<p>ಎಚ್.ಡಿ.ಕೋಟೆ: ‘10 ವರ್ಷಗಳ ಅವಧಿಯಲ್ಲಿ ಸುಮಾರು 161 ಮಂದಿ ಹುಲಿ ದಾಳಿಗೆ ತುತ್ತಾಗಿದ್ದು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಶುಕ್ರವಾರ ನಡೆದ ‘ಜನರೊಂದಿಗೆ ಜನತಾದಳ’ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮೈಸೂರು ಜಿಲ್ಲೆಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ 21 ಹುಲಿಗಳು ಕಾಡಿನಿಂದ ನಾಡಿಗೆ ಬಂದು ಇಲ್ಲಿನ ಜನರಿಗೆ ಉಪಟಳ ನೀಡಿರುವುದು ವರದಿಯಾಗಿದೆ. ಹುಲಿ ಉಪಟಳ ತಡೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ’ ಎಂದರು.</p>.<p>‘ಎಚ್.ಡಿ. ಕೋಟೆಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. 1989ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರವನ್ನು ಪಕ್ಷ ಗೆದ್ದಾಗ ಎಚ್.ಡಿ. ಕೋಟೆ ಕ್ಷೇತ್ರವೂ ಒಂದಾಗಿತ್ತು. ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಮುಖಂಡ ಕೆ.ಎಂ. ಕೃಷ್ಣನಾಯಕ ಅವರೇ ಈ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ’ ಎಂದರು.</p>.<p>ಮುಖಂಡ ಕೆ.ಎಂ. ಕೃಷ್ಣನಾಯಕ ಮಾತನಾಡಿ, ‘ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷದಿಂದ ಟಿಕೆಟ್ ಕೈತಪ್ಪಿತ್ತು, ಆಗ ಬಿಜೆಪಿಗೆ ಹೋಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದೆ, ಅದೇ ರೀತಿ ಈಗ ಜೆಡಿಎಸ್ಗೆ ಬಂದಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದೇನೆ, ಬಹುಮತಗಳ ಅಂತರದಿಂದ ಜಯಗಳಿಸುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ ಮಾತನಾಡಿದರು.</p>.<p>ಮಾಜಿ ಶಾಸಕ ಸಾ.ರಾ. ಮಹೇಶ್, ಪರಿಷತ್ ಸದಸ್ಯ ಮಂಜೇಗೌಡ, ಮುಖಂಡರಾದ ಮಹದೇವು, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ನಗರಾಧ್ಯಕ್ಷ ಮಂಜು ಸೇರಿದಂತೆ ಮುಖಂಡರು ಇದ್ದರು.</p>.<div><blockquote>ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆ ನೀಡಲು ಪ್ರತಿಯೊಬ್ಬ ಸಾರ್ವಜನಿಕನ ಮೇಲೆ ₹1.17 ಲಕ್ಷ ಸಾಲ ಮಾಡಿದೆ ಅಲ್ಲದೇ ಹಾಲಿನಿಂದ ಆಲ್ಕೋಹಾಲ್ವರೆಗೂ ಬೆಲೆಗಳನ್ನು ದುಪ್ಪಟ್ಟು ಮಾಡಿದೆ </blockquote><span class="attribution">ಸಾ.ರಾ. ಮಹೇಶ್ ಮಾಜಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಎಚ್.