<p><strong>ಮೈಸೂರು:</strong> ಜಿಲ್ಲೆಯಲ್ಲಿ ಗುರುವಾರ ಮತ್ತಿಬ್ಬರಿಗೆ ಕೋವಿಡ್ 19 ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.</p>.<p>‘ಮಹಾರಾಷ್ಟ್ರದಿಂದ ಹಿಂದಿರುಗಿರುವ 39 ವರ್ಷದ ಮಹಿಳೆ ಮತ್ತು ರೋಗಿ–4219ರ ಸಂಪರ್ಕಕ್ಕೆ ಬಂದ ಐದು ವರ್ಷದ ಬಾಲಕಿಗೆ ಕೋವಿಡ್ ಇರುವುದು ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.</p>.<p>‘ಆರು ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 11ಕ್ಕೆ ಇಳಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣಗಳು ದೃಢಪಟ್ಟಿದ್ದು, 112 ಮಂದಿ ಗುಣಮುಖರಾಗಿದ್ದಾರೆ. 1,657 ಮಂದಿ ಹೋಂ ಕ್ವಾರಂಟೈನ್ನಲ್ಲಿ ಹಾಗೂ 132 ಮಂದಿ ಫೆಸಿಲಿಟಿ ಕ್ವಾರಂಟೈನ್ನಲ್ಲಿ ಇದ್ದಾರೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.</p>.<p><strong>ಮಾಹಿತಿ ನೀಡಲು ಮನವಿ: </strong>ಕೋವಿಡ್ ದೃಢಪಟ್ಟ ರೋಗಿ–7285 ಅವರು ಜೂನ್ 11 ರಂದು ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ರಾಜಹಂಸ ಬಸ್ಸಿನಲ್ಲಿ (ಕೆಎ-09-ಎಫ್-4663) ಮೈಸೂರಿಗೆ ಪ್ರಯಾಣ ಮಾಡಿದ್ದರು. ಆ ಬಸ್ಸಿನಲ್ಲಿ ಪ್ರಯಾಣಿಸಿರುವ ಪ್ರಯಾಣಿಕರು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ ಸಂಖ್ಯೆಗೆ 0821-2423800 ಕರೆ ಮಾಡಿ ಮಾಹಿತಿ ನೀಡುವಂತೆ ಡಿಎಚ್ಒ ಡಾ.ಆರ್.ವೆಂಕಟೇಶ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಜಿಲ್ಲೆಯಲ್ಲಿ ಗುರುವಾರ ಮತ್ತಿಬ್ಬರಿಗೆ ಕೋವಿಡ್ 19 ಇರುವುದು ದೃಢಪಟ್ಟಿದೆ. ಆರು ಮಂದಿ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಮನೆಗೆ ತೆರಳಿದ್ದಾರೆ.</p>.<p>‘ಮಹಾರಾಷ್ಟ್ರದಿಂದ ಹಿಂದಿರುಗಿರುವ 39 ವರ್ಷದ ಮಹಿಳೆ ಮತ್ತು ರೋಗಿ–4219ರ ಸಂಪರ್ಕಕ್ಕೆ ಬಂದ ಐದು ವರ್ಷದ ಬಾಲಕಿಗೆ ಕೋವಿಡ್ ಇರುವುದು ದೃಢಪಟ್ಟಿದೆ’ ಎಂದು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ತಿಳಿಸಿದ್ದಾರೆ.</p>.<p>‘ಆರು ಮಂದಿ ಗುಣಮುಖರಾಗಿದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 11ಕ್ಕೆ ಇಳಿಕೆಯಾಗಿದೆ’ ಎಂದು ಮಾಹಿತಿ ನೀಡಿದರು.</p>.<p>ಜಿಲ್ಲೆಯಲ್ಲಿ ಒಟ್ಟು 123 ಪ್ರಕರಣಗಳು ದೃಢಪಟ್ಟಿದ್ದು, 112 ಮಂದಿ ಗುಣಮುಖರಾಗಿದ್ದಾರೆ. 1,657 ಮಂದಿ ಹೋಂ ಕ್ವಾರಂಟೈನ್ನಲ್ಲಿ ಹಾಗೂ 132 ಮಂದಿ ಫೆಸಿಲಿಟಿ ಕ್ವಾರಂಟೈನ್ನಲ್ಲಿ ಇದ್ದಾರೆ ಎಂದು ಜಿಲ್ಲಾಡಳಿತದ ಮಾಹಿತಿ ತಿಳಿಸಿದೆ.</p>.<p><strong>ಮಾಹಿತಿ ನೀಡಲು ಮನವಿ: </strong>ಕೋವಿಡ್ ದೃಢಪಟ್ಟ ರೋಗಿ–7285 ಅವರು ಜೂನ್ 11 ರಂದು ಬೆಂಗಳೂರು ಸ್ಯಾಟಲೈಟ್ ಬಸ್ ನಿಲ್ದಾಣದಿಂದ ರಾಜಹಂಸ ಬಸ್ಸಿನಲ್ಲಿ (ಕೆಎ-09-ಎಫ್-4663) ಮೈಸೂರಿಗೆ ಪ್ರಯಾಣ ಮಾಡಿದ್ದರು. ಆ ಬಸ್ಸಿನಲ್ಲಿ ಪ್ರಯಾಣಿಸಿರುವ ಪ್ರಯಾಣಿಕರು ಹತ್ತಿರದ ಸರ್ಕಾರಿ ಆಸ್ಪತ್ರೆ ಅಥವಾ ಜಿಲ್ಲಾಧಿಕಾರಿ ಕಚೇರಿ ಕಂಟ್ರೋಲ್ ರೂಂ ಸಂಖ್ಯೆಗೆ 0821-2423800 ಕರೆ ಮಾಡಿ ಮಾಹಿತಿ ನೀಡುವಂತೆ ಡಿಎಚ್ಒ ಡಾ.ಆರ್.ವೆಂಕಟೇಶ್ ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>