<p><strong>ಮೈಸೂರು:</strong> ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ನಡೆದ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.</p><p>ಬೆಳಿಗ್ಗೆ 10.50ಕ್ಕೆ ಪಾರಾಯಣಕ್ಕೆ ಶ್ರೀಗಳು ಚಾಲನೆ ನೀಡಿದರು. ಸಾವಿರಾರು ಮಂದಿ ಎರಡು ಗಂಟೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಿದರು. ಹನುಮನ ಕುರಿತು ತುಳಸೀದಾಸರು ಅವಧಿ ಭಾಷೆಯಲ್ಲಿ ರಚಿಸಿರುವ 40 ಸ್ತೋತ್ರಗಳನ್ನು ಒಟ್ಟು 18 ಬಾರಿ ಹಾಡಲಾಯಿತು.</p><p>ಮಧ್ಯದಲ್ಲಿ ಸಚ್ಚಿದಾನಂದ ಶ್ರೀಗಳು ಸುಂದರಕಾಂಡದ ನಿರೂಪಣೆ ಮಾಡಿದರು.</p><p>ಭಕ್ತರು ಒಂದು ಕೈಯಲ್ಲಿ ಕೇಸರಿ ಧ್ವಜ ಬೀಸುತ್ತ, ಮತ್ತೊಂದು ಕೈಯಲ್ಲಿ ಶ್ಲೋಕಗಳ ಕಿರು ಹೊತ್ತಿಗೆ ಹಿಡಿದು ಹನುಮನನ್ನು ಸ್ಮರಿಸಿದರು.</p><p>ಕೆಲವು ವಿದೇಶಿಯರೂ ಪಾರಾಯಣದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.</p><p>ವೇದಿಕೆಯಲ್ಲಿದ್ದ ಹನುಮಂತನ ಪ್ರತಿಮೆಗೆ ಬೆಳಿಗ್ಗೆ ಅವಧೂತ ದತ್ತ ಪೀಠದ ಕಿರಿಯಶ್ರೀ ದತ್ತ ವಿಜಯಾನಂದ ಸ್ವಾಮೀಜಿ ನೇತೃತ್ವದಲ್ಲಿ ಪವಮಾನ ಹೋಮ ನಡೆಯಿತು.</p><p>ಎಲ್ಲ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p><p>‘ಕರ್ನಾಟಕ ಹನುಮಂತನ ನಾಡು. ಹನುಮಾನ್ ಚಾಲೀಸಾ ಎಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ಹಾಡಬಹುದಾದ ಸುಲಭ ಹಾಗೂ ಶಕ್ತಿಶಾಲಿ ಸ್ತೋತ್ರ. ಹನುಮಂತನು ರಕ್ಷಕನಾಗಿದ್ದು, ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತಾನೆ. ಲೋಕ ಕಲ್ಯಾಣಕ್ಕಾಗಿ ಈ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿದೆ’ ಎಂದು ಸಚ್ಚಿದಾನಂದ ಸ್ವಾಮೀಜಿ ಹೇಳಿದರು.</p><p>ಚಲನಚಿತ್ರ ಕಲಾವಿದರಾದ ವಸಿಷ್ಠ ಸಿಂಹ–ಹರಿಪ್ರಿಯಾ ದಂಪತಿ ಮಗುವಿನೊಂದಿಗೆ ಪಾಲ್ಗೊಂಡರು.</p><p>ಶಾಸಕರಾದ ಜಿ.ಟಿ. ದೇವೇಗೌಡ, ಟಿ.