<p><strong>ಮೈಸೂರು</strong>: ‘ಕಾಡಂಚಿನಲ್ಲಿ ಹುಲಿಗಳ ದಾಳಿ ಜಾಸ್ತಿಯಾಗಿರುವುದಕ್ಕೆ ಸಫಾರಿ ಟ್ರಿಪ್ ಹೆಚ್ಚಳ ಅಥವಾ ರೆಸಾರ್ಟ್ ನಿರ್ಮಾಣವಾಗಿರುವುದು ಕಾರಣವಲ್ಲ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು.</p><p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ಹೆಚ್ಚುತ್ತಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಮರ್ಪಕವಾದ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.</p><p>‘ದತ್ತಾಂಶಗಳನ್ನು ಪರಿಶೀಲಿಸಬೇಕು. ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ ಎಂದು ನೋಡಬೇಕು. ಪ್ರಕೃತಿಯೇ ಪ್ರಕೃತಿಯನ್ನು ಕಾಪಾಡಿಕೊಳ್ಳುತ್ತದೆ.</p><p>ಕಾಡಂಚಿನಲ್ಲಿ ಮನುಷ್ಯನ ಅತಿಯಾದ ಹಸ್ತಕ್ಷೇಪ ತಪ್ಪಬೇಕು. ಮನುಷ್ಯ ಪ್ರಕೃತಿಗೆ ಕೈ ಹಾಕುವುದು ಬೇಡ’ ಎಂದು ಪ್ರತಿಕ್ರಿಯಿಸಿದರು.</p><p>‘ಇತ್ತೀಚೆಗೆ ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಅವು ಕಾಡಿನಿಂದ ಹೊರಬರುತ್ತಿವೆ. ಇದನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಒಳ್ಳೆಯ ಯೋಜನೆ ರೂಪಿಸಬೇಕು. ಜನರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p><p>‘ರೆಸಾರ್ಟ್ಗಳಿಂದ, ಸಫಾರಿ ಸಮಯ (ಟ್ರಿಪ್) ಹೆಚ್ಚಳದಿಂದ ಹುಲಿಗಳ ದಾಳಿ ಹೆಚ್ಚುತ್ತಿಲ್ಲ. ಈ ಬಗ್ಗೆ ಸಮಗ್ರ ಅಧ್ಯಯನ ಆಗಬೇಕು. ಅರಣ್ಯದಲ್ಲಿ ಲಂಟಾನ ಹೆಚ್ಚಾಗಿ ಬೆಳೆದಿದೆ. ಈ ಪರಿಣಾಮ ಜಿಂಕೆ, ಸಾರಂಗ ಮೊದಲಾದ ಸಸ್ಯಾಹಾರಿ ಪ್ರಾಣಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ಹೊರಬರುತ್ತಿವೆ. ಹಾಗಾಗಿ ಅವುಗಳನ್ನು ಬೇಟೆಯಾಡಲು ಹುಲಿಗಳೂ ಕಾಡಿನಿಂದ ಹೊರಬರುತ್ತಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕಾಡಂಚಿನಲ್ಲಿ ಹುಲಿಗಳ ದಾಳಿ ಜಾಸ್ತಿಯಾಗಿರುವುದಕ್ಕೆ ಸಫಾರಿ ಟ್ರಿಪ್ ಹೆಚ್ಚಳ ಅಥವಾ ರೆಸಾರ್ಟ್ ನಿರ್ಮಾಣವಾಗಿರುವುದು ಕಾರಣವಲ್ಲ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಪ್ರತಿಪಾದಿಸಿದರು.</p><p>ಇಲ್ಲಿ ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಜಿಲ್ಲೆಯ ಕಾಡಂಚಿನ ಗ್ರಾಮಗಳಲ್ಲಿ ಹುಲಿಗಳ ದಾಳಿ ಹೆಚ್ಚುತ್ತಿರುವ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ಸಮರ್ಪಕವಾದ ರೀತಿಯಲ್ಲಿ ಸ್ಪಂದಿಸಬೇಕು’ ಎಂದು ಒತ್ತಾಯಿಸಿದರು.</p><p>‘ದತ್ತಾಂಶಗಳನ್ನು ಪರಿಶೀಲಿಸಬೇಕು. ಅರಣ್ಯದಲ್ಲಿ ಹುಲಿಗಳ ಸಂಖ್ಯೆ ಎಷ್ಟಿದೆ ಎಂದು ನೋಡಬೇಕು. ಪ್ರಕೃತಿಯೇ ಪ್ರಕೃತಿಯನ್ನು ಕಾಪಾಡಿಕೊಳ್ಳುತ್ತದೆ.</p><p>ಕಾಡಂಚಿನಲ್ಲಿ ಮನುಷ್ಯನ ಅತಿಯಾದ ಹಸ್ತಕ್ಷೇಪ ತಪ್ಪಬೇಕು. ಮನುಷ್ಯ ಪ್ರಕೃತಿಗೆ ಕೈ ಹಾಕುವುದು ಬೇಡ’ ಎಂದು ಪ್ರತಿಕ್ರಿಯಿಸಿದರು.</p><p>‘ಇತ್ತೀಚೆಗೆ ಹುಲಿಗಳ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಅವು ಕಾಡಿನಿಂದ ಹೊರಬರುತ್ತಿವೆ. ಇದನ್ನು ತಡೆಯಲು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಒಳ್ಳೆಯ ಯೋಜನೆ ರೂಪಿಸಬೇಕು. ಜನರಿಗೆ ತೊಂದರೆ ಆಗದಂತೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು’ ಎಂದು ಒತ್ತಾಯಿಸಿದರು.</p><p>‘ರೆಸಾರ್ಟ್ಗಳಿಂದ, ಸಫಾರಿ ಸಮಯ (ಟ್ರಿಪ್) ಹೆಚ್ಚಳದಿಂದ ಹುಲಿಗಳ ದಾಳಿ ಹೆಚ್ಚುತ್ತಿಲ್ಲ. ಈ ಬಗ್ಗೆ ಸಮಗ್ರ ಅಧ್ಯಯನ ಆಗಬೇಕು. ಅರಣ್ಯದಲ್ಲಿ ಲಂಟಾನ ಹೆಚ್ಚಾಗಿ ಬೆಳೆದಿದೆ. ಈ ಪರಿಣಾಮ ಜಿಂಕೆ, ಸಾರಂಗ ಮೊದಲಾದ ಸಸ್ಯಾಹಾರಿ ಪ್ರಾಣಿಗಳು ಆಹಾರ ಹುಡುಕಿಕೊಂಡು ಕಾಡಿನಿಂದ ಹೊರಬರುತ್ತಿವೆ. ಹಾಗಾಗಿ ಅವುಗಳನ್ನು ಬೇಟೆಯಾಡಲು ಹುಲಿಗಳೂ ಕಾಡಿನಿಂದ ಹೊರಬರುತ್ತಿವೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>