ಡಿ.ಕೋಟೆ: ‘10 ವರ್ಷಗಳ ಅವಧಿಯಲ್ಲಿ ಸುಮಾರು 161 ಮಂದಿ ಹುಲಿ ದಾಳಿಗೆ ತುತ್ತಾಗಿದ್ದು, ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಪಟ್ಟಣದಲ್ಲಿ ಜೆಡಿಎಸ್ ವತಿಯಿಂದ ಶುಕ್ರವಾರ ನಡೆದ ‘ಜನರೊಂದಿಗೆ ಜನತಾದಳ’ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ಮೈಸೂರು ಜಿಲ್ಲೆಯಲ್ಲಿ ಮೂರು ವರ್ಷಗಳ ಅವಧಿಯಲ್ಲಿ 21 ಹುಲಿಗಳು ಕಾಡಿನಿಂದ ನಾಡಿಗೆ ಬಂದು ಇಲ್ಲಿನ ಜನರಿಗೆ ಉಪಟಳ ನೀಡಿರುವುದು ವರದಿಯಾಗಿದೆ. ಹುಲಿ ಉಪಟಳ ತಡೆಗೆ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ’ ಎಂದರು.</p>.<p>‘ಎಚ್.ಡಿ. ಕೋಟೆಗೂ ಮಾಜಿ ಪ್ರಧಾನಿ ದೇವೇಗೌಡರ ಕುಟುಂಬಕ್ಕೂ ಅವಿನಾಭಾವ ಸಂಬಂಧವಿದೆ. 1989ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಎರಡು ಕ್ಷೇತ್ರವನ್ನು ಪಕ್ಷ ಗೆದ್ದಾಗ ಎಚ್.ಡಿ. ಕೋಟೆ ಕ್ಷೇತ್ರವೂ ಒಂದಾಗಿತ್ತು. ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ಮುಖಂಡ ಕೆ.ಎಂ. ಕೃಷ್ಣನಾಯಕ ಅವರೇ ಈ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ’ ಎಂದರು.</p>.<p>ಮುಖಂಡ ಕೆ.ಎಂ. ಕೃಷ್ಣನಾಯಕ ಮಾತನಾಡಿ, ‘ಕಳೆದ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಈ ಪಕ್ಷದಿಂದ ಟಿಕೆಟ್ ಕೈತಪ್ಪಿತ್ತು, ಆಗ ಬಿಜೆಪಿಗೆ ಹೋಗಿ ಸ್ಪರ್ಧಿಸಿ ಎರಡನೇ ಸ್ಥಾನ ಪಡೆದಿದ್ದೆ, ಅದೇ ರೀತಿ ಈಗ ಜೆಡಿಎಸ್ಗೆ ಬಂದಿದ್ದು ಪಕ್ಷ ಸಂಘಟನೆ ಮಾಡುತ್ತಿದ್ದೇನೆ, ಬಹುಮತಗಳ ಅಂತರದಿಂದ ಜಯಗಳಿಸುತ್ತೇನೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>ಹುಣಸೂರು ಶಾಸಕ ಜಿ.ಡಿ. ಹರೀಶ್ಗೌಡ ಮಾತನಾಡಿದರು.</p>.<p>ಮಾಜಿ ಶಾಸಕ ಸಾ.ರಾ. ಮಹೇಶ್, ಪರಿಷತ್ ಸದಸ್ಯ ಮಂಜೇಗೌಡ, ಮುಖಂಡರಾದ ಮಹದೇವು, ಜಿಲ್ಲಾಧ್ಯಕ್ಷ ಅಶ್ವಿನ್ ಕುಮಾರ್, ನಗರಾಧ್ಯಕ್ಷ ಮಂಜು ಸೇರಿದಂತೆ ಮುಖಂಡರು ಇದ್ದರು.</p>.<div><blockquote>ರಾಜ್ಯ ಸರ್ಕಾರವು ಪಂಚ ಗ್ಯಾರಂಟಿ ಯೋಜನೆ ನೀಡಲು ಪ್ರತಿಯೊಬ್ಬ ಸಾರ್ವಜನಿಕನ ಮೇಲೆ ₹1.17 ಲಕ್ಷ ಸಾಲ ಮಾಡಿದೆ ಅಲ್ಲದೇ ಹಾಲಿನಿಂದ ಆಲ್ಕೋಹಾಲ್ವರೆಗೂ ಬೆಲೆಗಳನ್ನು ದುಪ್ಪಟ್ಟು ಮಾಡಿದೆ </blockquote><span class="attribution">ಸಾ.ರಾ. ಮಹೇಶ್ ಮಾಜಿ ಶಾಸಕ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>