ಎಸ್. ಶ್ರೀವತ್ಸ, ಕೆ. ಹರೀಶ್ಗೌಡ, ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ಮಹಾರಾಜ ಕಾಲೇಜು ಮೈದಾನದಲ್ಲಿ ಶನಿವಾರ ಅವಧೂತ ದತ್ತ ಪೀಠದ ಗಣಪತಿ ಸಚ್ಚಿದಾನಂದ ಶ್ರೀಗಳ ನೇತೃತ್ವದಲ್ಲಿ ನಡೆದ ಹನುಮಾನ್ ಚಾಲೀಸಾ ಪಾರಾಯಣ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡರು.</p><p>ಬೆಳಿಗ್ಗೆ 10.50ಕ್ಕೆ ಪಾರಾಯಣಕ್ಕೆ ಶ್ರೀಗಳು ಚಾಲನೆ ನೀಡಿದರು. ಸಾವಿರಾರು ಮಂದಿ ಎರಡು ಗಂಟೆ ಸಾಮೂಹಿಕವಾಗಿ ಹನುಮಾನ್ ಚಾಲೀಸಾ ಪಠಿಸಿದರು. ಹನುಮನ ಕುರಿತು ತುಳಸೀದಾಸರು ಅವಧಿ ಭಾಷೆಯಲ್ಲಿ ರಚಿಸಿರುವ 40 ಸ್ತೋತ್ರಗಳನ್ನು ಒಟ್ಟು 18 ಬಾರಿ ಹಾಡಲಾಯಿತು.</p><p>ಮಧ್ಯದಲ್ಲಿ ಸಚ್ಚಿದಾನಂದ ಶ್ರೀಗಳು ಸುಂದರಕಾಂಡದ ನಿರೂಪಣೆ ಮಾಡಿದರು.</p><p>ಭಕ್ತರು ಒಂದು ಕೈಯಲ್ಲಿ ಕೇಸರಿ ಧ್ವಜ ಬೀಸುತ್ತ, ಮತ್ತೊಂದು ಕೈಯಲ್ಲಿ ಶ್ಲೋಕಗಳ ಕಿರು ಹೊತ್ತಿಗೆ ಹಿಡಿದು ಹನುಮನನ್ನು ಸ್ಮರಿಸಿದರು.</p><p>ಕೆಲವು ವಿದೇಶಿಯರೂ ಪಾರಾಯಣದಲ್ಲಿ ಪಾಲ್ಗೊಂಡಿದ್ದು ವಿಶೇಷವಾಗಿತ್ತು.</p><p>ವೇದಿಕೆಯಲ್ಲಿದ್ದ ಹನುಮಂತನ ಪ್ರತಿಮೆಗೆ ಬೆಳಿಗ್ಗೆ ಅವಧೂತ ದತ್ತ ಪೀಠದ ಕಿರಿಯಶ್ರೀ ದತ್ತ ವಿಜಯಾನಂದ ಸ್ವಾಮೀಜಿ ನೇತೃತ್ವದಲ್ಲಿ ಪವಮಾನ ಹೋಮ ನಡೆಯಿತು.</p><p>ಎಲ್ಲ ಭಕ್ತರಿಗೆ ಪ್ರಸಾದದ ವ್ಯವಸ್ಥೆ ಮಾಡಲಾಗಿತ್ತು.</p><p>‘ಕರ್ನಾಟಕ ಹನುಮಂತನ ನಾಡು. ಹನುಮಾನ್ ಚಾಲೀಸಾ ಎಂದರೆ ಚಿಕ್ಕವರಿಂದ ದೊಡ್ಡವರವರೆಗೂ ಎಲ್ಲರೂ ಹಾಡಬಹುದಾದ ಸುಲಭ ಹಾಗೂ ಶಕ್ತಿಶಾಲಿ ಸ್ತೋತ್ರ. ಹನುಮಂತನು ರಕ್ಷಕನಾಗಿದ್ದು, ಕಷ್ಟದ ಸಮಯದಲ್ಲಿ ನಮ್ಮನ್ನು ಕಾಪಾಡುತ್ತಾನೆ. ಲೋಕ ಕಲ್ಯಾಣಕ್ಕಾಗಿ ಈ ಸಾಮೂಹಿಕ ಪ್ರಾರ್ಥನೆ ಆಯೋಜಿಸಲಾಗಿದೆ’ ಎಂದು ಸಚ್ಚಿದಾನಂದ ಸ್ವಾಮೀಜಿ ಹೇಳಿದರು.</p><p>ಚಲನಚಿತ್ರ ಕಲಾವಿದರಾದ ವಸಿಷ್ಠ ಸಿಂಹ–ಹರಿಪ್ರಿಯಾ ದಂಪತಿ ಮಗುವಿನೊಂದಿಗೆ ಪಾಲ್ಗೊಂಡರು.</p><p>ಶಾಸಕರಾದ ಜಿ.ಟಿ. ದೇವೇಗೌಡ, ಟಿ.ಎಸ್. ಶ್ರೀವತ್ಸ, ಕೆ. ಹರೀಶ್ಗೌಡ, ಕೆಪಿಸಿಸಿ ಸದಸ್ಯ ಎಚ್.ವಿ. ರಾಜೀವ್ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>