<p><strong>ಹುಣಸೂರು:</strong> 22 ವರ್ಷಗಳ ಹಿಂದೆ ಆಶ್ರಯ ಸಮಿತಿಯಿಂದ ಹಕ್ಕು ಪತ್ರ ನೀಡಿದ್ದರೂ ಈವರೆಗೆ ನಿವೇಶನ ಹಸ್ತಾಂತರಿಸಿಲ್ಲ ಎಂದು ಆರೋಪಿಸಿ ಫಲಾನುಭವಿಗಳು ಹುಣಸೂರು ನಾಗರೀಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>‘ಆರ್ಥಿಕ ದುರ್ಬಲ ಮತ್ತು ಹಿಂದುಳಿದ ವರ್ಗದವರಿಗೆ 1991ರಲ್ಲಿ ಶಾಸಕ ವಿ.ಪಾಪಣ್ಣ ಅವರು ವಿತರಿಸಿದ್ದ 870 ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮಾತ್ರ ಕೈಸೇರಿದ್ದು, ನಗರಸಭೆ ಆಡಳಿತ ಮಂಡಳಿ ಈವರಗೆ ಯಾವುದೇ ಕ್ರಮ ಕೈಗೊಳ್ಳದೆ ಫಲಾನುಭವಿಗಳು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ’ ಎಂದರು.</p>.<p>‘ಇಂದಿನ ಶಾಸಕರು ಪುನರ್ ಪರಿಶೀಲನೆ ನಡೆಸಿದ ಬಳಿಕ ನಿವೇಶನ ಗುರುತಿಸಿ ಫಲಾನುಭವಿಗೆ ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದು, ಈ ಹಿಂದಿನ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತು ಅಂದಿನ ಶಾಸಕರು ನೀಡಿದ ಆದೇಶ ಪತ್ರಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅಂದಿನ ಟೌನ್ ಪ್ಲಾನ್ ಸಮ್ಮತಿಸಿ ಫಲಾನುಭವಿಗಳಿಗೆ ನೀಡಿದ ಮೇಲೆ ಯಾವುದೇ ಮರುಪರಿಶೀಲನೆ ಅನಗತ್ಯ. ಫಲಾನುಭವಿಗಳಿಗೆ ಹಕ್ಕುಪತ್ರಕ್ಕೆ ಅನುಗುಣವಾಗಿ ನಿವೇಶನ ಗುರುತಿಸಿ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಅಹಿಂದ ರೈತ ಸಂಘದ ಅಧ್ಯಕ್ಷ ಶಿವಶೇಖರ್ ಮಾತನಾಡಿ, ‘ಅಧಿಕಾರಿಗಳಲ್ಲಿ ಅಸ್ಪಷ್ಟತೆ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸೂಕ್ತ ಮಾಹಿತಿ ನೀಡಿ ಮಂಜೂರಾಗಿರುವ ನಿವೇಶನವನ್ನು ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಸಮಸ್ಯೆ ಕುರಿತು ಚರ್ಚಿಸಿ ಕಾನೂನು ವ್ಯಾಪ್ತಿಯೊಳಗೆ ಬಗೆಹರಿಸಿ ಫಲಾನುಭವಿಗಳಿಗೆ ನಿವೇಶನ ನೀಡಬೇಕು, ನಗರಸಭೆ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ಸಮಸ್ಯೆ ಬಗೆಹರಿಯುತ್ತಿದೆ, ಆದರೆ ನಗರಸಭೆ ವ್ಯಾಪ್ತಿಯ ಬಡಾವಣೆಯಲ್ಲಿ ಏಕೆ ಸಮಸ್ಯೆ ಬಗೆಹರಿಯುತ್ತಿಲ್ಲ’ ಎಂದರು.