ಎಂಐಟಿ ಕಾಲೇಜು ಆವರಣದಲ್ಲಿ ವಾಸ್ತವ್ಯ ಹೂಡುವ ರಾಹುಲ್, ಅ.2ರಂದು ವಾಹನದ ಮೂಲಕ ಬದನವಾಳು ಗ್ರಾಮಕ್ಕೆ ತೆರಳಿ ಗಾಂಧಿ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಕಡಕೊಳದಿಂದ ಪಾದಯಾತ್ರೆ ಮೂಲಕ ಮೈಸೂರಿಗೆ ಆಗಮಿಸಲಿದ್ದಾರೆ. ಹೀಗಾಗಿ, ಸಂಚಾರ ಮಾರ್ಗವನ್ನು ಬದಲಿಸಲಾಗಿದೆ. ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.