<p><strong>ಮೈಸೂರು</strong>: ‘ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸದಸ್ಯರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಬಾಲಾಜಿರಾವ್ ಮಾತನಾಡಿ, ‘ದೇಶದ ಸಂವಿಧಾನ ಖಾತರಿಪಡಿಸಿರುವ ಒಕ್ಕೂಟ ಪದ್ದತಿಯಲ್ಲಿ ರಾಜ್ಯ ಸರ್ಕಾರಕ್ಕಿರುವ ಅಧಿಕಾರವನ್ನು ನುಂಗುವ ಕೇಂದ್ರ ಸರ್ಕಾರದ ನಡೆ ಖಂಡನೀಯ. ಕಾರ್ಮಿಕರ ಕುರಿತ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿರುವುದರಿಂದ ರಾಜ್ಯದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಿಯಮ ಬದಲಿಸಬೇಕು. 4 ಕಾರ್ಮಿಕ ಸಂಹಿತೆಗಳಲ್ಲಿ ಕಾರ್ಮಿಕರಿಗೆ ಮಾರಕವಾಗಿರುವ ಅಂಶಗಳನ್ನು ತಿದ್ದುಪಡಿ ಮೂಲಕ ಬದಲಿಸಬೇಕು. ಸಂಹಿತೆಗಳ ಜಾರಿಗೆ ಅಗತ್ಯ ನಿಯಮಾವಳಿ ರೂಪಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಸಂಹಿತೆ ಮತ್ತು ಕರಡು ನಿಯಮಾವಳಿ ಪ್ರಕಟಿಸಿದೆ. ದೇಶದ ಕಾರ್ಮಿಕರಿಗೆ ಈ ಕಾನೂನು ಮತ್ತು ನಿಯಮಾವಳಿಗಳನ್ನು ಅವರವರ ಮಾತೃ ಭಾಷೆಯಲ್ಲಿ ತಿಳಿದುಕೊಳ್ಳುವ ಹಕ್ಕಿದೆ. ಇದನ್ನು ನಿರಾಕರಿಸಬಾರದು. ರಾಜ್ಯ ಸರ್ಕಾರ ಕನ್ನಡದಲ್ಲಿ ಪ್ರಕಟಿಸಬೇಕು. ನಿಯಮಾವಳಿ ಮತ್ತು ಕಾನೂನುಗಳನ್ನು ಓದಲು ರಾಜ್ಯದ ಕಾರ್ಮಿಕರಿಗೆ ಮುಕ್ತ ಅವಕಾಶವಿರಬೇಕು’ ಎಂದು ಒತ್ತಾಯಿಸಿದರು.</p>.<p>‘ಕನ್ನಡದಲ್ಲಿ ಸಂಹಿತೆ ಮತ್ತು ನಿಯಮಾವಾಳಿ ಪ್ರಕಟಿಸಿದ ನಂತರ ಆಕ್ಷೇಪಣೆ ಸಲ್ಲಿಸಲು ಕನಿಷ್ಠ 2 ತಿಂಗಳು ಅವಕಾಶ ನೀಡಬೇಕು. ರಾಜ್ಯ ಸರ್ಕಾರ ತನ್ನ ಅಧಿಕಾರ ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರ ನಿಯಮಾವಳಿ ರೂಪಿಸಬೇಕು. ಕೂಡಲೇ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಅಣ್ಣಪ್ಪ, ಪುಷ್ಪಲತಾ, ಜಯರಾಂ, ಬಸವಯ್ಯ, ರೇವಣ್ಣ ಸಿದ್ದಪ್ಪ, ಶಶಿಕುಮಾರ್, ಕಮಲಾಕ್ಷಿ, ಲೀಲಾವತಿ, ಚಂದ್ರಿಕಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಸರ್ಕಾರದ ನಾಲ್ಕು ಕಾರ್ಮಿಕ ಕಾಯ್ದೆಗಳನ್ನು ಹಿಂಪಡೆಯಬೇಕು’ ಎಂದು ಒತ್ತಾಯಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ (ಸಿಐಟಿಯು) ಸದಸ್ಯರು ನಗರದ ಸಹಾಯಕ ಕಾರ್ಮಿಕ ಆಯುಕ್ತರ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.