<p><strong>ಮೈಸೂರು: </strong>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಇಚ್ಛೆ ಇದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿ ಮಂಗಳವಾರ ಬಿಜೆಪಿ ನಗರ ಮತ್ತು ಗ್ರಾಮಾಂತರ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.</p>.<p>‘ಈ ಮಾತನ್ನು ತಮಾಷೆಗೆ ಹೇಳಿರುವೆ. ಹೆಚ್ಚು ಪ್ರಚಾರ ಮಾಡಬೇಡಿ. ಈಗಾಗಲೇ ಗೆದ್ದಿರುವ ನನ್ನ ಕ್ಷೇತ್ರದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ’ ಎಂದೂ ತಿಳಿಸಿದರು.</p>.<p>ಜಿಲ್ಲಾ ಉಸ್ತುವಾರಿ ಮಂತ್ರಿಯಾದಾಗ ಅನೇಕ ಸವಾಲುಗಳು ಎದುರಾಗಬಹುದು ಎಂದು ಸಾಕಷ್ಟು ಜನರು ಹೇಳಿದ್ದರು. ಆದರೆ, ಇಲ್ಲಿ ಬಂದು ನೋಡಿದರೆ ಪಕ್ಷದಲ್ಲಿ ಯಾವುದೇ ಗುಂಪುಗಳು ಇರಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುವ ನಾಯಕರಿದ್ದರು ಎಂದು ಅವರು ಶ್ಲಾಘಿಸಿದರು.</p>.<p>ಸಂಸದ ಪ್ರತಾಪಸಿಂಹ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವ ಮಾಡಿದರು. ನಂತರ, ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಒಪ್ಪಿಗೆ ಪಡೆದೆ. ಈ ಕಾರ್ಯಕ್ಕೆ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ಹೇಳಿದರು.</p>.<p>ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಎಲ್ಲೆಡೆ ಜಯ ಗಳಿಸಬೇಕು. ಇದಕ್ಕಾಗಿ ಸಂಘಟನಾ ಚಟುವಟಿಕೆಗಳು ಚುರುಕುಗೊಳ್ಳಬೇಕು ಎಂದು ತಿಳಿಸಿದರು.</p>.<p class="Briefhead"><strong>ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಮಲ ಅರಳಿಸಲು ಕರೆ</strong></p>.<p>ಸಂಸದ ಪ್ರತಾಪಸಿಂಹ ಮಾತನಾಡಿ, ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಿದ ವಿಷಯವನ್ನೇ ಪ್ರಧಾನವಾಗಿ ಪ್ರಸ್ತಾಪಿಸಿ ಜನರ ಗಮನ ಸೆಳೆಯಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವಂತೆ ಮಾಡಬೇಕು ಎಂದು ಕರೆ ನೀಡಿದರು.</p>.<p>ಹಿಂದಿನ ಸರ್ಕಾರದ ನಾಯಕರು 4 ವರ್ಷಗಳಲ್ಲಿ ಮಾಡುತ್ತಿದ್ದ ಪ್ರವಾಸಗಳನ್ನು ಸೋಮಶೇಖರ್ ಕೇವಲ ಆರೇ ತಿಂಗಳಲ್ಲಿ ಮಾಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.</p>.<p>ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಅನಗತ್ಯ ಚರ್ಚೆಯಲ್ಲಿ ಭಾಗಿಯಾಗದೇ ಪಕ್ಷಕ್ಕೆ ಪೂರಕವಾಗಿ ವರ್ತಿಸಬೇಕು. ಸರ್ಕಾರದ ಸಾಧನೆಗಳನ್ನು ಎಲ್ಲೆಡೆ ಪ್ರಚಾರ ಮಾಡಬೇಕು ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಸೋಮಶೇಖರ್ ಅವರಿಗೆ ಬೆಳ್ಳಿಗದೆ ಹಾಗೂ ಬೃಹತ್ ಹೂವಿನ ಹಾರ ಹಾಕಿ ಸನ್ಮಾನಿಸಲಾಯಿತು.</p>.<p>ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ (ಗ್ರಾಮಾಂತರ) ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸಬೇಕು ಎಂಬ ಇಚ್ಛೆ ಇದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿ ಮಂಗಳವಾರ ಬಿಜೆಪಿ ನಗರ ಮತ್ತು ಗ್ರಾಮಾಂತರ ಸಮಿತಿ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಹೇಳಿದರು.</p>.<p>‘ಈ ಮಾತನ್ನು ತಮಾಷೆಗೆ ಹೇಳಿರುವೆ. ಹೆಚ್ಚು ಪ್ರಚಾರ ಮಾಡಬೇಡಿ. ಈಗಾಗಲೇ ಗೆದ್ದಿರುವ ನನ್ನ ಕ್ಷೇತ್ರದ ಜನತೆಗೆ ತಪ್ಪು ಸಂದೇಶ ಹೋಗುತ್ತದೆ’ ಎಂದೂ ತಿಳಿಸಿದರು.</p>.<p>ಜಿಲ್ಲಾ ಉಸ್ತುವಾರಿ ಮಂತ್ರಿಯಾದಾಗ ಅನೇಕ ಸವಾಲುಗಳು ಎದುರಾಗಬಹುದು ಎಂದು ಸಾಕಷ್ಟು ಜನರು ಹೇಳಿದ್ದರು. ಆದರೆ, ಇಲ್ಲಿ ಬಂದು ನೋಡಿದರೆ ಪಕ್ಷದಲ್ಲಿ ಯಾವುದೇ ಗುಂಪುಗಳು ಇರಲಿಲ್ಲ. ಎಲ್ಲರೂ ಒಂದು ತಂಡವಾಗಿ ಕೆಲಸ ಮಾಡುವ ನಾಯಕರಿದ್ದರು ಎಂದು ಅವರು ಶ್ಲಾಘಿಸಿದರು.</p>.<p>ಸಂಸದ ಪ್ರತಾಪಸಿಂಹ ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾವ ಮಾಡಿದರು. ನಂತರ, ಸಂಪುಟ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಒಪ್ಪಿಗೆ ಪಡೆದೆ. ಈ ಕಾರ್ಯಕ್ಕೆ ಎಲ್ಲರೂ ಅಭಿನಂದನೆಗೆ ಅರ್ಹರು ಎಂದು ಹೇಳಿದರು.</p>.<p>ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ಬಿಜೆಪಿ ಎಲ್ಲೆಡೆ ಜಯ ಗಳಿಸಬೇಕು. ಇದಕ್ಕಾಗಿ ಸಂಘಟನಾ ಚಟುವಟಿಕೆಗಳು ಚುರುಕುಗೊಳ್ಳಬೇಕು ಎಂದು ತಿಳಿಸಿದರು.</p>.<p class="Briefhead"><strong>ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಕಮಲ ಅರಳಿಸಲು ಕರೆ</strong></p>.<p>ಸಂಸದ ಪ್ರತಾಪಸಿಂಹ ಮಾತನಾಡಿ, ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೆ ಏರಿಸಿದ ವಿಷಯವನ್ನೇ ಪ್ರಧಾನವಾಗಿ ಪ್ರಸ್ತಾಪಿಸಿ ಜನರ ಗಮನ ಸೆಳೆಯಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸುವಂತೆ ಮಾಡಬೇಕು ಎಂದು ಕರೆ ನೀಡಿದರು.</p>.<p>ಹಿಂದಿನ ಸರ್ಕಾರದ ನಾಯಕರು 4 ವರ್ಷಗಳಲ್ಲಿ ಮಾಡುತ್ತಿದ್ದ ಪ್ರವಾಸಗಳನ್ನು ಸೋಮಶೇಖರ್ ಕೇವಲ ಆರೇ ತಿಂಗಳಲ್ಲಿ ಮಾಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕೆಲಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ ಎಂದು ಶ್ಲಾಘಿಸಿದರು.</p>.<p>ಬಿಜೆಪಿ ಕಾರ್ಯಕರ್ತರು ಸಾಮಾಜಿಕ ಮಾಧ್ಯಮಗಳಲ್ಲಿ ಅನಗತ್ಯ ಚರ್ಚೆಯಲ್ಲಿ ಭಾಗಿಯಾಗದೇ ಪಕ್ಷಕ್ಕೆ ಪೂರಕವಾಗಿ ವರ್ತಿಸಬೇಕು. ಸರ್ಕಾರದ ಸಾಧನೆಗಳನ್ನು ಎಲ್ಲೆಡೆ ಪ್ರಚಾರ ಮಾಡಬೇಕು ಎಂದು ಹೇಳಿದರು.</p>.<p>ಇದಕ್ಕೂ ಮುನ್ನ ಸೋಮಶೇಖರ್ ಅವರಿಗೆ ಬೆಳ್ಳಿಗದೆ ಹಾಗೂ ಬೃಹತ್ ಹೂವಿನ ಹಾರ ಹಾಕಿ ಸನ್ಮಾನಿಸಲಾಯಿತು.</p>.<p>ಶಾಸಕ ಎಲ್.ನಾಗೇಂದ್ರ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ವಿ.ರಾಜೀವ್, ಬಿಜೆಪಿ (ಗ್ರಾಮಾಂತರ) ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಳಾ ಸೋಮಶೇಖರ್, ನಗರ ಘಟಕದ ಅಧ್ಯಕ್ಷ ಶ್ರೀವತ್ಸ, ಬಿಜೆಪಿ ಉಪಾಧ್ಯಕ್ಷ ರಾಜೇಂದ್ರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>