ಮಳೆಗಾಲದ ಕಾರಣ ನೆಲ ಥಂಡಿಯಿಂದ ಕೂಡಿದ್ದು, ಮಕ್ಕಳಿಗೆ ಸೋಂಕು ತಗುಲುವ ಆತಂಕ ಉಂಟಾಗಿದೆ. ನೂರಾರು ಬಾಣಂತಿಯರು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ದೂರುಗಳು ಬಂದ ಕಾರಣ ಶಾಸಕ ಎಲ್.ನಾಗೇಂದ್ರ ಅವರು ಮಂಗಳವಾರ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ವೈದ್ಯಾಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.