</p>.<p>ಸಂಘಟನೆಯ ಪ್ರಧಾನ ಕಾರ್ಯದರ್ಶಿ ಎನ್.ಕೆ.ಬಾಲಾಜಿರಾವ್ ಮಾತನಾಡಿ, ‘ದೇಶದ ಸಂವಿಧಾನ ಖಾತರಿಪಡಿಸಿರುವ ಒಕ್ಕೂಟ ಪದ್ದತಿಯಲ್ಲಿ ರಾಜ್ಯ ಸರ್ಕಾರಕ್ಕಿರುವ ಅಧಿಕಾರವನ್ನು ನುಂಗುವ ಕೇಂದ್ರ ಸರ್ಕಾರದ ನಡೆ ಖಂಡನೀಯ. ಕಾರ್ಮಿಕರ ಕುರಿತ ವಿಚಾರಗಳು ಸಮವರ್ತಿ ಪಟ್ಟಿಯಲ್ಲಿರುವುದರಿಂದ ರಾಜ್ಯದ ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ನಿಯಮ ಬದಲಿಸಬೇಕು. 4 ಕಾರ್ಮಿಕ ಸಂಹಿತೆಗಳಲ್ಲಿ ಕಾರ್ಮಿಕರಿಗೆ ಮಾರಕವಾಗಿರುವ ಅಂಶಗಳನ್ನು ತಿದ್ದುಪಡಿ ಮೂಲಕ ಬದಲಿಸಬೇಕು. ಸಂಹಿತೆಗಳ ಜಾರಿಗೆ ಅಗತ್ಯ ನಿಯಮಾವಳಿ ರೂಪಿಸಬೇಕು’ ಎಂದು ಆಗ್ರಹಿಸಿದರು.</p>.<p>‘ಕೇಂದ್ರ ಸರ್ಕಾರ ಹಿಂದಿ ಮತ್ತು ಆಂಗ್ಲ ಭಾಷೆಗಳಲ್ಲಿ ಸಂಹಿತೆ ಮತ್ತು ಕರಡು ನಿಯಮಾವಳಿ ಪ್ರಕಟಿಸಿದೆ. ದೇಶದ ಕಾರ್ಮಿಕರಿಗೆ ಈ ಕಾನೂನು ಮತ್ತು ನಿಯಮಾವಳಿಗಳನ್ನು ಅವರವರ ಮಾತೃ ಭಾಷೆಯಲ್ಲಿ ತಿಳಿದುಕೊಳ್ಳುವ ಹಕ್ಕಿದೆ. ಇದನ್ನು ನಿರಾಕರಿಸಬಾರದು. ರಾಜ್ಯ ಸರ್ಕಾರ ಕನ್ನಡದಲ್ಲಿ ಪ್ರಕಟಿಸಬೇಕು. ನಿಯಮಾವಳಿ ಮತ್ತು ಕಾನೂನುಗಳನ್ನು ಓದಲು ರಾಜ್ಯದ ಕಾರ್ಮಿಕರಿಗೆ ಮುಕ್ತ ಅವಕಾಶವಿರಬೇಕು’ ಎಂದು ಒತ್ತಾಯಿಸಿದರು.</p>.<p>‘ಕನ್ನಡದಲ್ಲಿ ಸಂಹಿತೆ ಮತ್ತು ನಿಯಮಾವಾಳಿ ಪ್ರಕಟಿಸಿದ ನಂತರ ಆಕ್ಷೇಪಣೆ ಸಲ್ಲಿಸಲು ಕನಿಷ್ಠ 2 ತಿಂಗಳು ಅವಕಾಶ ನೀಡಬೇಕು. ರಾಜ್ಯ ಸರ್ಕಾರ ತನ್ನ ಅಧಿಕಾರ ಚಲಾಯಿಸಿ ಮೂಲ ಸಂಹಿತೆಗಳಿಗೆ ತಿದ್ದುಪಡಿ ತಂದು ನಂತರ ನಿಯಮಾವಳಿ ರೂಪಿಸಬೇಕು. ಕೂಡಲೇ ಕನಿಷ್ಠ ವೇತನ ಅಧಿಸೂಚನೆ ಹೊರಡಿಸಬೇಕು’ ಎಂದು ಆಗ್ರಹಿಸಿದರು.</p>.<p>ಮುಖಂಡರಾದ ಅಣ್ಣಪ್ಪ, ಪುಷ್ಪಲತಾ, ಜಯರಾಂ, ಬಸವಯ್ಯ, ರೇವಣ್ಣ ಸಿದ್ದಪ್ಪ, ಶಶಿಕುಮಾರ್, ಕಮಲಾಕ್ಷಿ, ಲೀಲಾವತಿ, ಚಂದ್ರಿಕಾ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>