<p><strong>ಮೈಸೂರು</strong>: ಇಲ್ಲಿನ ರಂಗಾಯಣದ ಭೂಮಿಗೀತದಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕದ ಮೊದಲ ಪ್ರದರ್ಶನವು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ಭಾನುವಾರ ಪ್ರದರ್ಶನಗೊಂಡಿತು.</p>.<p>ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚನೆ ಹಾಗೂ ನಿರ್ದೇಶನದ ಈ ನಾಟಕವನ್ನು ರೆಪರ್ಟರಿ ಕಲಾವಿದರು ಅಭಿನಯಿಸಿದರು. ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್ಎಸ್ಎಸ್ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು.</p>.<p class="Subhead">ಫೋಟೊ, ವಿಡಿಯೊಗೆ ನಿಷೇಧ: ಆವರಣದ ಸುತ್ತಲೂ ಪೊಲೀಸ್ ವಾಹನಗಳೇ ಹೆಚ್ಚಿದ್ದವು. ಟಿಕೆಟ್ ಇದ್ದವರಿಗೆ ಮಾತ್ರವೇ ಪ್ರವೇಶ ನೀಡಲಾಯಿತು. ಪ್ರದರ್ಶನಕ್ಕೆ ಕೆಲವೇ ನಿಮಿಷಗಳಿದ್ದಾಗ ಪತ್ರಕರ್ತರು ಹಾಗೂ ಛಾಯಾಗ್ರಾಹಕರಿಗೆ ಅವಕಾಶ ಕೊಡಲಾಯಿತು. ಫೋಟೊ ಹಾಗೂ ವಿಡಿಯೊ ಮಾಡಲು ನಿಷೇಧ ಹೇರಲಾಗಿತ್ತು. ‘ಭೂಮಿಗೀತ’ದ 209 ಸೀಟುಗಳೂ ಭರ್ತಿಯಾಗಿದ್ದವು.</p>.<p class="Subhead">ಬಿಗಿಭದ್ರತೆ: ಡಿಸಿಪಿಗಳಾದ ಪ್ರದೀಪ್ ಗುಂಟಿ ಹಾಗೂ ಎಂ.ಎಸ್.ಗೀತಾ ಪ್ರಸನ್ನ ನೇತೃತ್ವದಲ್ಲಿ ಮೀಸಲು ಪಡೆಯ 250ಕ್ಕೂ ಹೆಚ್ಚು ಪೊಲೀಸರನ್ನು ರಂಗಾಯಣ ಹಾಗೂ ಕಲಾಮಂದಿರದ ಸುತ್ತ ನಿಯೋಜಿಸಲಾಗಿತ್ತು. ಹುಣಸೂರು ರಸ್ತೆ, ಕುಕ್ಕರಹಳ್ಳಿ ಕೆರೆ ರಸ್ತೆಯಲ್ಲೂ ಪೊಲೀಸರಿದ್ದರು.</p>.<p class="Subhead">ಬಸವಲಿಂಗಯ್ಯ ಆಕ್ರೋಶ: ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ ರಂಗಕರ್ಮಿ ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶ ಕೊಡಲಾಯಿತು.</p>.<p>ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಪ್ರವೇಶ ದ್ವಾರದ ಬಳಿ ಎಲ್ಲರನ್ನೂ ಸ್ವಾಗತಿಸಿದರು.</p>.<p>‘ನಾಟಕ ಪ್ರದರ್ಶನಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸದಂತೆ ರಂಗಾಯಣ ಅರ್ಜಿ ಸಲ್ಲಿಸಿತ್ತು. 200ಕ್ಕೂ ಹೆಚ್ಚು ಟಿಕೆಟ್ಗಳು ಆನ್ಲೈನ್ ಮೂಲಕ ಮಾರಾಟವಾಗಿವೆ. ಸೋಮವಾರವೂ ಪ್ರದರ್ಶನ ಇದೆ’ ಎಂದು ಕಾರ್ಯಪ್ಪ ತಿಳಿಸಿದರು.</p>.<p><a href="https://www.prajavani.net/district/dakshina-kannada/mangalore-blast-thirthahalli-sharik-arrest-relatives-at-hospital-990393.html" itemprop="url">ಮಂಗಳೂರು ಆಟೋದಲ್ಲಿ ಸ್ಪೋಟಕ ಸ್ಪೋಟಿಸಿದ್ದು ತೀರ್ಥಹಳ್ಳಿಯ ಶಾರಿಕ್? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ಇಲ್ಲಿನ ರಂಗಾಯಣದ ಭೂಮಿಗೀತದಲ್ಲಿ ‘ಟಿಪ್ಪು ನಿಜಕನಸುಗಳು’ ನಾಟಕದ ಮೊದಲ ಪ್ರದರ್ಶನವು 250ಕ್ಕೂ ಹೆಚ್ಚು ಪೊಲೀಸರ ಬಿಗಿ ಭದ್ರತೆಯಲ್ಲಿ ಭಾನುವಾರ ಪ್ರದರ್ಶನಗೊಂಡಿತು.