<p><strong>ಸರಗೂರು:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗ ವ್ಯಾಪ್ತಿಯ ಅಂಜನಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯು 6 ವರ್ಷದ ಹೆಣ್ಣು ಹುಲಿಯನ್ನು ಮಂಗಳವಾರ ರಾತ್ರಿ ಸೆರೆ ಹಿಡಿದಿದೆ. </p>.<p>ನಂಜನಗೂಡು ತಾಲ್ಲೂಕಿನ ಈರೇಗೌಡನಹುಂಡಿ ಗ್ರಾಮದ ಸತೀಶ್ ಎಂಬುವರ ಜಮೀನಿನಲ್ಲಿ ಬೆಳಿಗ್ಗೆ ಕಾಣಿಸಿಕೊಂಡಿತ್ತು. ಸರಗೂರು ತಾಲ್ಲೂಕಿನ ಬೆಣ್ಣೇಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವವರನ್ನು ಕೊಂದ ಹುಲಿಯೇ ಇಲ್ಲಿ ಬಂದಿದೆ ಎನ್ನಲಾಗಿತ್ತು. </p>.<p>ಮಾಹಿತಿ ಆಧರಿಸಿ ಸಾಕಾನೆಗಳೊಂದಿಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಹುಲಿ ಪತ್ತೆಯಾಗಿತ್ತು. ಶಾಸಕ ದರ್ಶನ್ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರವಾಗಿ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು. </p>.<p>ಸಾಕಾನೆಗಳಾದ ಮಹೇಂದ್ರ, ರೋಹಿತ್ ಹಾಗೂ ಭೀಮ ಆನೆಗಳ ನೆರವಿನಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ, ಜಮೀನಿನ ಪೊದೆಯಲ್ಲಿ ಹುಲಿ ಅಡಗಿದ್ದಾಗ ಅರಿವಳಿಕೆ ಚುಚ್ಚು ಮದ್ದು ನೀಡಿದರು. ಹುಲಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.</p>.<p>ಕಾರ್ಯಾಚರಣೆಯಲ್ಲಿ ಸಿಎಫ್ ಪ್ರಭಾಕರನ್, ಎಸಿಎಫ್ ಡಿ.ಪರಮೇಶ್, ವೈದ್ಯಾಧಿಕಾರಿಗಳಾದ ಡಾ.ರಮೇಶ್, ಡಾ.ವಾಸೀಂ ಮಿರ್ಜಾ, ನುಗು ಆರ್ಎಫ್ಒ ವಿವೇಕ್, ಆರ್ಎಫ್ಓಗಳಾದ ಹೆಡಿಯಾಲ ಮುನಿರಾಜು, ಕಲ್ಕೆರೆ ರಾಜೇಶ್ ಸೇರಿದಂತೆ 130ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸರಗೂರು:</strong> ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಹೆಡಿಯಾಲ ಉಪ ವಿಭಾಗ ವ್ಯಾಪ್ತಿಯ ಅಂಜನಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆಯು 6 ವರ್ಷದ ಹೆಣ್ಣು ಹುಲಿಯನ್ನು ಮಂಗಳವಾರ ರಾತ್ರಿ ಸೆರೆ ಹಿಡಿದಿದೆ. </p>.<p>ನಂಜನಗೂಡು ತಾಲ್ಲೂಕಿನ ಈರೇಗೌಡನಹುಂಡಿ ಗ್ರಾಮದ ಸತೀಶ್ ಎಂಬುವರ ಜಮೀನಿನಲ್ಲಿ ಬೆಳಿಗ್ಗೆ ಕಾಣಿಸಿಕೊಂಡಿತ್ತು. ಸರಗೂರು ತಾಲ್ಲೂಕಿನ ಬೆಣ್ಣೇಗೆರೆ ಗ್ರಾಮದ ರೈತ ರಾಜಶೇಖರ್ ಎಂಬುವವರನ್ನು ಕೊಂದ ಹುಲಿಯೇ ಇಲ್ಲಿ ಬಂದಿದೆ ಎನ್ನಲಾಗಿತ್ತು. </p>.<p>ಮಾಹಿತಿ ಆಧರಿಸಿ ಸಾಕಾನೆಗಳೊಂದಿಗೆ ಬಂದ ಅರಣ್ಯ ಇಲಾಖೆ ಸಿಬ್ಬಂದಿ ಡ್ರೋನ್ ಕ್ಯಾಮೆರಾದಲ್ಲಿ ಪರಿಶೀಲಿಸಿದಾಗ ಹುಲಿ ಪತ್ತೆಯಾಗಿತ್ತು. ಶಾಸಕ ದರ್ಶನ್ ಧ್ರುವನಾರಾಯಣ ಸ್ಥಳಕ್ಕೆ ಭೇಟಿ ನೀಡಿ, ಶೀಘ್ರವಾಗಿ ಹುಲಿ ಸೆರೆ ಹಿಡಿಯುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ್ದರು. </p>.<p>ಸಾಕಾನೆಗಳಾದ ಮಹೇಂದ್ರ, ರೋಹಿತ್ ಹಾಗೂ ಭೀಮ ಆನೆಗಳ ನೆರವಿನಿಂದ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ ಸಿಬ್ಬಂದಿ, ಜಮೀನಿನ ಪೊದೆಯಲ್ಲಿ ಹುಲಿ ಅಡಗಿದ್ದಾಗ ಅರಿವಳಿಕೆ ಚುಚ್ಚು ಮದ್ದು ನೀಡಿದರು. ಹುಲಿಗೆ ಯಾವುದೇ ಗಾಯವಾಗಿಲ್ಲ ಎಂದು ತಿಳಿದುಬಂದಿದೆ.</p>.<p>ಕಾರ್ಯಾಚರಣೆಯಲ್ಲಿ ಸಿಎಫ್ ಪ್ರಭಾಕರನ್, ಎಸಿಎಫ್ ಡಿ.ಪರಮೇಶ್, ವೈದ್ಯಾಧಿಕಾರಿಗಳಾದ ಡಾ.ರಮೇಶ್, ಡಾ.ವಾಸೀಂ ಮಿರ್ಜಾ, ನುಗು ಆರ್ಎಫ್ಒ ವಿವೇಕ್, ಆರ್ಎಫ್ಓಗಳಾದ ಹೆಡಿಯಾಲ ಮುನಿರಾಜು, ಕಲ್ಕೆರೆ ರಾಜೇಶ್ ಸೇರಿದಂತೆ 130ಕ್ಕೂ ಹೆಚ್ಚು ಅರಣ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>