<p><strong>ಸರಗೂರು (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ದಂಡನಾಯಕ ಬಲಿಯಾಗಿದ್ದು, ಸ್ಥಳಕ್ಕಾಗಮಿಸಿದ ಮಲೆಯೂರು ಆರ್ಎಫ್ಒ ಅಮೃತಾ ಅವರ ಮೇಲೆ ಮೃತ ವ್ಯಕ್ತಿಯ ಕುಟುಂಬದ ಮಹಿಳೆಯರು ಹಲ್ಲೆ ನಡೆಸಿದ್ದಾರೆ.</p><p>'ದಂಡನಾಯಕ ಶುಕ್ರವಾರ ಬೆಳಿಗ್ಗೆ ತನ್ನ ಜಮೀನಿಗೆ ತೆರಳಿ ಎತ್ತುಗಳ ಮೂಲಕ ಹೊಲ ಉಳುತ್ತಿದ್ದಾಗ ಹುಲಿ ದಾಳಿ ಮಾಡಿತ್ತು. ಜಮೀನು ಮಲೆಯೂರು ಅರಣ್ಯ ಪ್ರದೇಶದ ಹತ್ತಿರವೇ ಇರುವ ಕಾರಣ ಅಮೃತಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಮಹಿಳೆಯರು ಅಧಿಕಾರಿ ಹಾಗೂ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.</p><p>'ತಕ್ಷಣವೇ ಸರಗೂರು ಠಾಣಾ ಪೊಲೀಸರು ಅಮೃತಾ ಅವರಿಗೆ ರಕ್ಷಣೆ ನೀಡಿ ಅಲ್ಲಿಂದ ಕರೆದೊಯ್ದಿದ್ದಾರೆ' ಎನ್ನಲಾಗಿದೆ.</p><p>'ಪದೇ ಪದೇ ಹುಲಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದಲ್ಲಿ ಹುಲಿ ಹೆಜ್ಜೆ ಇರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಬೋನು ಇಟ್ಟಿಲ್ಲ' ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಮೈಸೂರು: ಸರಗೂರು ಬಳಿ ಹುಲಿ ದಾಳಿಗೆ ಮತ್ತೊಬ್ಬ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು (ಮೈಸೂರು ಜಿಲ್ಲೆ):</strong> ತಾಲ್ಲೂಕಿನ ಹಳೆ ಹೆಗ್ಗುಡಿಲು ಗ್ರಾಮದಲ್ಲಿ ಹುಲಿ ದಾಳಿಗೆ ರೈತ ದಂಡನಾಯಕ ಬಲಿಯಾಗಿದ್ದು, ಸ್ಥಳಕ್ಕಾಗಮಿಸಿದ ಮಲೆಯೂರು ಆರ್ಎಫ್ಒ ಅಮೃತಾ ಅವರ ಮೇಲೆ ಮೃತ ವ್ಯಕ್ತಿಯ ಕುಟುಂಬದ ಮಹಿಳೆಯರು ಹಲ್ಲೆ ನಡೆಸಿದ್ದಾರೆ.</p><p>'ದಂಡನಾಯಕ ಶುಕ್ರವಾರ ಬೆಳಿಗ್ಗೆ ತನ್ನ ಜಮೀನಿಗೆ ತೆರಳಿ ಎತ್ತುಗಳ ಮೂಲಕ ಹೊಲ ಉಳುತ್ತಿದ್ದಾಗ ಹುಲಿ ದಾಳಿ ಮಾಡಿತ್ತು. ಜಮೀನು ಮಲೆಯೂರು ಅರಣ್ಯ ಪ್ರದೇಶದ ಹತ್ತಿರವೇ ಇರುವ ಕಾರಣ ಅಮೃತಾ ಸ್ಥಳಕ್ಕೆ ತೆರಳಿದ್ದರು. ಈ ವೇಳೆ ಮಹಿಳೆಯರು ಅಧಿಕಾರಿ ಹಾಗೂ ಸಿಬ್ಬಂದಿಗೆ ಹಲ್ಲೆ ನಡೆಸಿದ್ದಾರೆ' ಎಂದು ಮೂಲಗಳು ತಿಳಿಸಿವೆ.</p><p>'ತಕ್ಷಣವೇ ಸರಗೂರು ಠಾಣಾ ಪೊಲೀಸರು ಅಮೃತಾ ಅವರಿಗೆ ರಕ್ಷಣೆ ನೀಡಿ ಅಲ್ಲಿಂದ ಕರೆದೊಯ್ದಿದ್ದಾರೆ' ಎನ್ನಲಾಗಿದೆ.</p><p>'ಪದೇ ಪದೇ ಹುಲಿ ದಾಳಿ ನಡೆಸುತ್ತಿದ್ದರೂ ಅರಣ್ಯ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಗ್ರಾಮದಲ್ಲಿ ಹುಲಿ ಹೆಜ್ಜೆ ಇರುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಬೋನು ಇಟ್ಟಿಲ್ಲ' ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಮೈಸೂರು: ಸರಗೂರು ಬಳಿ ಹುಲಿ ದಾಳಿಗೆ ಮತ್ತೊಬ್ಬ ಸಾವು.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>