</p>.<p>ರಂಗಾಯಣದ ನಿರ್ದೇಶಕ ಅಡ್ಡಂಡ ಸಿ. ಕಾರ್ಯಪ್ಪ ರಚನೆ ಹಾಗೂ ನಿರ್ದೇಶನದ ಈ ನಾಟಕವನ್ನು ರೆಪರ್ಟರಿ ಕಲಾವಿದರು ಅಭಿನಯಿಸಿದರು. ಕಾದಂಬರಿಕಾರ ಎಸ್.ಎಲ್.ಭೈರಪ್ಪ, ಲೇಖಕ ಡಾ.ಪ್ರಧಾನ ಗುರುದತ್ತ, ಶಾಸಕ ಕೆ.ಜಿ.ಬೋಪಯ್ಯ, ಆರ್ಎಸ್ಎಸ್ ಮುಖಂಡ ಮಾ.ವೆಂಕಟರಾಮ, ಕರ್ನಾಟಕ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಡಾ.ಬಿ.ವಿ.ವಸಂತಕುಮಾರ, ಸಂಸದ ಪ್ರತಾಪ ಸಿಂಹ ಪತ್ನಿ ಅರ್ಪಿತಾ ಸಿಂಹ ವೀಕ್ಷಿಸಿದರು.</p>.<p class="Subhead">ಫೋಟೊ, ವಿಡಿಯೊಗೆ ನಿಷೇಧ: ಆವರಣದ ಸುತ್ತಲೂ ಪೊಲೀಸ್ ವಾಹನಗಳೇ ಹೆಚ್ಚಿದ್ದವು. ಟಿಕೆಟ್ ಇದ್ದವರಿಗೆ ಮಾತ್ರವೇ ಪ್ರವೇಶ ನೀಡಲಾಯಿತು. ಪ್ರದರ್ಶನಕ್ಕೆ ಕೆಲವೇ ನಿಮಿಷಗಳಿದ್ದಾಗ ಪತ್ರಕರ್ತರು ಹಾಗೂ ಛಾಯಾಗ್ರಾಹಕರಿಗೆ ಅವಕಾಶ ಕೊಡಲಾಯಿತು. ಫೋಟೊ ಹಾಗೂ ವಿಡಿಯೊ ಮಾಡಲು ನಿಷೇಧ ಹೇರಲಾಗಿತ್ತು. ‘ಭೂಮಿಗೀತ’ದ 209 ಸೀಟುಗಳೂ ಭರ್ತಿಯಾಗಿದ್ದವು.</p>.<p class="Subhead">ಬಿಗಿಭದ್ರತೆ: ಡಿಸಿಪಿಗಳಾದ ಪ್ರದೀಪ್ ಗುಂಟಿ ಹಾಗೂ ಎಂ.ಎಸ್.ಗೀತಾ ಪ್ರಸನ್ನ ನೇತೃತ್ವದಲ್ಲಿ ಮೀಸಲು ಪಡೆಯ 250ಕ್ಕೂ ಹೆಚ್ಚು ಪೊಲೀಸರನ್ನು ರಂಗಾಯಣ ಹಾಗೂ ಕಲಾಮಂದಿರದ ಸುತ್ತ ನಿಯೋಜಿಸಲಾಗಿತ್ತು. ಹುಣಸೂರು ರಸ್ತೆ, ಕುಕ್ಕರಹಳ್ಳಿ ಕೆರೆ ರಸ್ತೆಯಲ್ಲೂ ಪೊಲೀಸರಿದ್ದರು.</p>.<p class="Subhead">ಬಸವಲಿಂಗಯ್ಯ ಆಕ್ರೋಶ: ಟಿಕೆಟ್ ಇದ್ದರೂ ಪ್ರವೇಶ ನೀಡದ ಪೊಲೀಸರೊಂದಿಗೆ ರಂಗಕರ್ಮಿ ಸಿ.ಬಸವಲಿಂಗಯ್ಯ ಹಾಗೂ ಪತ್ರಕರ್ತ ಟಿ.ಗುರುರಾಜ್ ಮಾತಿನ ಚಕಮಕಿ ನಡೆಸಿದರು. ದ್ವಾರದಲ್ಲೇ ಧರಣಿ ಕುಳಿತ ಅವರು, ‘ಅನುಮಾನವಿದ್ದರೆ ನಮ್ಮೊಂದಿಗೆ ಪೊಲೀಸರೂ ಬರಲಿ’ ಎಂದು ಮನವರಿಕೆ ಮಾಡಿದ ನಂತರ ಪ್ರವೇಶ ಕೊಡಲಾಯಿತು.</p>.<p>ನಿರ್ದೇಶಕ ಅಡ್ಡಂಡ ಸಿ.ಕಾರ್ಯಪ್ಪ ಪ್ರವೇಶ ದ್ವಾರದ ಬಳಿ ಎಲ್ಲರನ್ನೂ ಸ್ವಾಗತಿಸಿದರು.</p>.<p>‘ನಾಟಕ ಪ್ರದರ್ಶನಕ್ಕೆ ತಡೆಯಾಜ್ಞೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಪರಿಗಣಿಸದಂತೆ ರಂಗಾಯಣ ಅರ್ಜಿ ಸಲ್ಲಿಸಿತ್ತು. 200ಕ್ಕೂ ಹೆಚ್ಚು ಟಿಕೆಟ್ಗಳು ಆನ್ಲೈನ್ ಮೂಲಕ ಮಾರಾಟವಾಗಿವೆ. ಸೋಮವಾರವೂ ಪ್ರದರ್ಶನ ಇದೆ’ ಎಂದು ಕಾರ್ಯಪ್ಪ ತಿಳಿಸಿದರು.</p>.<p><a href="https://www.prajavani.net/district/dakshina-kannada/mangalore-blast-thirthahalli-sharik-arrest-relatives-at-hospital-990393.html" itemprop="url">ಮಂಗಳೂರು ಆಟೋದಲ್ಲಿ ಸ್ಪೋಟಕ ಸ್ಪೋಟಿಸಿದ್ದು ತೀರ್ಥಹಳ್ಳಿಯ ಶಾರಿಕ್? </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>