‘ಉಕ್ಕಲಗೆರೆ ಬೆಟ್ಟದಲ್ಲಿ ಸೆರೆ ಹಿಡಿದ ದೃಶ್ಯಗಳನ್ನು ಗಮನಿಸಿದಾಗ ಆ ಪ್ರದೇಶದಲ್ಲಿ ಚಿರತೆ ಸಂಚರಿಸಿರುವುದು ಕಂಡು ಬಂದಿದೆ. ನಮ್ಮ ತಂಡವು ಚಿರತೆಯ ಚಲನವಲನಗಳನ್ನು ಗಮನಿಸುತ್ತಿದೆ. ಬೆಟ್ಟದ ಮೇಲೇರಿ ಡ್ರೋನ್ ಬಳಸಲು ಯೋಜಿಸಲಾಗಿದೆ. ಆದಷ್ಟು ಬೇಗ ಸೆರೆ ಹಿಡಿಯುವ ವಿಶ್ವಾಸವಿದೆ’ ಎಂದು ಡಿಸಿಎಫ್ ಕಮಲಾ ಕರಿಕಾಳನ್ ತಿಳಿಸಿದರು.