<p><strong>ಮೈಸೂರು</strong>: ‘ಆದಿವಾಸಿಗಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು’ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಎಂ.ಆರ್.ಗಂಗಾಧರ್ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಿಂದ ಸೋಮವಾರ ನಡೆದ ‘ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ’ ಕುರಿತ 2 ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಆರೋಗ್ಯ ಎಂದರೆ ಕೇವಲ ಔಷಧ ಮತ್ತು ಆಸ್ಪತ್ರೆಯಲ್ಲ, ಅದು ಪೌಷ್ಠಿಕತೆ, ನಂಬಿಕೆ, ಪಾರಂಪರಿಕತೆ ಮತ್ತು ಅಸ್ಮಿತೆಯನ್ನು ಒಳಗೊಂಡಿದೆ. ಆದಿವಾಸಿಗಳ ವಿಶೇಷವಾದ ಜ್ಞಾನ ಜಾಗತೀಕರಣದಲ್ಲಿ ಸ್ಥಾನ ಪಲ್ಲಟಗೊಳ್ಳುತ್ತಿದೆ. ಆದಿವಾಸಿಗಳ ಪಾರಂಪರಿಕ ಜ್ಞಾನವನ್ನು ನಮ್ಮ ಆಧುನಿಕ ವೈದ್ಯ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ’ ಎಂದರು.</p>.<p>‘ಜಾಗತೀಕರಣವೂ ಹಲವು ಸುಧಾರಣೆಗಳನ್ನು ತಂದಿದೆ. ಸರ್ಕಾರಿ ಯೋಜನೆಗಳು ದೂರದ ಪ್ರದೇಶಗಳನ್ನು ತಲುಪುತ್ತವೆ. ಮೊಬೈಲ್ ಚಿಕಿತ್ಸಾಲಯಗಳು, ತರಬೇತಿ ಪಡೆದ ವೈದ್ಯರು ಬುಡಕಟ್ಟು ಪ್ರದೇಶಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>ಸಹಪ್ರಾಧ್ಯಾಪಕ ಜೈ ಪ್ರಭಾಕರ್ ಎಸ್.ಸಿ. ಮಾತನಾಡಿ, ‘ಆದಿವಾಸಿಗಳ ಆರೋಗ್ಯದ ಬಗ್ಗೆ ಬಹಳಷ್ಟು ಸಂಶೋಧನೆಗಳು ನಡೆಯುತ್ತಿವೆ. ಇದರಲ್ಲಿ ಧಾರ್ಮಿಕ ನಂಬಿಕೆಗಳಿಗೆ ಬೆಲೆ ಕೊಡಬೇಕು. ದೇಶೀಯತೆಯನ್ನು ಒಳಗೊಂಡ ಜಾಗತೀಕರಣವೂ ಬೇಕು. ಆದಿವಾಸಿಗಳಲ್ಲಿ ಅಪೌಷ್ಠಿಕತೆ, ಕಾಯಿಲೆಗಳೂ ಹೆಚ್ಚಾಗುತ್ತಿವೆ. ಅವರ ಜಾನಪದ ವೈದ್ಯ ಪದ್ಧತಿಯನ್ನು ಪೋಷಿಸಬೇಕಿದೆ’ ಎಂದರು.</p>.<p>ಸಂಸ್ಥೆಯ ಉಪನಿರ್ದೇಶಕಿ ಎಚ್.ಎಸ್. ಗಿರಿಜಾಂಬ, ವಿಶ್ರಾಂತ ಪ್ರಾಧ್ಯಾಪಕ ಕಂಡಿಕೆರೆ ರಾಮಯ್ಯ ಶ್ರೀಧರ್, ಸಂಶೋಧನಾಧಿಕಾರಿ ಶಿವಕುಮಾರ್ ಸಿ., ಕೃಷ್ಣಮೂರ್ತಿ ಕೆ.ವಿ. ಮಾತನಾಡಿದರು.</p>.<p>ಕ್ಷೇತ್ರ ಸಂಶೋಧಕರಾದ ದಿನೇಶ್ ಕೆ.ಡಿ., ರಾಮಕೃಷ್ಣಯ್ಯ ಡಿ.ಸಿ. ರವಿಕುಮಾರ್, ಮೋಹನ್ಕುಮಾರ್, ಕಚೇರಿ ಅಧೀಕ್ಷಕಿ ಎಂ.ವಿ. ನಾಗರತ್ನ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಆದಿವಾಸಿಗಳು ಪ್ರಪಂಚದ ಅತ್ಯಂತ ಪುರಾತನ ಸಂಸ್ಕೃತಿ ಮತ್ತು ಜ್ಞಾನದ ವಾರಸುದಾರರು’ ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಪತಿ ಎಂ.