<p><strong>ಮೈಸೂರು:</strong> ಇಲ್ಲಿನ ತಿಲಕ್ನಗರ ಬಡಾವಣೆಯಲ್ಲಿ ಜನರು ಎದುರಿಸುತ್ತಿರುವ ಮೂಲಸೌಕರ್ಯಗಳ ಕೊರತೆಯ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದ್ದಾರೆ.</p><p>ಈ ಬಗ್ಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಅವರಿಗೆ ಪತ್ರ ಬರೆದಿರುವ ಅವರು, ‘ವಾರ್ಡ್ ಸಂಖ್ಯೆ 25ರ ತಿಲಕ್ನಗರದಲ್ಲಿ ಸಮಸ್ಯೆಗಳ ಬಗ್ಗೆ ನಾಗರಿಕರು ಅಹವಾಲು ಸಲ್ಲಿಸಿದ್ದಾರೆ. ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು ಎಂದು ಕೋರಿದ್ದಾರೆ. ಮೂಲಸೌಕರ್ಯ ಕಲ್ಪಿಸಬೇಕು, ಸಾರ್ವಜನಿಕ ಸುರಕ್ಷತೆಗೆ ಕ್ರಮ ವಹಿಸಬೇಕು ಎಂದು ಕೋರಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p><strong>ವಾರ್ಡ್ವಾರು ಕ್ರಮ:</strong> ‘ನಗರದ ಪರಿಸ್ಥಿತಿ ಸುಧಾರಿಸಲು ವಾರ್ಡ್ವಾರು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ತಿಲಕ್ನಗರ ವಾರ್ಡ್ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗಾಗಲೇ ನಗರಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ’ ಎಂದು ಹೇಳಿದ್ದಾರೆ. </p><p>‘ಆ ವಾರ್ಡ್ನಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದಕ್ಕೆ ತಕ್ಷಣದ ಪರಿಹಾರವಾಗಿ ವಾಣಿವಿಲಾಸ ವಾಟರ್ ವರ್ಕ್ಸ್ನಿಂದ ತಿಲಕ್ನಗರ ಓವರ್ಹೆಡ್ ಟ್ಯಾಂಕ್ಗೆ ನೀರಿನ ಪೈಪ್ಲೈನ್ ಸಂಪರ್ಕ ಕಲ್ಪಿಸಬೇಕು. ಆ ಪ್ರದೇಶಕ್ಕೆ ಸಮರ್ಪಕ ಹಾಗೂ ನಿಯಮಿತವಾಗಿ ನೀರು ಸರಬರಾಜು ಖಚಿತಪಡಿಸಿಕೊಳ್ಳಲು ಎಸ್ಎಫ್ಸಿ ಅನುದಾನ ಬಳಸಿಕೊಂಡು 10 ಲಕ್ಷ ಲೀಟರ್ ಸಾಮರ್ಥ್ಯದ ಸಂಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಸಂಸದರು ವಿವರಿಸಿದ್ದಾರೆ.</p><p>‘ತಿಲಕ್ನಗರದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಬೇಡಿಕೆ ಇದೆ. ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಗಳು ಮತ್ತು ಮದುವೆ ಕಾರ್ಯಕ್ಕೆ ಅದು ಅವಶ್ಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲಸವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ವಹಿಸುವಂರೆ ತಿಳಿಸಲಾಗಿದೆ. ಸಾರ್ವಜನಿಕ ಸುರಕ್ಷತೆ ಮತ್ತು ಅಗತ್ಯ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.