<p><strong>ಮೈಸೂರು:</strong> ‘ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದ್ದಾರೆ.</p>.<p>ಈ ಸಂಬಂಧ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಅವರು, ತಂಬಾಕು ಖರೀದಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.</p>.<p>‘ಈಗಿರುವ ಮಾಹಿತಿ ಪ್ರಕಾರ 10ಸಾವಿರ ಕಾರ್ಡ್ದಾರ ಬೆಳೆಗಾರರು ಸುಮಾರು 10ಮಿಲಿಯನ್ ಕೆ.ಜಿ. ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ, ಇದನ್ನು ಅನಧಿಕೃತ ಎಂದು ಘೋಷಿಸಿರುವುದರಿಂದಾಗಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಕಾಪಾಡಲು ಖರೀದಿಗೆ ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ ನೋಂದಾಯಿತರಲ್ಲದ ಬೆಳೆಗಾರರು ರಾಜ್ಯದಲ್ಲಿ 100 ಮಿಲಿಯನ್ ಕೆ.ಜಿ. ತಂಬಾಕು ಬೆಳೆಯುತ್ತಿದ್ದಾರೆ. ಆದರೆ, ಹವಾಮಾನ ವೈಪರೀತ್ಯ ಹಾಗೂ ಇತರ ಸಮಸ್ಯೆಗಳಿಂದಾಗಿ ಈ ಪ್ರಮಾಣ 80 ಮಿಲಿಯನ್ ಕೆ.ಜಿ.ಗೆ ಇಳಿದಿದೆ’ ಎಂದು ವಿವರಿಸಿದ್ದಾರೆ.</p>.<p>‘ನೋಂದಾಯಿತರಲ್ಲದವರಿಗೆ ‘ನೋಂದಾಯಿತ ತಂಬಾಕು ಬೆಳೆಗಾರರು’ ಎಂಬ ಮಾನ್ಯತೆ ನೀಡಬೇಕು. ಜೊತೆಗೆ ಖರೀದಿ ಪ್ರಮಾಣವನ್ನು ಶೇ. 10ರಷ್ಟು ಹೆಚ್ಚಿಸಬೇಕು. ಇದರಿಂದ ಒಟ್ಟಾರೆ ಪ್ರಮಾಣ ಜಾಸ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ತಂಬಾಕು ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆಗಾರರಿಗೆ ನೆರವಾಗಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತಂಬಾಕು ಬೆಳೆಗಾರರ ಸಂಖ್ಯೆ ಹೆಚ್ಚಾಗಿದ್ದು, ಇವರ ಸಮಸ್ಯೆಗಳನ್ನು ಕೂಡಲೇ ಪರಿಹರಿಸಬೇಕು’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಕೋರಿದ್ದಾರೆ.</p>.<p>ಈ ಸಂಬಂಧ ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಅವರಿಗೆ ಪತ್ರ ಬರೆದಿರುವ ಅವರು, ತಂಬಾಕು ಖರೀದಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ತಿಳಿಸಿದ್ದಾರೆ.</p>.<p>‘ಈಗಿರುವ ಮಾಹಿತಿ ಪ್ರಕಾರ 10ಸಾವಿರ ಕಾರ್ಡ್ದಾರ ಬೆಳೆಗಾರರು ಸುಮಾರು 10ಮಿಲಿಯನ್ ಕೆ.ಜಿ. ತಂಬಾಕು ಬೆಳೆ ಬೆಳೆದಿದ್ದಾರೆ. ಆದರೆ, ಇದನ್ನು ಅನಧಿಕೃತ ಎಂದು ಘೋಷಿಸಿರುವುದರಿಂದಾಗಿ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ’ ಎಂದು ಪತ್ರದಲ್ಲಿ ವಿವರಿಸಿದ್ದಾರೆ.</p>.<p>‘ಆರ್ಥಿಕವಾಗಿ ತೀರಾ ಸಂಕಷ್ಟ ಎದುರಿಸುತ್ತಿರುವ ಬೆಳೆಗಾರರನ್ನು ಕಾಪಾಡಲು ಖರೀದಿಗೆ ಅವಕಾಶ ಕಲ್ಪಿಸಬೇಕು’ ಎಂದು ಮನವಿ ಮಾಡಿದ್ದಾರೆ.</p>.<p>‘ಕಳೆದ ಹತ್ತು ವರ್ಷಗಳ ಲೆಕ್ಕಾಚಾರ ಗಮನಿಸಿದಾಗ, ನೋಂದಾಯಿತ ಹಾಗೂ ನೋಂದಾಯಿತರಲ್ಲದ ಬೆಳೆಗಾರರು ರಾಜ್ಯದಲ್ಲಿ 100 ಮಿಲಿಯನ್ ಕೆ.ಜಿ. ತಂಬಾಕು ಬೆಳೆಯುತ್ತಿದ್ದಾರೆ. ಆದರೆ, ಹವಾಮಾನ ವೈಪರೀತ್ಯ ಹಾಗೂ ಇತರ ಸಮಸ್ಯೆಗಳಿಂದಾಗಿ ಈ ಪ್ರಮಾಣ 80 ಮಿಲಿಯನ್ ಕೆ.ಜಿ.ಗೆ ಇಳಿದಿದೆ’ ಎಂದು ವಿವರಿಸಿದ್ದಾರೆ.</p>.<p>‘ನೋಂದಾಯಿತರಲ್ಲದವರಿಗೆ ‘ನೋಂದಾಯಿತ ತಂಬಾಕು ಬೆಳೆಗಾರರು’ ಎಂಬ ಮಾನ್ಯತೆ ನೀಡಬೇಕು. ಜೊತೆಗೆ ಖರೀದಿ ಪ್ರಮಾಣವನ್ನು ಶೇ. 10ರಷ್ಟು ಹೆಚ್ಚಿಸಬೇಕು. ಇದರಿಂದ ಒಟ್ಟಾರೆ ಪ್ರಮಾಣ ಜಾಸ್ತಿಯಾಗುತ್ತದೆ. ಈ ನಿಟ್ಟಿನಲ್ಲಿ ತಂಬಾಕು ಮಂಡಳಿಯ ಅಧಿಕಾರಿಗಳಿಗೆ ಸೂಚನೆ ನೀಡಿ ಬೆಳೆಗಾರರಿಗೆ ನೆರವಾಗಬೇಕು’ ಎಂದು ಪತ್ರದಲ್ಲಿ ಕೋರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>