<p><strong>ಹುಣಸೂರು:</strong> ಪ್ರಸಕ್ತ ಸಾಲಿನಲ್ಲಿ ತಂಬಾಕು ಪ್ರತಿ ಕೆ.ಜಿ.ಗೆ ಸರಾಸರಿ ₹350 ಸಿಗುವಂತೆ ತಂಬಾಕು ಮಂಡಳಿ ಕ್ರಮವಹಿಸಬೇಕು ಎಂದು ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ಧಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ತಂಬಾಕು ಮಂಡಳಿ ನಿರ್ದೇಶಕ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>‘ಪ್ರಸಕ್ತ ಸಾಲಿನಲ್ಲಿ ಅ.8ರಂದು ತಂಬಾಕು ಹರಾಜು ಮಾರುಕಟ್ಟೆ ಆರಂಭವಾಗಲಿದ್ದು, ಮಾರುಕಟ್ಟೆಯಲ್ಲಿ ಬೆಳೆಗಾರರು ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದೇವೆ. ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದ ನಡುವೆಯೂ ತಂಬಾಕು ಬೆಳೆದಿದ್ದು, ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಮಂಡಳಿ ವ್ಯಾಪಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಮಾರುಕಟ್ಟೆ ಆರಂಭಿಸಬೇಕು’ ಎಂದು ಮನವಿ ಮಾಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ತಿಳಿಸಿದ್ದಾರೆ. </p>.<p>‘ಪ್ರಸಕ್ತ ಸಾಲಿನಲ್ಲಿ ಆಂಧ್ರದಲ್ಲಿ ಪ್ರಥಮ ದರ್ಜೆ ತಂಬಾಕಿಗೆ ಪ್ರತಿ ಕೆ.ಜಿಗೆ ₹ 420 ಸಿಕ್ಕಿದ್ದು, ರಾಜ್ಯದ ತಂಬಾಕು ಆಂಧ್ರದ ತಂಬಾಕಿಗಿಂತಲೂ ಉತ್ಕೃಷ್ಟವಾಗಿದ್ದು, ಪ್ರತಿ ಕೆ.ಜಿ.ಗೆ ಕನಿಷ್ಠ ₹ 375 –₹ 420ಕ್ಕಿಂತ ಹೆಚ್ಚಿಗೆ ಸಿಕ್ಕಲ್ಲಿ ರೈತರಿಗೆ ಈ ಸಾಲಿನಲ್ಲಿ ಸರಾಸರಿ ₹ 350ಕ್ಕಿಂತ ತಗ್ಗದಂತೆ ತಂಬಾಕು ಹರಾಜು ಮಂಡಳಿ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.</p>.<p>ರಾಜ್ಯ ತಂಬಾಕು ಬೆಳೆಗಾರರ ಮನವಿಗೆ ಮಂಡಳಿ ನಿರ್ದೇಶಕ ಶ್ರೀನಿವಾಸ್ ಸಕಾರಾತ್ಮಕ ಸ್ಪಂದಿಸಿದ್ದಾರೆ. ‘ಈಗಾಗಲೇ ಕಂಪನಿ, ಬೆಳೆಗಾರರ ನಡುವೆ ಒಂದು ಸುತ್ತಿನ ಮಾತುಕತೆ ನಡೆಸಿ ಕಂಪನಿಗಳಿಗೆ ರೈತರ ಕಷ್ಟ ತಿಳಿಸಲಾಗಿದೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಉಂಡುವಾಡಿ ಚಂದ್ರೇಗೌಡ, ಅಧ್ಯಕ್ಷ ಮೂದೂರು ಶಿವಣ್ಣ, ಪ್ರಕಾಶ್ ರಾಜೆ ಅರಸು, ಅಗ್ರಹಾರ ರಾಮೇಗೌಡ, ಶಂಕರಪ್ಪ, ಕಿರಿಜಾಜಿ ಧನಂಜಯ್ಯ, ದಶರಥ, ಮಹದೇವು, ಕಾಂತರಾಜು, ಕರಿಶೆಟ್ಟಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> ಪ್ರಸಕ್ತ ಸಾಲಿನಲ್ಲಿ ತಂಬಾಕು ಪ್ರತಿ ಕೆ.