</p><p>‘ಈ ವಾರ್ಡ್ನಲ್ಲಿ ಮಾಲೀಕರು ಹಸುಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಮುಕ್ತವಾಗಿ ಬಿಡುತ್ತಿದ್ದಾರೆ. ಇದರಿಂದ ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಸಂಚಾರಕ್ಕೆ ಅಡ್ಡಿ ಆಗುತ್ತಿದೆ, ಜನರ ಸುರಕ್ಷತೆಗೂ ಧಕ್ಕೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆಯಲ್ಲಿ ಹಸು ಬಿಡುವವರಿಗೆ ದಂಡ ವಿಧಿಸಿ ಕಠಿಣ ಕ್ರಮ ಜರುಗಿಸುವಂತೆ ಆಯುಕ್ತರಿಗೆ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>‘ನಗರದಲ್ಲಿ ಯಾವುದೇ ಸಮಸ್ಯೆ ಇದ್ದರೂ ನಾಗರಿಕರು ಅಹವಾಲು ಮೂಲಕ ತಿಳಿಸಬಹುದು. ಅದನ್ನು ಶೀಘ್ರವಾಗಿ ಬಗೆಹರಿಸಲು ಬದ್ಧರಾಗಿದ್ದೇನೆ’ ಎಂದು ಯದುವೀರ್ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಇಲ್ಲಿನ ತಿಲಕ್ನಗರ ಬಡಾವಣೆಯಲ್ಲಿ ಜನರು ಎದುರಿಸುತ್ತಿರುವ ಮೂಲಸೌಕರ್ಯಗಳ ಕೊರತೆಯ ಸಮಸ್ಯೆಯನ್ನು ತ್ವರಿತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೂಚಿಸಿದ್ದಾರೆ.</p><p>ಈ ಬಗ್ಗೆ ಮಹಾನಗರಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಅವರಿಗೆ ಪತ್ರ ಬರೆದಿರುವ ಅವರು, ‘ವಾರ್ಡ್ ಸಂಖ್ಯೆ 25ರ ತಿಲಕ್ನಗರದಲ್ಲಿ ಸಮಸ್ಯೆಗಳ ಬಗ್ಗೆ ನಾಗರಿಕರು ಅಹವಾಲು ಸಲ್ಲಿಸಿದ್ದಾರೆ. ಕುಡಿಯುವ ನೀರು ಸಮರ್ಪಕವಾಗಿ ಪೂರೈಸಬೇಕು ಎಂದು ಕೋರಿದ್ದಾರೆ. ಮೂಲಸೌಕರ್ಯ ಕಲ್ಪಿಸಬೇಕು, ಸಾರ್ವಜನಿಕ ಸುರಕ್ಷತೆಗೆ ಕ್ರಮ ವಹಿಸಬೇಕು ಎಂದು ಕೋರಿದ್ದಾರೆ’ ಎಂದು ತಿಳಿಸಿದ್ದಾರೆ.</p><p>‘ನಗರದ ಎಲ್ಲ ಸಮಸ್ಯೆಗಳಿಗೆ ಕಾಲಮಿತಿಯಲ್ಲಿ ಪರಿಹಾರ ದೊರಕಿಸಿಕೊಡಲಾಗುವುದು. ಈ ನಿಟ್ಟಿನಲ್ಲಿ ಸಲ್ಲಿಕೆಯಾಗಿರುವ ಅಹವಾಲುಗಳನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು’ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p><p><strong>ವಾರ್ಡ್ವಾರು ಕ್ರಮ:</strong> ‘ನಗರದ ಪರಿಸ್ಥಿತಿ ಸುಧಾರಿಸಲು ವಾರ್ಡ್ವಾರು ಕ್ರಮ ಕೈಗೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ತಿಲಕ್ನಗರ ವಾರ್ಡ್ನಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಈಗಾಗಲೇ ನಗರಪಾಲಿಕೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ’ ಎಂದು ಹೇಳಿದ್ದಾರೆ. </p><p>‘ಆ ವಾರ್ಡ್ನಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಇದೆ. ಇದಕ್ಕೆ ತಕ್ಷಣದ ಪರಿಹಾರವಾಗಿ ವಾಣಿವಿಲಾಸ ವಾಟರ್ ವರ್ಕ್ಸ್ನಿಂದ ತಿಲಕ್ನಗರ ಓವರ್ಹೆಡ್ ಟ್ಯಾಂಕ್ಗೆ ನೀರಿನ ಪೈಪ್ಲೈನ್ ಸಂಪರ್ಕ ಕಲ್ಪಿಸಬೇಕು. ಆ ಪ್ರದೇಶಕ್ಕೆ ಸಮರ್ಪಕ ಹಾಗೂ ನಿಯಮಿತವಾಗಿ ನೀರು ಸರಬರಾಜು ಖಚಿತಪಡಿಸಿಕೊಳ್ಳಲು ಎಸ್ಎಫ್ಸಿ ಅನುದಾನ ಬಳಸಿಕೊಂಡು 10 ಲಕ್ಷ ಲೀಟರ್ ಸಾಮರ್ಥ್ಯದ ಸಂಪ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸೂಚಿಸಲಾಗಿದೆ’ ಎಂದು ಸಂಸದರು ವಿವರಿಸಿದ್ದಾರೆ.</p><p>‘ತಿಲಕ್ನಗರದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಬೇಡಿಕೆ ಇದೆ. ಸಾರ್ವಜನಿಕ ಸಭೆಗಳು, ಸಾಮಾಜಿಕ ಕಾರ್ಯಗಳು ಮತ್ತು ಮದುವೆ ಕಾರ್ಯಕ್ಕೆ ಅದು ಅವಶ್ಯವಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲಸವನ್ನು ಆದಷ್ಟು ಬೇಗ ಕೈಗೆತ್ತಿಕೊಳ್ಳಲು ಅಗತ್ಯ ಕ್ರಮ ವಹಿಸುವಂರೆ ತಿಳಿಸಲಾಗಿದೆ. ಸಾರ್ವಜನಿಕ ಸುರಕ್ಷತೆ ಮತ್ತು ಅಗತ್ಯ ನಾಗರಿಕ ಸೌಲಭ್ಯಗಳನ್ನು ಒದಗಿಸಲು ಸ್ಪಷ್ಟ ಸೂಚನೆ ನೀಡಲಾಗಿದೆ’ ಎಂದು ಹೇಳಿದ್ದಾರೆ.</p><p>‘ಈ ವಾರ್ಡ್ನಲ್ಲಿ ಮಾಲೀಕರು ಹಸುಗಳನ್ನು ಸಾರ್ವಜನಿಕ ರಸ್ತೆಗಳಲ್ಲಿ ಮುಕ್ತವಾಗಿ ಬಿಡುತ್ತಿದ್ದಾರೆ. ಇದರಿಂದ ಪಾದಚಾರಿಗಳು ಮತ್ತು ವಾಹನ ಚಾಲಕರಿಗೆ ಸಂಚಾರಕ್ಕೆ ಅಡ್ಡಿ ಆಗುತ್ತಿದೆ, ಜನರ ಸುರಕ್ಷತೆಗೂ ಧಕ್ಕೆ ಉಂಟಾಗುತ್ತಿದೆ. ಈ ನಿಟ್ಟಿನಲ್ಲಿ ರಸ್ತೆಯಲ್ಲಿ ಹಸು ಬಿಡುವವರಿಗೆ ದಂಡ ವಿಧಿಸಿ ಕಠಿಣ ಕ್ರಮ ಜರುಗಿಸುವಂತೆ ಆಯುಕ್ತರಿಗೆ ಆದೇಶಿಸಲಾಗಿದೆ’ ಎಂದು ತಿಳಿಸಿದ್ದಾರೆ.</p><p>‘ನಗರದಲ್ಲಿ ಯಾವುದೇ ಸಮಸ್ಯೆ ಇದ್ದರೂ ನಾಗರಿಕರು ಅಹವಾಲು ಮೂಲಕ ತಿಳಿಸಬಹುದು. ಅದನ್ನು ಶೀಘ್ರವಾಗಿ ಬಗೆಹರಿಸಲು ಬದ್ಧರಾಗಿದ್ದೇನೆ’ ಎಂದು ಯದುವೀರ್ ಭರವಸೆ ನೀಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>