<p><strong>ಮೈಸೂರು:</strong> ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ತೃತೀಯ ಲಿಂಗಿಗಳ ಮಸೂದೆ ವಿರುದ್ಧ ಆಶೋದಯ ಸಮಿತಿಯ ನೇತೃತ್ವದಲ್ಲಿ ತೃತೀಯ ಲಿಂಗಿಗಳು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.</p>.<p>ಈ ಮಸೂದೆಯಲ್ಲಿರುವ ಹಲವು ಅಂಶಗಳು ತೃತೀಯ ಲಿಂಗಿಗಳ ಪಾಲಿಗೆ ಕರಾಳ ಎನಿಸಿವೆ. ಕೂಡಲೇ ಈ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ಅವರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ತೃತೀಯ ಲಿಂಗಿಗಳೆಂದು ಕೇವಲ ವ್ಯಕ್ತಿಯ ಬಾಹ್ಯ ಲಕ್ಷಣಗಳ ಆಧಾರದ ಮೇಲೆ ಹೇಳುವುದು, ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಪ್ರಮಾಣಪತ್ರ ನೀಡುವುದು ಸೇರಿದಂತೆ ಹಲವು ಅಂಶಗಳು ತೀರಾ ಅವೈಜ್ಞಾನಿಕವಾಗಿದೆ ಹಾಗೂ ಗೌಪ್ಯತೆ ಇದರಲ್ಲಿ ಇಲ್ಲ ಎಂದು ಅವರು ಆರೋಪಿಸಿದರು.</p>.<p>ತೃತೀಯ ಲಿಂಗಿಗಳಿಗೆ ಉದ್ಯೋಗ, ಶಿಕ್ಷಣಗಳಲ್ಲಿ ತಾರತಮ್ಯ ಮಾಡಬಾರದು ಎಂದು ಮಸೂದೆ ಹೇಳಿದೆ. ಆದರೆ, ಮೀಸಲಾತಿಯನ್ನು ಕಲ್ಪಿಸಿಲ್ಲ. ಮೀಸಲಾತಿ ಇಲ್ಲದೇ ಉದ್ಯೋಗವಾಗಲಿ, ಶಿಕ್ಷಣವಾಗಲಿ ತೃತೀಯ ಲಿಂಗಿಗಳಿಗೆ ಸಿಗುವುದು ದುಸ್ತರ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕೂಡಲೇ ಈ ಮಸೂದೆ ಕುರಿತು ಹೆಚ್ಚಿನ ಚರ್ಚೆಯಾಗಬೇಕು. ಹಲವು ಅಂಶಗಳು ಬದಲಾವಣೆಯಾಗಬೇಕಿದೆ. ತರಾತುರಿಯಲ್ಲಿ ಈ ಮಸೂದೆ ಜಾರಿ ಬೇಡ ಎಂದು ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಕೇಂದ್ರ ಸರ್ಕಾರ ಜಾರಿಗೆ ತರುತ್ತಿರುವ ತೃತೀಯ ಲಿಂಗಿಗಳ ಮಸೂದೆ ವಿರುದ್ಧ ಆಶೋದಯ ಸಮಿತಿಯ ನೇತೃತ್ವದಲ್ಲಿ ತೃತೀಯ ಲಿಂಗಿಗಳು ನಗರದಲ್ಲಿ ಪ್ರತಿಭಟನಾ ಜಾಥಾ ನಡೆಸಿದರು.</p>.<p>ಈ ಮಸೂದೆಯಲ್ಲಿರುವ ಹಲವು ಅಂಶಗಳು ತೃತೀಯ ಲಿಂಗಿಗಳ ಪಾಲಿಗೆ ಕರಾಳ ಎನಿಸಿವೆ. ಕೂಡಲೇ ಈ ಮಸೂದೆಯನ್ನು ವಾಪಸ್ ಪಡೆಯಬೇಕು ಎಂದು ಅವರು ಒಕ್ಕೊರಲಿನಿಂದ ಆಗ್ರಹಿಸಿದರು.</p>.<p>ತೃತೀಯ ಲಿಂಗಿಗಳೆಂದು ಕೇವಲ ವ್ಯಕ್ತಿಯ ಬಾಹ್ಯ ಲಕ್ಷಣಗಳ ಆಧಾರದ ಮೇಲೆ ಹೇಳುವುದು, ಈ ಕುರಿತು ಜಿಲ್ಲಾ ಮಟ್ಟದ ಅಧಿಕಾರಿಯೊಬ್ಬರು ಪ್ರಮಾಣಪತ್ರ ನೀಡುವುದು ಸೇರಿದಂತೆ ಹಲವು ಅಂಶಗಳು ತೀರಾ ಅವೈಜ್ಞಾನಿಕವಾಗಿದೆ ಹಾಗೂ ಗೌಪ್ಯತೆ ಇದರಲ್ಲಿ ಇಲ್ಲ ಎಂದು ಅವರು ಆರೋಪಿಸಿದರು.</p>.<p>ತೃತೀಯ ಲಿಂಗಿಗಳಿಗೆ ಉದ್ಯೋಗ, ಶಿಕ್ಷಣಗಳಲ್ಲಿ ತಾರತಮ್ಯ ಮಾಡಬಾರದು ಎಂದು ಮಸೂದೆ ಹೇಳಿದೆ. ಆದರೆ, ಮೀಸಲಾತಿಯನ್ನು ಕಲ್ಪಿಸಿಲ್ಲ. ಮೀಸಲಾತಿ ಇಲ್ಲದೇ ಉದ್ಯೋಗವಾಗಲಿ, ಶಿಕ್ಷಣವಾಗಲಿ ತೃತೀಯ ಲಿಂಗಿಗಳಿಗೆ ಸಿಗುವುದು ದುಸ್ತರ ಎಂದು ಅವರು ಅಭಿಪ್ರಾಯಪಟ್ಟರು.</p>.<p>ಕೂಡಲೇ ಈ ಮಸೂದೆ ಕುರಿತು ಹೆಚ್ಚಿನ ಚರ್ಚೆಯಾಗಬೇಕು. ಹಲವು ಅಂಶಗಳು ಬದಲಾವಣೆಯಾಗಬೇಕಿದೆ. ತರಾತುರಿಯಲ್ಲಿ ಈ ಮಸೂದೆ ಜಾರಿ ಬೇಡ ಎಂದು ಅವರು ಜಿಲ್ಲಾಧಿಕಾರಿಗೆ ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>