</p>.<p>‘ನಗರಸಭೆ ಆಯುಕ್ತರು ಜನಪರ ಸೇವೆಗೆ ಒತ್ತು ನೀಡದೆ ಉನ್ನತಾಧಿಕಾರಿ ಮತ್ತು ಜನಪ್ರತಿನಿಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಜನಸಾಮಾನ್ಯರ ಪರವಾಗಿ ಅಧಿಕಾರಿಗಳು ಆಡಳಿತ ನಡೆಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತನ್ನದೇ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ಇಂಟೆಕ್ ರಾಜು ಹೇಳಿದರು.</p>.<p>‘ನಗರಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದ ಹುಣಸೂರು ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸ್ವಾಮೀಗೌಡ ಅವರು ಅಧಿಕಾರದಲ್ಲಿದ್ದಾಗ ಒಮ್ಮೆಯೂ ಈ ವಿಷಯದ ಬಗ್ಗೆ ಚರ್ಚಿಸಲಿಲ್ಲ, ಚುನಾವಣೆ ಗುರಿಯಾಗಿಟ್ಟುಕೊಂಡು ಸ್ವಾರ್ಥ ರಾಜಕೀಯಕ್ಕೆ ಧ್ವನಿ ಇಲ್ಲದ ಫಲಾನುಭವಿಗಳನ್ನು ಬಲಿಪಶು ಮಾಡಲಾಗಿದೆ’ ಎಂದು ಜೆಡಿಎಸ್ ಮುಖಂಡ ಸತೀಶ್ ಕುಮಾರ್ ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಸುರೇಶ್, ಸನಾವುಲ್ಲಾ, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಸತೀಶ್, ಚಿದಾನಂದ, ಮಹದೇವ್, ಸಣ್ಣಯ್ಯ, ಜಗದೀಶ್, ಪರಶುರಾಮ್, ಶಿವಕುಮಾರ್, ಗೋಪಿ, ಸುರೇಶ್ ತಿಟ್ಟು, ಸಲೀಂ, ಸಂತೋಷ್, ಲಕ್ಷ್ಮಣ್, ಪಾಪನಾಯಕ, ಮಯೂರ ಭಾಗವಹಿಸಿದ್ದರು.</p>.<div><blockquote>ನಗರಸಭೆ ವ್ಯಾಪ್ತಿಯಲ್ಲಿ ಈ ಹಿಂದೆ ವಿತರಿಸಿದ ನಿವೇಶನ ಸಂಬಂಧ ಈಗಾಗಲೇ ದಾಖಲೆಗಳ ಪರಿಶೀಲನೆ ನಡೆದಿದೆ. ಈ ನಡುವೆ ಸ್ಥಳಕ್ಕೆ ಭೇಟಿ ನೀಡಿ ನಿವೇಶನದಲ್ಲಿ ಬೆಳೆದಿದ್ದ ಗಿಡಗಂಟಿ ತೆರವುಗೊಳಿಸಿ ಅಭಿವೃದ್ಧಿಗೆ ಕ್ರಮವಹಿಸಿದ್ದೇವೆ. </blockquote><span