<p><strong>ಮೈಸೂರು</strong>: ‘ಕೇಂದ್ರ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಸೂಕ್ತ ಆದ್ಯತೆ ದೊರೆತಿಲ್ಲ’ ಎಂದು ಮೈಸೂರು ವಿಶ್ವವಿದ್ಯಾಲಯದ ಯೋಜನಾ ಆಯೋಗದ ಸಂದರ್ಶಕ ಮುಖ್ಯಸ್ಥ ರವಿ ಭಂಡಾರಿ ಹೇಳಿದರು.</p>.<p>ನಗರದ ಜಯಲಕ್ಷ್ಮೀಪುರಂನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಐಕ್ಯೂಎಸಿ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಕೇಂದ್ರ ಬಜೆಟ್ 2026–27 ಒಂದು ಅವಲೋಕನ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತ ಮೂಲತಃ ಕೃಷಿ ಆಧಾರಿತ ರಾಷ್ಟ್ರವಾಗಿದ್ದು, ಶೇ 54ರಷ್ಟು ಜನರು ಈ ಕಸುಬನ್ನು ಅವಲಂಬಿಸಿದ್ದಾರೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಆದ್ಯತೆಯನ್ನು ಬಜೆಟ್ನಲ್ಲಿ ಕೊಟ್ಟಿಲ್ಲ. ಭವಿಷ್ಯದಲ್ಲಿ ಹೆಚ್ಚಾಗಲಿರುವ ಜನಸಂಖ್ಯೆಗೆ ಅಗತ್ಯವಾದ ಆಹಾರದ ಪೂರೈಕೆಗೆ ಹೆಚ್ಚು ಒತ್ತು ನೀಡದಿರುವುದು ವಿಷಾದದ ಸಂಗತಿ’ ಎಂದು ವಿಶ್ಲೇಷಿಸಿದರು.</p>.<p>‘ಪ್ರಸ್ತುತ ಜಾಗತಿಕ ಮಟ್ಟದಲ್ಲಿ ದೇಶವು ಮೊದಲ ಸ್ಥಾನದತ್ತ ಮುಖ ಮಾಡುತ್ತಿರುವುದು ಖುಷಿಯ ವಿಚಾರ. ಆದರೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಯ ದೃಷ್ಟಿಯಿಂದ ಸಾರ್ವಜನಿಕ ಸರಕುಗಳ ಉತ್ಪಾದನೆಗೆ ಮತ್ತು ಅದನ್ನು ಕೊಳ್ಳುವ ಜನಸಾಮಾನ್ಯರ ಕೌಟುಂಬಿಕ ಆದಾಯವನ್ನು ಹೆಚ್ಚಿಸುವುದಕ್ಕೆ ಈ ಬಾರಿಯ ಬಜೆಟ್ ಆದ್ಯತೆ ನೀಡಿಲ್ಲ’ ಎಂದು ಹೇಳಿದರು.</p>.<p>‘ನಿಜವಾದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧನೆ ಆಗಬೇಕಾದರೆ ಮನುಷ್ಯಕೇಂದ್ರತ ಬಜೆಟ್ ಮಂಡನೆ ಆಗಬೇಕು. ಆಗ ಮಾತ್ರ ದೇಶದಲ್ಲಿ ನಿರುದ್ಯೋಗ, ಬಡತನ, ಅಸಮಾನತೆ, ಅಪೌಷ್ಟಿಕತೆ ಮೊದಲಾದ ಸಮಸ್ಯೆಗಳನ್ನು ನಾಶಪಿಡಿಸಿ ಪ್ರಗತಿ ಸಾಧಿಸಬಹುದು’ ಎಂದು ಪ್ರತಿಪಾದಿಸಿದರು.</p>.<p>ಅಂತಿಮ ಬಿಎ ವಿದ್ಯಾರ್ಥಿಗಳಾದ ಕಲ್ಯಾಣ್ಕುಮಾರ್ ಮತ್ತು ಸಂಜೀತ್ ಸಂವಾದ ನಡೆಸಿಕೊಟ್ಟರು.</p>.<p>ಪ್ರಾಂಶುಪಾಲರಾದ ಬಿ.ಆರ್. ಜಯಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವೆಂಕಟಲಕ್ಷ್ಮಿ ಎಂ.ಎನ್., ಕಾಲೇಜಿನ ಶೈಕ್ಷಣಿಕ ನಿರ್ವಹಣಾಧಿಕಾರಿ ಎಸ್.ಆರ್. ರಮೇಶ್, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪುಷ್ಪಾರಾಣಿ ಪಿ.ಜಿ., ಅಧ್ಯಾಪಕರಾದ ಸಿದ್ದಪ್ಪ ಆರ್. ಹಾಗೂ ಚಲುವೇಗೌಡ ಎಸ್.