<p><strong>ಹುಣಸೂರು</strong>: ಹನಗೋಡು ಹೋಬಳಿ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಹೆಮ್ಮಿಗೆ ಗ್ರಾಮದಲ್ಲಿ ಹಗಲು ವೇಳೆಯೇ ಹಸು ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ.</p>.<p>ಗ್ರಾಮದ ನಿವಾಸಿ ಚೆಲುವೇಗೌಡ ಅವರಿಗೆ ಸೇರಿದ ಹಸು ಹೊಲದಲ್ಲಿ ಮೇಯುತ್ತಿದ್ದಾಗ ಹುಲಿ ದಾಳಿ ನಡೆಸಿ ತಿಂದು ಹೋಗಿದೆ. ಈ ಸಂಬಂಧ ವನ್ಯಜೀವಿ ವಿಭಾಗದ ವಲಯ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಭೇಟಿ ನೀಡಿದರು.</p>.<p><strong>ಕೂಂಬಿಂಗ್</strong>: ಹುಲಿ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಂಬಿಂಗ್ ನಡೆಸಿ ಅರಣ್ಯದಿಂದ ಹೊರ ಬಂದಿರುವ ಹುಲಿಯನ್ನು ಸೆರೆಹಿಡಿಯಬೇಕು’ ಎಂದು ಹೆಮ್ಮಿಗೆ ಪಂಚಾಯಿತಿ ಅಧ್ಯಕ್ಷ ಪಾಪಣ್ಣ ಒತ್ತಾಯಿಸಿದ್ದಾರೆ.</p>.<p><strong>ಚಿರತೆ ಸೆರೆ</strong>: ಹನಗೋಡು ಹೋಬಳಿ ವಡ್ಡಂಬಾಳು ಗ್ರಾಮದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಬೋನು ಇಟ್ಟು ಸೆರೆ ಹಿಡಿದಿದೆ.</p>.<p>‘ಗ್ರಾಮದ ಸಿದ್ದರಾಜು ಅವರ ಮನೆ ಆಸುಪಾಸಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ಕುರಿತು ಸಾರ್ವಜನಿಕರು ಇಲಾಖೆಗೆ ನೀಡಿದ ದೂರಿನ ಮೇಲೆ ಬೋನು ಇಡಲಾಗಿತ್ತು. ಗುರುವಾರ ಎರಡು ವರ್ಷದ ಹೆಣ್ಣು ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ದೂರಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು</strong>: ಹನಗೋಡು ಹೋಬಳಿ ಭಾಗದಲ್ಲಿ ಹುಲಿ ದಾಳಿ ಮುಂದುವರಿದಿದ್ದು, ಹೆಮ್ಮಿಗೆ ಗ್ರಾಮದಲ್ಲಿ ಹಗಲು ವೇಳೆಯೇ ಹಸು ಮೇಲೆ ಹುಲಿ ದಾಳಿ ಮಾಡಿ ಕೊಂದುಹಾಕಿದೆ.</p>.<p>ಗ್ರಾಮದ ನಿವಾಸಿ ಚೆಲುವೇಗೌಡ ಅವರಿಗೆ ಸೇರಿದ ಹಸು ಹೊಲದಲ್ಲಿ ಮೇಯುತ್ತಿದ್ದಾಗ ಹುಲಿ ದಾಳಿ ನಡೆಸಿ ತಿಂದು ಹೋಗಿದೆ. ಈ ಸಂಬಂಧ ವನ್ಯಜೀವಿ ವಿಭಾಗದ ವಲಯ ಅರಣ್ಯ ಇಲಾಖೆಗೆ ಸ್ಥಳೀಯರು ಮಾಹಿತಿ ನೀಡಿದ್ದು, ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ಭೇಟಿ ನೀಡಿದರು.</p>.<p><strong>ಕೂಂಬಿಂಗ್</strong>: ಹುಲಿ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿ ಕೂಂಬಿಂಗ್ ನಡೆಸಿ ಅರಣ್ಯದಿಂದ ಹೊರ ಬಂದಿರುವ ಹುಲಿಯನ್ನು ಸೆರೆಹಿಡಿಯಬೇಕು’ ಎಂದು ಹೆಮ್ಮಿಗೆ ಪಂಚಾಯಿತಿ ಅಧ್ಯಕ್ಷ ಪಾಪಣ್ಣ ಒತ್ತಾಯಿಸಿದ್ದಾರೆ.</p>.<p><strong>ಚಿರತೆ ಸೆರೆ</strong>: ಹನಗೋಡು ಹೋಬಳಿ ವಡ್ಡಂಬಾಳು ಗ್ರಾಮದಲ್ಲಿ ಇತ್ತೀಚೆಗೆ ಕಾಣಿಸಿಕೊಂಡಿದ್ದ ಚಿರತೆಯನ್ನು ಅರಣ್ಯ ಇಲಾಖೆ ಬೋನು ಇಟ್ಟು ಸೆರೆ ಹಿಡಿದಿದೆ.</p>.<p>‘ಗ್ರಾಮದ ಸಿದ್ದರಾಜು ಅವರ ಮನೆ ಆಸುಪಾಸಿನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಈ ಕುರಿತು ಸಾರ್ವಜನಿಕರು ಇಲಾಖೆಗೆ ನೀಡಿದ ದೂರಿನ ಮೇಲೆ ಬೋನು ಇಡಲಾಗಿತ್ತು. ಗುರುವಾರ ಎರಡು ವರ್ಷದ ಹೆಣ್ಣು ಚಿರತೆ ಸೆರೆಯಾಗಿದ್ದು, ಗ್ರಾಮಸ್ಥರಲ್ಲಿ ಆತಂಕ ದೂರಾಗಿದೆ’ ಎಂದು ವಲಯ ಅರಣ್ಯಾಧಿಕಾರಿ ಸುಬ್ರಹ್ಮಣ್ಯ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>