ಮೈಸೂರು: ಬನ್ನೂರು ಸಮೀಪದ ಮೆಣಸಿಕ್ಯಾತನಹಳ್ಳಿಯ ರೈತ ಕೃಷ್ಣೇಗೌಡ (55) ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಭತ್ತದ ಬೆಳೆ ಬೆಳೆಯಲು ಇವರು ಸಾಲ ಮಾಡಿದ್ದರು. ಆದರೆ, ಭತ್ತಕ್ಕೆ ಬೆಂಕಿ ರೋಗ ಕಾಣಿಸಿಕೊಂಡಿದೆ. ಇದರಿಂದ ನಷ್ಟವಾಗಿ ಸಾಲ ತೀರಿಸಲು ಆಗುವುದಿಲ್ಲ ಎಂದು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.