ಆರ್.ಗಂಗಾಧರ್ ತಿಳಿಸಿದರು.</p>.<p>ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಲ್ಲಿ ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ ಹಾಗೂ ಪರಿಶಿಷ್ಠ ವರ್ಗಗಳ ಕಲ್ಯಾಣ ಇಲಾಖೆಯಿಂದ ಸೋಮವಾರ ನಡೆದ ‘ಬುಡಕಟ್ಟು ಜನರ ಆರೋಗ್ಯ ಮತ್ತು ಆರೋಗ್ಯ ರಕ್ಷಣಾ ಪದ್ಧತಿಗಳ ಮೇಲೆ ಜಾಗತೀಕರಣ ಮತ್ತು ಸಾಂಸ್ಕೃತಿಕ ನಂಬಿಕೆಗಳ ಪ್ರಭಾವ’ ಕುರಿತ 2 ದಿನಗಳ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>‘ಆರೋಗ್ಯ ಎಂದರೆ ಕೇವಲ ಔಷಧ ಮತ್ತು ಆಸ್ಪತ್ರೆಯಲ್ಲ, ಅದು ಪೌಷ್ಠಿಕತೆ, ನಂಬಿಕೆ, ಪಾರಂಪರಿಕತೆ ಮತ್ತು ಅಸ್ಮಿತೆಯನ್ನು ಒಳಗೊಂಡಿದೆ. ಆದಿವಾಸಿಗಳ ವಿಶೇಷವಾದ ಜ್ಞಾನ ಜಾಗತೀಕರಣದಲ್ಲಿ ಸ್ಥಾನ ಪಲ್ಲಟಗೊಳ್ಳುತ್ತಿದೆ. ಆದಿವಾಸಿಗಳ ಪಾರಂಪರಿಕ ಜ್ಞಾನವನ್ನು ನಮ್ಮ ಆಧುನಿಕ ವೈದ್ಯ ಪದ್ಧತಿಯಲ್ಲಿ ಅಳವಡಿಸಿಕೊಳ್ಳುವುದು ಅತ್ಯವಶ್ಯ’ ಎಂದರು.</p>.<p>‘ಜಾಗತೀಕರಣವೂ ಹಲವು ಸುಧಾರಣೆಗಳನ್ನು ತಂದಿದೆ. ಸರ್ಕಾರಿ ಯೋಜನೆಗಳು ದೂರದ ಪ್ರದೇಶಗಳನ್ನು ತಲುಪುತ್ತವೆ. ಮೊಬೈಲ್ ಚಿಕಿತ್ಸಾಲಯಗಳು, ತರಬೇತಿ ಪಡೆದ ವೈದ್ಯರು ಬುಡಕಟ್ಟು ಪ್ರದೇಶಗಳಲ್ಲಿಯೂ ಸೇವೆ ಸಲ್ಲಿಸುತ್ತಿದ್ದಾರೆ’ ಎಂದರು.</p>.<p>ಸಹಪ್ರಾಧ್ಯಾಪಕ ಜೈ ಪ್ರಭಾಕರ್ ಎಸ್.ಸಿ. ಮಾತನಾಡಿ, ‘ಆದಿವಾಸಿಗಳ ಆರೋಗ್ಯದ ಬಗ್ಗೆ ಬಹಳಷ್ಟು ಸಂಶೋಧನೆಗಳು ನಡೆಯುತ್ತಿವೆ. ಇದರಲ್ಲಿ ಧಾರ್ಮಿಕ ನಂಬಿಕೆಗಳಿಗೆ ಬೆಲೆ ಕೊಡಬೇಕು. ದೇಶೀಯತೆಯನ್ನು ಒಳಗೊಂಡ ಜಾಗತೀಕರಣವೂ ಬೇಕು. ಆದಿವಾಸಿಗಳಲ್ಲಿ ಅಪೌಷ್ಠಿಕತೆ, ಕಾಯಿಲೆಗಳೂ ಹೆಚ್ಚಾಗುತ್ತಿವೆ. ಅವರ ಜಾನಪದ ವೈದ್ಯ ಪದ್ಧತಿಯನ್ನು ಪೋಷಿಸಬೇಕಿದೆ’ ಎಂದರು.</p>.<p>ಸಂಸ್ಥೆಯ ಉಪನಿರ್ದೇಶಕಿ ಎಚ್.ಎಸ್. ಗಿರಿಜಾಂಬ, ವಿಶ್ರಾಂತ ಪ್ರಾಧ್ಯಾಪಕ ಕಂಡಿಕೆರೆ ರಾಮಯ್ಯ ಶ್ರೀಧರ್, ಸಂಶೋಧನಾಧಿಕಾರಿ ಶಿವಕುಮಾರ್ ಸಿ., ಕೃಷ್ಣಮೂರ್ತಿ ಕೆ.ವಿ. ಮಾತನಾಡಿದರು.</p>.<p>ಕ್ಷೇತ್ರ ಸಂಶೋಧಕರಾದ ದಿನೇಶ್ ಕೆ.ಡಿ., ರಾಮಕೃಷ್ಣಯ್ಯ ಡಿ.ಸಿ. ರವಿಕುಮಾರ್, ಮೋಹನ್ಕುಮಾರ್, ಕಚೇರಿ ಅಧೀಕ್ಷಕಿ ಎಂ.ವಿ. ನಾಗರತ್ನ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>