class="attribution">ಮಾನಸ ನಗರಸಭೆ ಆಯುಕ್ತೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಣಸೂರು:</strong> 22 ವರ್ಷಗಳ ಹಿಂದೆ ಆಶ್ರಯ ಸಮಿತಿಯಿಂದ ಹಕ್ಕು ಪತ್ರ ನೀಡಿದ್ದರೂ ಈವರೆಗೆ ನಿವೇಶನ ಹಸ್ತಾಂತರಿಸಿಲ್ಲ ಎಂದು ಆರೋಪಿಸಿ ಫಲಾನುಭವಿಗಳು ಹುಣಸೂರು ನಾಗರೀಕರ ಹಿತರಕ್ಷಣಾ ಸಮಿತಿ ನೇತೃತ್ವದಲ್ಲಿ ನಗರಸಭೆ ಮುಂಭಾಗ ಪ್ರತಿಭಟನೆ ನಡೆಸಿದರು.</p>.<p>‘ಆರ್ಥಿಕ ದುರ್ಬಲ ಮತ್ತು ಹಿಂದುಳಿದ ವರ್ಗದವರಿಗೆ 1991ರಲ್ಲಿ ಶಾಸಕ ವಿ.ಪಾಪಣ್ಣ ಅವರು ವಿತರಿಸಿದ್ದ 870 ನಿವೇಶನಗಳ ಫಲಾನುಭವಿಗಳಿಗೆ ಹಕ್ಕು ಪತ್ರ ಮಾತ್ರ ಕೈಸೇರಿದ್ದು, ನಗರಸಭೆ ಆಡಳಿತ ಮಂಡಳಿ ಈವರಗೆ ಯಾವುದೇ ಕ್ರಮ ಕೈಗೊಳ್ಳದೆ ಫಲಾನುಭವಿಗಳು ಅತಂತ್ರ ಪರಿಸ್ಥಿತಿಯಲ್ಲಿದ್ದಾರೆ’ ಎಂದರು.</p>.<p>‘ಇಂದಿನ ಶಾಸಕರು ಪುನರ್ ಪರಿಶೀಲನೆ ನಡೆಸಿದ ಬಳಿಕ ನಿವೇಶನ ಗುರುತಿಸಿ ಫಲಾನುಭವಿಗೆ ನೀಡುವ ಬಗ್ಗೆ ಅಧಿಕಾರಿಗಳು ತಿಳಿಸಿದ್ದು, ಈ ಹಿಂದಿನ ಜಿಲ್ಲಾಧಿಕಾರಿ, ತಹಶೀಲ್ದಾರ್ ಮತ್ತು ಅಂದಿನ ಶಾಸಕರು ನೀಡಿದ ಆದೇಶ ಪತ್ರಕ್ಕೆ ಬೆಲೆ ಇಲ್ಲದಂತೆ ವರ್ತಿಸುತ್ತಿದ್ದಾರೆ. ಅಂದಿನ ಟೌನ್ ಪ್ಲಾನ್ ಸಮ್ಮತಿಸಿ ಫಲಾನುಭವಿಗಳಿಗೆ ನೀಡಿದ ಮೇಲೆ ಯಾವುದೇ ಮರುಪರಿಶೀಲನೆ ಅನಗತ್ಯ. ಫಲಾನುಭವಿಗಳಿಗೆ ಹಕ್ಕುಪತ್ರಕ್ಕೆ ಅನುಗುಣವಾಗಿ ನಿವೇಶನ ಗುರುತಿಸಿ ಹಸ್ತಾಂತರಿಸಬೇಕು’ ಎಂದು ಆಗ್ರಹಿಸಿದರು.</p>.<p>ಅಹಿಂದ ರೈತ ಸಂಘದ ಅಧ್ಯಕ್ಷ ಶಿವಶೇಖರ್ ಮಾತನಾಡಿ, ‘ಅಧಿಕಾರಿಗಳಲ್ಲಿ ಅಸ್ಪಷ್ಟತೆ ಈ ಎಲ್ಲಾ ಸಮಸ್ಯೆಗಳಿಗೆ ಕಾರಣವಾಗಿದ್ದು, ಅಧಿಕಾರಿಗಳು ಜನಪ್ರತಿನಿಧಿಗಳಿಗೆ ಸೂಕ್ತ ಮಾಹಿತಿ ನೀಡಿ ಮಂಜೂರಾಗಿರುವ ನಿವೇಶನವನ್ನು ಹಸ್ತಾಂತರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ನೈಜ ಸಮಸ್ಯೆ ಕುರಿತು ಚರ್ಚಿಸಿ ಕಾನೂನು ವ್ಯಾಪ್ತಿಯೊಳಗೆ ಬಗೆಹರಿಸಿ ಫಲಾನುಭವಿಗಳಿಗೆ ನಿವೇಶನ ನೀಡಬೇಕು, ನಗರಸಭೆ ವ್ಯಾಪ್ತಿಯ ಖಾಸಗಿ ಬಡಾವಣೆಗಳಲ್ಲಿ ಸಮಸ್ಯೆ ಬಗೆಹರಿಯುತ್ತಿದೆ, ಆದರೆ ನಗರಸಭೆ ವ್ಯಾಪ್ತಿಯ ಬಡಾವಣೆಯಲ್ಲಿ ಏಕೆ ಸಮಸ್ಯೆ ಬಗೆಹರಿಯುತ್ತಿಲ್ಲ’ ಎಂದರು.