ಎಂ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಸೂಕ್ತ ಆದ್ಯತೆ ದೊರೆತಿಲ್ಲ’ ಎಂದು ಮೈಸೂರು ವಿಶ್ವವಿದ್ಯಾಲಯದ ಯೋಜನಾ ಆಯೋಗದ ಸಂದರ್ಶಕ ಮುಖ್ಯಸ್ಥ ರವಿ ಭಂಡಾರಿ ಹೇಳಿದರು.</p>.<p>ನಗರದ ಜಯಲಕ್ಷ್ಮೀಪುರಂನ ಎಸ್ಬಿಆರ್ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನಲ್ಲಿ ಅರ್ಥಶಾಸ್ತ್ರ ವಿಭಾಗದಿಂದ ಐಕ್ಯೂಎಸಿ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ‘ಕೇಂದ್ರ ಬಜೆಟ್ 2026–27 ಒಂದು ಅವಲೋಕನ’ ಎಂಬ ಸಂವಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>‘ಭಾರತ ಮೂಲತಃ ಕೃಷಿ ಆಧಾರಿತ ರಾಷ್ಟ್ರವಾಗಿದ್ದು, ಶೇ 54ರಷ್ಟು ಜನರು ಈ ಕಸುಬನ್ನು ಅವಲಂಬಿಸಿದ್ದಾರೆ. ಆದರೆ, ಅದಕ್ಕೆ ಸಂಬಂಧಿಸಿದಂತೆ ಆದ್ಯತೆಯನ್ನು ಬಜೆಟ್ನಲ್ಲಿ ಕೊಟ್ಟಿಲ್ಲ. ಭವಿಷ್ಯದಲ್ಲಿ ಹೆಚ್ಚಾಗಲಿರುವ ಜನಸಂಖ್ಯೆಗೆ ಅಗತ್ಯವಾದ ಆಹಾರದ ಪೂರೈಕೆಗೆ ಹೆಚ್ಚು ಒತ್ತು ನೀಡದಿರುವುದು ವಿಷಾದದ ಸಂಗತಿ’ ಎಂದು ವಿಶ್ಲೇಷಿಸಿದರು.</p>.<p>‘ಪ್ರಸ್ತುತ ಜಾಗತಿಕ ಮಟ್ಟದಲ್ಲಿ ದೇಶವು ಮೊದಲ ಸ್ಥಾನದತ್ತ ಮುಖ ಮಾಡುತ್ತಿರುವುದು ಖುಷಿಯ ವಿಚಾರ. ಆದರೂ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ದಿಯ ದೃಷ್ಟಿಯಿಂದ ಸಾರ್ವಜನಿಕ ಸರಕುಗಳ ಉತ್ಪಾದನೆಗೆ ಮತ್ತು ಅದನ್ನು ಕೊಳ್ಳುವ ಜನಸಾಮಾನ್ಯರ ಕೌಟುಂಬಿಕ ಆದಾಯವನ್ನು ಹೆಚ್ಚಿಸುವುದಕ್ಕೆ ಈ ಬಾರಿಯ ಬಜೆಟ್ ಆದ್ಯತೆ ನೀಡಿಲ್ಲ’ ಎಂದು ಹೇಳಿದರು.</p>.<p>‘ನಿಜವಾದ ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಸಾಧನೆ ಆಗಬೇಕಾದರೆ ಮನುಷ್ಯಕೇಂದ್ರತ ಬಜೆಟ್ ಮಂಡನೆ ಆಗಬೇಕು. ಆಗ ಮಾತ್ರ ದೇಶದಲ್ಲಿ ನಿರುದ್ಯೋಗ, ಬಡತನ, ಅಸಮಾನತೆ, ಅಪೌಷ್ಟಿಕತೆ ಮೊದಲಾದ ಸಮಸ್ಯೆಗಳನ್ನು ನಾಶಪಿಡಿಸಿ ಪ್ರಗತಿ ಸಾಧಿಸಬಹುದು’ ಎಂದು ಪ್ರತಿಪಾದಿಸಿದರು.</p>.<p>ಅಂತಿಮ ಬಿಎ ವಿದ್ಯಾರ್ಥಿಗಳಾದ ಕಲ್ಯಾಣ್ಕುಮಾರ್ ಮತ್ತು ಸಂಜೀತ್ ಸಂವಾದ ನಡೆಸಿಕೊಟ್ಟರು.</p>.<p>ಪ್ರಾಂಶುಪಾಲರಾದ ಬಿ.ಆರ್. ಜಯಕುಮಾರಿ ಅಧ್ಯಕ್ಷತೆ ವಹಿಸಿದ್ದರು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥೆ ವೆಂಕಟಲಕ್ಷ್ಮಿ ಎಂ.ಎನ್., ಕಾಲೇಜಿನ ಶೈಕ್ಷಣಿಕ ನಿರ್ವಹಣಾಧಿಕಾರಿ ಎಸ್.ಆರ್. ರಮೇಶ್, ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಪುಷ್ಪಾರಾಣಿ ಪಿ.ಜಿ., ಅಧ್ಯಾಪಕರಾದ ಸಿದ್ದಪ್ಪ ಆರ್. ಹಾಗೂ ಚಲುವೇಗೌಡ ಎಸ್.ಎಂ. ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>