<p><strong>ಮೈಸೂರು: </strong>ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಟಿಯುಸಿ, ಐಎನ್ಟಿಯುಸಿ, ಸಿಐಟಿಯು, ಎಐಟಿಯುಸಿ, ರೈತ ಸಂಘ, ಬ್ಯಾಂಕ್ ಮತ್ತು ವಿಮಾ ನೌಕರರ ಸಂಘಟನೆಗಳು ಜಂಟಿಯಾಗಿ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ನ.26ರಂದು ರಾಷ್ಟ್ರೀಯ ಮುಷ್ಕರಕ್ಕೆ ಕರೆ ನೀಡಿವೆ.</p>.<p>ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿಈ ಸಂಬಂಧ ಮುಷ್ಕರದ ಯಶಸ್ಸಿಗಾಗಿ ಪೂರ್ವಭಾವಿ ದುಂಡುಮೇಜಿನ ಸಭೆ ನಡೆಯಿತು.</p>.<p>ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕೇಂದ್ರ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಖಂಡಿಸಿ ನ.26ರಂದು ನಡೆಯಲಿರುವ ರಾಷ್ಟ್ರೀಯ ಮುಷ್ಕರಕ್ಕೆ ರೈತಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. ನ.27ರಂದು ಜಿಲ್ಲೆಯ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದು ಹೇಳಿದರು.</p>.<p>ಕಾರ್ಮಿಕ ಸಂಘಟನಾ ಸದಸ್ಯ ರಾಮಕೃಷ್ಣ ಮಾತನಾಡಿ ‘ಕೇಂದ್ರ ಸರ್ಕಾರ ಸಾರ್ವಜನಿಕ ವಲಯಗಳನ್ನು ಹಂತ-ಹಂತವಾಗಿ ಖಾಸಗೀಕರಣಗೊಳಿಸುತ್ತಿದೆ. ಇದರಿಂದ ಇನ್ನು ಮುಂದೆ ಆ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಸ್ಥಗಿತವಾಗುತ್ತದೆ. ಈಗಾಗಲೇ ಕಳೆದ ಎರಡೂವರೆ ವರ್ಷಗಳಲ್ಲಿ 10 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜಯರಾಮ್ ಮಾತನಾಡಿ ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಾಲಕೃಷ್ಣ, ವಿಮಾ ನೌಕರರ ಒಕ್ಕೂಟದ ಜಂಟಿ ಕಾರ್ಯದರ್ಶಿ ಜಿ.ಸುರೇಶ್, ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಸ್.ಕೆ.ರಾಮು, ಚನ್ನಪ್ಪ, ಪೂವಪ್ಪ, ಶ್ರೀಧರ್, ತುಲಾಜಪ್ಪ, ಜಾಕಿರ್ ಹುಸೇನ್, ಮಂಜುನಾಥ್, ಬಲರಾಮ್ ಮತ್ತಿತರರು ದುಂಡು ಮೇಜಿನ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong>ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ, ಎಐಟಿಯುಸಿ, ಐಎನ್ಟಿಯುಸಿ, ಸಿಐಟಿಯು, ಎಐಟಿಯುಸಿ, ರೈತ ಸಂಘ, ಬ್ಯಾಂಕ್ ಮತ್ತು ವಿಮಾ ನೌಕರರ ಸಂಘಟನೆಗಳು ಜಂಟಿಯಾಗಿ ಕಾರ್ಮಿಕರ ಹೋರಾಟವನ್ನು ಬೆಂಬಲಿಸಿ ನ.26ರಂದು ರಾಷ್ಟ್ರೀಯ ಮುಷ್ಕರಕ್ಕೆ ಕರೆ ನೀಡಿವೆ.</p>.<p>ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಶುಕ್ರವಾರ ನಗರದ ಖಾಸಗಿ ಹೋಟೆಲ್ನಲ್ಲಿಈ ಸಂಬಂಧ ಮುಷ್ಕರದ ಯಶಸ್ಸಿಗಾಗಿ ಪೂರ್ವಭಾವಿ ದುಂಡುಮೇಜಿನ ಸಭೆ ನಡೆಯಿತು.</p>.<p>ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಮಾತನಾಡಿ, ‘ಕೇಂದ್ರ ಸರ್ಕಾರದ ಆಡಳಿತ ವಿರೋಧಿ ನೀತಿಗಳನ್ನು ಖಂಡಿಸಿ ನ.26ರಂದು ನಡೆಯಲಿರುವ ರಾಷ್ಟ್ರೀಯ ಮುಷ್ಕರಕ್ಕೆ ರೈತಸಂಘ ಸಂಪೂರ್ಣ ಬೆಂಬಲ ಸೂಚಿಸಿದೆ. ನ.27ರಂದು ಜಿಲ್ಲೆಯ ಕೇಂದ್ರ ಸರ್ಕಾರದ ಕಚೇರಿಗಳಿಗೆ ಮುತ್ತಿಗೆ ಹಾಕಲಾಗುತ್ತದೆ’ ಎಂದು ಹೇಳಿದರು.</p>.<p>ಕಾರ್ಮಿಕ ಸಂಘಟನಾ ಸದಸ್ಯ ರಾಮಕೃಷ್ಣ ಮಾತನಾಡಿ ‘ಕೇಂದ್ರ ಸರ್ಕಾರ ಸಾರ್ವಜನಿಕ ವಲಯಗಳನ್ನು ಹಂತ-ಹಂತವಾಗಿ ಖಾಸಗೀಕರಣಗೊಳಿಸುತ್ತಿದೆ. ಇದರಿಂದ ಇನ್ನು ಮುಂದೆ ಆ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ ಸ್ಥಗಿತವಾಗುತ್ತದೆ. ಈಗಾಗಲೇ ಕಳೆದ ಎರಡೂವರೆ ವರ್ಷಗಳಲ್ಲಿ 10 ಕೋಟಿ ಜನರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಆತಂಕ ವ್ಯಕ್ತಪಡಿಸಿದರು.</p>.<p>ಸಿಐಟಿಯು ಜಿಲ್ಲಾ ಕಾರ್ಯದರ್ಶಿ ಜಯರಾಮ್ ಮಾತನಾಡಿ ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ ವಿರೋಧಿ ನೀತಿಗಳನ್ನು ಕೈಬಿಡಬೇಕು ಎಂದು ಆಗ್ರಹಿಸಿದರು.</p>.<p>ಬ್ಯಾಂಕ್ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಎಚ್.ಬಾಲಕೃಷ್ಣ, ವಿಮಾ ನೌಕರರ ಒಕ್ಕೂಟದ ಜಂಟಿ ಕಾರ್ಯದರ್ಶಿ ಜಿ.ಸುರೇಶ್, ವಿವಿಧ ಸಂಘಟನೆಯ ಪದಾಧಿಕಾರಿಗಳಾದ ಎಸ್.ಕೆ.ರಾಮು, ಚನ್ನಪ್ಪ, ಪೂವಪ್ಪ, ಶ್ರೀಧರ್, ತುಲಾಜಪ್ಪ, ಜಾಕಿರ್ ಹುಸೇನ್, ಮಂಜುನಾಥ್, ಬಲರಾಮ್ ಮತ್ತಿತರರು ದುಂಡು ಮೇಜಿನ ಸಭೆಯಲ್ಲಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>