<p><strong>ಹುಣಸೂರು</strong>: ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ವೀಣಾ ಎಂ.ಬಿ.ಪ್ರಭು ಅವರ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಶ್ರೀಗಂಧ ಕಳ್ಳತನವಾಗಿದೆ.</p>.<p>ಒಂದು ವಾರದ ಹಿಂದೆ ಮನೆಯ ಹಿತ್ತಲಿನಲ್ಲಿ ಬೆಳೆಸಿದ್ದ ಶ್ರೀಗಂಧದ ಮರ ಕಳವು ಮಾಡಲು ಕಳ್ಳರು ಬಂದಿದ್ದು, ಮರ ಕಡಿಯುವ ಶಬ್ದಕ್ಕೆ ಎಚ್ಚರಗೊಂಡು ಮನೆಯವರು ಕೂಗು ಹಾಕುತ್ತಿದ್ದಂತೆ ಮರ ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದರು.</p>.<p>‘ಈ ಸಂಬಂಧ ಹುಣಸೂರು ಸಾಮಾಜಿಕ ಅರಣ್ಯ ಇಲಾಖೆ ಕಚೇರಿಗೆ ಲಿಖಿತ ದೂರು ನೀಡಿ, ಶ್ರೀಗಂಧದ ಮರ ಕಳ್ಳರು ಕತ್ತರಿಸಿದ್ದು, ಸಂರಕ್ಷಿಸಿ ಮನೆಯಲ್ಲಿ ಇಡಲಾಗಿದೆ. ಇಲಾಖೆ ಅಧೀನಕ್ಕೆ ಪಡೆಯುವಂತೆ ಕೋರಿ ಅರ್ಜಿ ಸಲ್ಲಿಸಿದ್ದೆವು. ಇಲಾಖೆ ಸಕಾಲಕ್ಕೆ ಬಾರದ ಕಾರಣ ಮರದ ದಿಮ್ಮಿಯನ್ನು ಮನೆಯಲ್ಲಿ ಇಟ್ಟಿದ್ದು, ಜು.27ರಂದು ಅಪರಿಚಿತರು ಮನೆಯಲ್ಲಿನ ಶ್ರೀಗಂಧದ ತುಂಡನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ಸಮಯದಲ್ಲಿ ಅವರನ್ನು ತಡೆಯಲು ಪ್ರಯತ್ನಿಸಿದಾಗ ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ’ ಎಂದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ನಾಗಾಪುರ ಗಿರಿಜನ ಪುನರ್ವಸತಿ ಕೇಂದ್ರದ ವೀಣಾ ಎಂ.ಬಿ.ಪ್ರಭು ಅವರ ಮನೆಯ ಹಿತ್ತಲಿನಲ್ಲಿ ಬೆಳೆದಿದ್ದ ಶ್ರೀಗಂಧ ಕಳ್ಳತನವಾಗಿದೆ.</p>.<p>ಒಂದು ವಾರದ ಹಿಂದೆ ಮನೆಯ ಹಿತ್ತಲಿನಲ್ಲಿ ಬೆಳೆಸಿದ್ದ ಶ್ರೀಗಂಧದ ಮರ ಕಳವು ಮಾಡಲು ಕಳ್ಳರು ಬಂದಿದ್ದು, ಮರ ಕಡಿಯುವ ಶಬ್ದಕ್ಕೆ ಎಚ್ಚರಗೊಂಡು ಮನೆಯವರು ಕೂಗು ಹಾಕುತ್ತಿದ್ದಂತೆ ಮರ ಸ್ಥಳದಲ್ಲೇ ಬಿಟ್ಟು ಓಡಿಹೋಗಿದ್ದರು.</p>.<p>‘ಈ ಸಂಬಂಧ ಹುಣಸೂರು ಸಾಮಾಜಿಕ ಅರಣ್ಯ ಇಲಾಖೆ ಕಚೇರಿಗೆ ಲಿಖಿತ ದೂರು ನೀಡಿ, ಶ್ರೀಗಂಧದ ಮರ ಕಳ್ಳರು ಕತ್ತರಿಸಿದ್ದು, ಸಂರಕ್ಷಿಸಿ ಮನೆಯಲ್ಲಿ ಇಡಲಾಗಿದೆ. ಇಲಾಖೆ ಅಧೀನಕ್ಕೆ ಪಡೆಯುವಂತೆ ಕೋರಿ ಅರ್ಜಿ ಸಲ್ಲಿಸಿದ್ದೆವು. ಇಲಾಖೆ ಸಕಾಲಕ್ಕೆ ಬಾರದ ಕಾರಣ ಮರದ ದಿಮ್ಮಿಯನ್ನು ಮನೆಯಲ್ಲಿ ಇಟ್ಟಿದ್ದು, ಜು.27ರಂದು ಅಪರಿಚಿತರು ಮನೆಯಲ್ಲಿನ ಶ್ರೀಗಂಧದ ತುಂಡನ್ನು ಅಪಹರಿಸಲು ಯತ್ನಿಸಿದ್ದಾರೆ. ಈ ಸಮಯದಲ್ಲಿ ಅವರನ್ನು ತಡೆಯಲು ಪ್ರಯತ್ನಿಸಿದಾಗ ಮಾರಕಾಸ್ತ್ರಗಳಿಂದ ಥಳಿಸಿದ್ದಾರೆ’ ಎಂದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>