<p><strong>ಮೈಸೂರು</strong>: ‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ವಿಮರ್ಶಿಸದೆ, ವಿರೋಧಿಸುವುದು ಸಮಂಜವಲ್ಲ’ ಎಂದು ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಹೇಳಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ. ಈ ವರ್ಷವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದು, ಈ ಸಂಬಂಧ ಪರ ವಿರೋಧಗಳ ಹೇಳಿಕೆ ಕೇಳಿ ಬಂದಿದೆ. ಸಾಮಾನ್ಯವಾಗಿ ಸ್ವಪಕ್ಷೀಯರು ಬಜೆಟ್ ಹೊಗಳುವುದು, ಪ್ರತಿಪಕ್ಷ ತೆಗಳುವುದು ಸಾಮಾನ್ಯ. ಆದರೆ, ವಿರೋಧಿಸುವವರು ಬಜೆಟ್ ಪರಾಮರ್ಶಿಸಿ ಪ್ರತಿಕ್ರಿಯಿಸಬೇಕು. ಅದು ಆರೋಗ್ಯಕರ ಬೆಳವಣಿಗೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ ಬಂದ ಮೇಲೆ ದೇಶವನ್ನು ಆರು ದಶಕಗಳಿಗೂ ಹೆಚ್ಚು ಕಾಲ ಆಳಿದ್ದ ಕಾಂಗ್ರೆಸ್, ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಅಭಿವೃದ್ಧಿ ಪಥ ಗಮನಿಸಬೇಕು’ ಎಂದಿದ್ದಾರೆ.</p>.<p>‘ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆ ಮೂಲಕ ಜನರ ಬದುಕನ್ನು ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿದೆ. ಈ ಸಾಲಿನ ಬಜೆಟ್ನಲ್ಲೂ ರೈತರು, ಮಹಿಳೆಯರು, ಯುವಕರಿಗೆ ನೆರವಾಗುವ ಯೋಜನೆ ಅನುಷ್ಠಾನಗೊಳಿಸಿದೆ. ₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಿರುವುದು ಐತಿಹಾಸಿಕ ನಿರ್ಣಯ. ಇಂತಹ ಯೋಜನೆ ಕಾಂಗ್ರೆಸ್ ಅವಧಿಯಲ್ಲಿ ಯಾಕೆ ಜಾರಿಗೆ ತರಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಎಲ್ಲ ವರ್ಗದವರ ಪಾಲಿಗೆ ಈ ಬಜೆಟ್ ವರದಾನವಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: ‘ಕೇಂದ್ರ ಸರ್ಕಾರ ಮಂಡಿಸಿರುವ ಬಜೆಟ್ ವಿಮರ್ಶಿಸದೆ, ವಿರೋಧಿಸುವುದು ಸಮಂಜವಲ್ಲ’ ಎಂದು ಬಿಜೆಪಿ ಮುಖಂಡ ಸಂದೇಶ್ ಸ್ವಾಮಿ ಹೇಳಿದ್ದಾರೆ.</p>.<p>‘ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕಳೆದ ಹತ್ತು ವರ್ಷಗಳಿಂದ ಅಭಿವೃದ್ಧಿ ಪರ ಬಜೆಟ್ ಮಂಡಿಸಿದೆ. ಈ ವರ್ಷವು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದು, ಈ ಸಂಬಂಧ ಪರ ವಿರೋಧಗಳ ಹೇಳಿಕೆ ಕೇಳಿ ಬಂದಿದೆ. ಸಾಮಾನ್ಯವಾಗಿ ಸ್ವಪಕ್ಷೀಯರು ಬಜೆಟ್ ಹೊಗಳುವುದು, ಪ್ರತಿಪಕ್ಷ ತೆಗಳುವುದು ಸಾಮಾನ್ಯ. ಆದರೆ, ವಿರೋಧಿಸುವವರು ಬಜೆಟ್ ಪರಾಮರ್ಶಿಸಿ ಪ್ರತಿಕ್ರಿಯಿಸಬೇಕು. ಅದು ಆರೋಗ್ಯಕರ ಬೆಳವಣಿಗೆ’ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.</p>.<p>‘ಸ್ವಾತಂತ್ರ್ಯ ಬಂದ ಮೇಲೆ ದೇಶವನ್ನು ಆರು ದಶಕಗಳಿಗೂ ಹೆಚ್ಚು ಕಾಲ ಆಳಿದ್ದ ಕಾಂಗ್ರೆಸ್, ಕಳೆದ ಒಂದು ದಶಕದಿಂದ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರದ ಅಭಿವೃದ್ಧಿ ಪಥ ಗಮನಿಸಬೇಕು’ ಎಂದಿದ್ದಾರೆ.</p>.<p>‘ಕೇಂದ್ರ ಸರ್ಕಾರ ಅನೇಕ ಜನಪರ ಯೋಜನೆ ಮೂಲಕ ಜನರ ಬದುಕನ್ನು ಉತ್ತಮ ಸ್ಥಿತಿಯತ್ತ ಕೊಂಡೊಯ್ಯುತ್ತಿದೆ. ಈ ಸಾಲಿನ ಬಜೆಟ್ನಲ್ಲೂ ರೈತರು, ಮಹಿಳೆಯರು, ಯುವಕರಿಗೆ ನೆರವಾಗುವ ಯೋಜನೆ ಅನುಷ್ಠಾನಗೊಳಿಸಿದೆ. ₹12 ಲಕ್ಷವರೆಗೆ ಆದಾಯ ತೆರಿಗೆ ವಿನಾಯಿತಿ ನೀಡಿರುವುದು ಐತಿಹಾಸಿಕ ನಿರ್ಣಯ. ಇಂತಹ ಯೋಜನೆ ಕಾಂಗ್ರೆಸ್ ಅವಧಿಯಲ್ಲಿ ಯಾಕೆ ಜಾರಿಗೆ ತರಲಿಲ್ಲ’ ಎಂದು ಪ್ರಶ್ನಿಸಿದ್ದಾರೆ.</p>.<p>‘ಎಲ್ಲ ವರ್ಗದವರ ಪಾಲಿಗೆ ಈ ಬಜೆಟ್ ವರದಾನವಾಗಿದೆ’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>