ಜಿ.ಗೆ ಸರಾಸರಿ ₹350 ಸಿಗುವಂತೆ ತಂಬಾಕು ಮಂಡಳಿ ಕ್ರಮವಹಿಸಬೇಕು ಎಂದು ತಂಬಾಕು ಬೆಳೆಗಾರರ ಕ್ಷೇಮಾಭಿವೃದ್ಧಿ ಸಮಿತಿಯ ಸದಸ್ಯರು ಬೆಂಗಳೂರಿನಲ್ಲಿ ತಂಬಾಕು ಮಂಡಳಿ ನಿರ್ದೇಶಕ ಶ್ರೀನಿವಾಸ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.</p>.<p>‘ಪ್ರಸಕ್ತ ಸಾಲಿನಲ್ಲಿ ಅ.8ರಂದು ತಂಬಾಕು ಹರಾಜು ಮಾರುಕಟ್ಟೆ ಆರಂಭವಾಗಲಿದ್ದು, ಮಾರುಕಟ್ಟೆಯಲ್ಲಿ ಬೆಳೆಗಾರರು ಉತ್ತಮ ದರ ಸಿಗುವ ನಿರೀಕ್ಷೆಯಲ್ಲಿದ್ದೇವೆ. ರಾಜ್ಯದಲ್ಲಿ ಪ್ರಾಕೃತಿಕ ವಿಕೋಪದ ನಡುವೆಯೂ ತಂಬಾಕು ಬೆಳೆದಿದ್ದು, ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ಈ ಎಲ್ಲವನ್ನು ಗಮನದಲ್ಲಿಟ್ಟುಕೊಂಡು ಮಂಡಳಿ ವ್ಯಾಪಾರಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಮಾರುಕಟ್ಟೆ ಆರಂಭಿಸಬೇಕು’ ಎಂದು ಮನವಿ ಮಾಡಿದ್ದೇವೆ ಎಂದು ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಹೊಸೂರು ಕುಮಾರ್ ತಿಳಿಸಿದ್ದಾರೆ. </p>.<p>‘ಪ್ರಸಕ್ತ ಸಾಲಿನಲ್ಲಿ ಆಂಧ್ರದಲ್ಲಿ ಪ್ರಥಮ ದರ್ಜೆ ತಂಬಾಕಿಗೆ ಪ್ರತಿ ಕೆ.ಜಿಗೆ ₹ 420 ಸಿಕ್ಕಿದ್ದು, ರಾಜ್ಯದ ತಂಬಾಕು ಆಂಧ್ರದ ತಂಬಾಕಿಗಿಂತಲೂ ಉತ್ಕೃಷ್ಟವಾಗಿದ್ದು, ಪ್ರತಿ ಕೆ.ಜಿ.ಗೆ ಕನಿಷ್ಠ ₹ 375 –₹ 420ಕ್ಕಿಂತ ಹೆಚ್ಚಿಗೆ ಸಿಕ್ಕಲ್ಲಿ ರೈತರಿಗೆ ಈ ಸಾಲಿನಲ್ಲಿ ಸರಾಸರಿ ₹ 350ಕ್ಕಿಂತ ತಗ್ಗದಂತೆ ತಂಬಾಕು ಹರಾಜು ಮಂಡಳಿ ಕ್ರಮವಹಿಸಬೇಕು ಎಂದು ಮನವಿ ಮಾಡಿದ್ದೇವೆ’ ಎಂದರು.</p>.<p>ರಾಜ್ಯ ತಂಬಾಕು ಬೆಳೆಗಾರರ ಮನವಿಗೆ ಮಂಡಳಿ ನಿರ್ದೇಶಕ ಶ್ರೀನಿವಾಸ್ ಸಕಾರಾತ್ಮಕ ಸ್ಪಂದಿಸಿದ್ದಾರೆ. ‘ಈಗಾಗಲೇ ಕಂಪನಿ, ಬೆಳೆಗಾರರ ನಡುವೆ ಒಂದು ಸುತ್ತಿನ ಮಾತುಕತೆ ನಡೆಸಿ ಕಂಪನಿಗಳಿಗೆ ರೈತರ ಕಷ್ಟ ತಿಳಿಸಲಾಗಿದೆ ಎಂದು ಶ್ರೀನಿವಾಸ್ ತಿಳಿಸಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.</p>.<p>ತಂಬಾಕು ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಉಂಡುವಾಡಿ ಚಂದ್ರೇಗೌಡ, ಅಧ್ಯಕ್ಷ ಮೂದೂರು ಶಿವಣ್ಣ, ಪ್ರಕಾಶ್ ರಾಜೆ ಅರಸು, ಅಗ್ರಹಾರ ರಾಮೇಗೌಡ, ಶಂಕರಪ್ಪ, ಕಿರಿಜಾಜಿ ಧನಂಜಯ್ಯ, ದಶರಥ, ಮಹದೇವು, ಕಾಂತರಾಜು, ಕರಿಶೆಟ್ಟಿ ಸೇರಿದಂತೆ ಇತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>