<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಹಾಂ, 'ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464 ರಲ್ಲಿ 2001ರಲ್ಲಿಯೇ ಮುಡಾ ನಿವೇಶನಗಳನ್ನು ರಚಿಸಿ, ನಂತರದಲ್ಲಿ 19 ಫಲಾನುಭವಿಗಳಿಗೆ ಹಂಚಿದೆ. 2004ರಲ್ಲಿ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಅದೇ ಜಮೀನನ್ನು ಖರೀದಿಸಿದ್ದಾರೆ. ಆ ಖರೀದಿಯೇ ಅಕ್ರಮವಾಗಿರುವುದರಿಂದ, ಅವರಿಗೆ ಬದಲಿ ನಿವೇಶನ ನೀಡಲು ಅವಕಾಶವೇ ಇಲ್ಲ. ಹೀಗಾಗಿ ಮುಡಾದಿಂದ ಹಂಚಿಕೆಯಾಗಿರುವ ನಿವೇಶನಗಳನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ಸಿದ್ದರಾಮಯ್ಯ ಪತ್ನಿಗೆ ಬದಲಿ ನಿವೇಶನ ನೀಡುವ ಸಂಬಂಧ ನಡೆದಿದ್ದ ಮುಡಾ ಸಭೆಯಲ್ಲಿ ಅಂದಿನ ಶಾಸಕ ಡಾ. ಯತೀಂದ್ರ ಅವರೂ ಇದ್ದರು’ ಎಂದರು.</p>.<p>'ಮುಡಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ಚರ್ಚೆಗೆ ಸಿದ್ಧ. ಕಾಂಗ್ರೆಸ್ ನಾಯಕರು ಸಮಯ ಕೊಡಿಸುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>ತಮ್ಮನ್ನು ಬ್ಲಾಕ್ಮೇಲರ್ ಎಂದು ಕರೆದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾಗ ಅದೇ ಸಿದ್ದರಾಮಯ್ಯ ಸದನದಲ್ಲೇ ನನ್ನ ಹೆಸರು ಹೇಳಿ ಬೆನ್ನು ತಟ್ಟಿದ್ದರು. ಈಗ ಬ್ಲಾಕ್ ಮೇಲರ್ ಆದೆನೇ' ಎಂದು ಪ್ರಶ್ನಿಸಿದರು.</p>.<p>‘ನನ್ನ ದೂರು ಆಧರಿಸಿ ರಾಜ್ಯಪಾಲರು ಮುಖ್ಯಮಂತ್ರಿಗೆ ನೋಟಿಸ್ ನೀಡಿದ್ದಾರೆ. ಪ್ರಾಸಿಕ್ಯುಶನ್ಗೆ ಅನುಮತಿ ಸಿಗುವ ನಿರೀಕ್ಷೆ ಇದೆ. ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಮುಖ್ಯಮಂತ್ರಿ ಸಿದ್ದರಾಮಯ್ಯರ ಪತ್ನಿ ಪಾರ್ವತಿ ಅವರಿಗೆ ನೀಡಿರುವ 14 ನಿವೇಶನಗಳನ್ನು ವಾಪಸ್ ಪಡೆಯಬೇಕು’ ಎಂದು ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಹಾಂ ಅವರು ಮುಡಾ ಆಯುಕ್ತ ರಘುನಂದನ್ ಅವರಿಗೆ ಸೋಮವಾರ ಮನವಿ ಸಲ್ಲಿಸಿದರು.</p>.<p>ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅಬ್ರಹಾಂ, 'ಮೈಸೂರಿನ ಕೆಸರೆ ಗ್ರಾಮದ ಸರ್ವೆ ಸಂಖ್ಯೆ 464 ರಲ್ಲಿ 2001ರಲ್ಲಿಯೇ ಮುಡಾ ನಿವೇಶನಗಳನ್ನು ರಚಿಸಿ, ನಂತರದಲ್ಲಿ 19 ಫಲಾನುಭವಿಗಳಿಗೆ ಹಂಚಿದೆ. 2004ರಲ್ಲಿ ಸಿದ್ದರಾಮಯ್ಯ ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಅದೇ ಜಮೀನನ್ನು ಖರೀದಿಸಿದ್ದಾರೆ. ಆ ಖರೀದಿಯೇ ಅಕ್ರಮವಾಗಿರುವುದರಿಂದ, ಅವರಿಗೆ ಬದಲಿ ನಿವೇಶನ ನೀಡಲು ಅವಕಾಶವೇ ಇಲ್ಲ. ಹೀಗಾಗಿ ಮುಡಾದಿಂದ ಹಂಚಿಕೆಯಾಗಿರುವ ನಿವೇಶನಗಳನ್ನು ವಾಪಸ್ ಪಡೆಯಬೇಕು ಎಂದು ಮನವಿ ಮಾಡಿದ್ದೇನೆ’ ಎಂದು ತಿಳಿಸಿದರು.</p>.<p>‘ಸಿದ್ದರಾಮಯ್ಯ ಪತ್ನಿಗೆ ಬದಲಿ ನಿವೇಶನ ನೀಡುವ ಸಂಬಂಧ ನಡೆದಿದ್ದ ಮುಡಾ ಸಭೆಯಲ್ಲಿ ಅಂದಿನ ಶಾಸಕ ಡಾ. ಯತೀಂದ್ರ ಅವರೂ ಇದ್ದರು’ ಎಂದರು.</p>.<p>'ಮುಡಾ ವಿಚಾರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜೊತೆಗೆ ಚರ್ಚೆಗೆ ಸಿದ್ಧ. ಕಾಂಗ್ರೆಸ್ ನಾಯಕರು ಸಮಯ ಕೊಡಿಸುತ್ತಾರೆಯೇ’ ಎಂದು ಪ್ರಶ್ನಿಸಿದರು.</p>.<p>ತಮ್ಮನ್ನು ಬ್ಲಾಕ್ಮೇಲರ್ ಎಂದು ಕರೆದಿರುವ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿ ‘ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಜಗದೀಶ ಶೆಟ್ಟರ್ ವಿರುದ್ಧ ದಾಖಲೆಗಳನ್ನು ಬಿಡುಗಡೆ ಮಾಡಿದ್ದಾಗ ಅದೇ ಸಿದ್ದರಾಮಯ್ಯ ಸದನದಲ್ಲೇ ನನ್ನ ಹೆಸರು ಹೇಳಿ ಬೆನ್ನು ತಟ್ಟಿದ್ದರು. ಈಗ ಬ್ಲಾಕ್ ಮೇಲರ್ ಆದೆನೇ' ಎಂದು ಪ್ರಶ್ನಿಸಿದರು.</p>.<p>‘ನನ್ನ ದೂರು ಆಧರಿಸಿ ರಾಜ್ಯಪಾಲರು ಮುಖ್ಯಮಂತ್ರಿಗೆ ನೋಟಿಸ್ ನೀಡಿದ್ದಾರೆ. ಪ್ರಾಸಿಕ್ಯುಶನ್ಗೆ ಅನುಮತಿ ಸಿಗುವ ನಿರೀಕ್ಷೆ ಇದೆ. ಕಾನೂನಾತ್ಮಕವಾಗಿ ಹೋರಾಟ ಮುಂದುವರಿಸುತ್ತೇನೆ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>