</p>.<p>‘ನಗರಸಭೆ ಆಯುಕ್ತರು ಜನಪರ ಸೇವೆಗೆ ಒತ್ತು ನೀಡದೆ ಉನ್ನತಾಧಿಕಾರಿ ಮತ್ತು ಜನಪ್ರತಿನಿಧಿಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಜನಸಾಮಾನ್ಯರ ಪರವಾಗಿ ಅಧಿಕಾರಿಗಳು ಆಡಳಿತ ನಡೆಸಬೇಕು. ಇಲ್ಲವಾದಲ್ಲಿ ಪ್ರತಿಭಟನೆ ತನ್ನದೇ ಸ್ವರೂಪ ಪಡೆದುಕೊಳ್ಳಲಿದೆ’ ಎಂದು ಇಂಟೆಕ್ ರಾಜು ಹೇಳಿದರು.</p>.<p>‘ನಗರಸಭೆಗೆ ಮೂರು ಬಾರಿ ಆಯ್ಕೆಯಾಗಿದ್ದ ಹುಣಸೂರು ನಾಗರೀಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸ್ವಾಮೀಗೌಡ ಅವರು ಅಧಿಕಾರದಲ್ಲಿದ್ದಾಗ ಒಮ್ಮೆಯೂ ಈ ವಿಷಯದ ಬಗ್ಗೆ ಚರ್ಚಿಸಲಿಲ್ಲ, ಚುನಾವಣೆ ಗುರಿಯಾಗಿಟ್ಟುಕೊಂಡು ಸ್ವಾರ್ಥ ರಾಜಕೀಯಕ್ಕೆ ಧ್ವನಿ ಇಲ್ಲದ ಫಲಾನುಭವಿಗಳನ್ನು ಬಲಿಪಶು ಮಾಡಲಾಗಿದೆ’ ಎಂದು ಜೆಡಿಎಸ್ ಮುಖಂಡ ಸತೀಶ್ ಕುಮಾರ್ ಆರೋಪಿಸಿದರು.</p>.<p>ಪ್ರತಿಭಟನೆಯಲ್ಲಿ ಸುರೇಶ್, ಸನಾವುಲ್ಲಾ, ವೆಂಕಟೇಶ್, ಶ್ರೀನಿವಾಸ್, ಸೋಮಶೇಖರ್, ಸತೀಶ್, ಚಿದಾನಂದ, ಮಹದೇವ್, ಸಣ್ಣಯ್ಯ, ಜಗದೀಶ್, ಪರಶುರಾಮ್, ಶಿವಕುಮಾರ್, ಗೋಪಿ, ಸುರೇಶ್ ತಿಟ್ಟು, ಸಲೀಂ, ಸಂತೋಷ್, ಲಕ್ಷ್ಮಣ್, ಪಾಪನಾಯಕ, ಮಯೂರ ಭಾಗವಹಿಸಿದ್ದರು.</p>.<div><blockquote>ನಗರಸಭೆ ವ್ಯಾಪ್ತಿಯಲ್ಲಿ ಈ ಹಿಂದೆ ವಿತರಿಸಿದ ನಿವೇಶನ ಸಂಬಂಧ ಈಗಾಗಲೇ ದಾಖಲೆಗಳ ಪರಿಶೀಲನೆ ನಡೆದಿದೆ. ಈ ನಡುವೆ ಸ್ಥಳಕ್ಕೆ ಭೇಟಿ ನೀಡಿ ನಿವೇಶನದಲ್ಲಿ ಬೆಳೆದಿದ್ದ ಗಿಡಗಂಟಿ ತೆರವುಗೊಳಿಸಿ ಅಭಿವೃದ್ಧಿಗೆ ಕ್ರಮವಹಿಸಿದ್ದೇವೆ. </blockquote><span class="attribution">ಮಾನಸ ನಗರಸಭೆ ಆಯುಕ್ತೆ</span></div>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>