಕಮಾಂಡ್‌ ಹೇಳಿರುವುದರ ಕಾರಣ ಗೊತ್ತಾಗಿಲ್ಲ’ ಎಂದು ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.

ಭಾನುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೋಲಾರದಲ್ಲಿ ನಡೆದ ಬೇರೆ ಸಮೀಕ್ಷೆಗಳಲ್ಲೂ ಕಾಂಗ್ರೆಸ್‌ಗೆ ಪೂರಕ ವಾತಾವರಣ ಇರುವುದಾಗಿ ವರದಿಗಳು ಬಂದಿದ್ದವು. ‘ಸಿದ್ದರಾಮಯ್ಯ ಅವರು ಕೋಲಾರದಲ್ಲಿ ಸ್ಪರ್ಧಿಸುವ ಬಗ್ಗೆ ಪಕ್ಷದ ನಾಯಕರು, ಆ ಕ್ಷೇತ್ರದ ಮುಖಂಡರೊಂದಿಗೆ ಸಮಾಲೋಚಿಸಬೇಕಿದೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT