‘ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆದಿದೆ’ ಎಂಬ ವಿಧಾನಸಭೆಯ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಅವರು, ‘ಶಿಕ್ಷಕರ ನೇಮಕಾತಿ ಹಗರಣ ಕುರಿತು ಸಿಐಡಿಯವರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಬಳಿಕ ಎಲ್ಲವೂ ಗೊತ್ತಾಗುತ್ತದೆ. ಯಾರ ಕಾಲದಲ್ಲಿ ಏನೇನು ನಡೆದಿದೆ ಎನ್ನುವುದು ತಿಳಿಯುತ್ತದೆ. ಕುಂಬಳ ಕಾಯಿ ಕಳ್ಳ ಎಂದರೆ ಅವರೇಕೆ ಹೆಗಲು ಮುಟ್ಟಿ ನೋಡಿಕೊಳ್ಳುತ್ತಿದ್ದಾರೆ. ಅಷ್ಟಕ್ಕೂ ಆ ಅಕ್ರಮ ನಡೆದದ್ದು ಯಾರ ಕಾಲದಲ್ಲಿ?’ ಎಂದು ಕೇಳಿದರು.